ಬ್ರೇಕಿಂಗ್ ನ್ಯೂಸ್
10-11-25 08:23 pm HK News Desk ದೇಶ - ವಿದೇಶ
ನವದೆಹಲಿ, ನ.10 : ರಾಜಧಾನಿ ದೆಹಲಿಯ ಕೆಂಪುಕೋಟೆ ಬಳಿ ನಿಲ್ಲಿಸಲಾಗಿದ್ದ ಕಾರಿನಲ್ಲಿ ಪ್ರಬಲ ಬಾಂಬ್ ಸ್ಫೋಟ ಆಗಿದ್ದು, ಸ್ಥಳದಲ್ಲಿದ್ದ ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆಂದು ಶಂಕಿಸಲಾಗಿದೆ. ಸೋಮವಾರ ಸಂಜೆ 6.30ರ ಸುಮಾರಿಗೆ ಘಟನೆ ನಡೆದಿದೆ.
ಆಸುಪಾಸಿನಲ್ಲಿ ಜನ ಇದ್ದಾಗಲೇ ಹಠಾತ್ತಾಗಿ ಬ್ಲಾಸ್ಟ್ ಆಗಿದ್ದು ಸ್ಥಳದಲ್ಲಿ ದೊಡ್ಡ ಸದ್ದಿನೊಂದಿಗೆ ಭಾರೀ ಬೆಂಕಿ ಉಂಟಾಗಿದೆ. ಕೂಡಲೇ ಪೊಲೀಸರು ಮತ್ತು ಅಗ್ನಿಶಾಮಕ ದಳ ಬಂದಿದ್ದು ಬೆಂಕಿ ನಂದಿಸಲು ಮುಂದಾಗಿದೆ. ಘಟನೆಯಲ್ಲಿ 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.






ದೆಹಲಿ, ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದ್ದು, ಭಯೋತ್ಪಾದಕ ಕೃತ್ಯವೇ, ಹೇಗೆ ಸ್ಫೋಟ ಸಂಭವಿಸಿದೆ ಎನ್ನುವ ಮಾಹಿತಿ ಇಲ್ಲ. ಸ್ಥಳದಲ್ಲಿ ಏಳು ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆದಿದೆ. ಪ್ರಬಲ ಸ್ಫೋಟ ಉಂಟಾಗಿದ್ದು, ಆಸುಪಾಸಿನಲ್ಲಿ ನಿಲ್ಲಿಸಿದ್ದ ಕಾರುಗಳ ಗ್ಲಾಸ್ ಒಡೆದು ನುಚ್ಚು ನೂರಾಗಿದೆ. ಕೆಂಪುಕೋಟೆಯ ಮೆಟ್ರೋ ಸ್ಟೇಶನ್ ಬಳಿಯ ಗೇಟ್ ನಂಬರ್ ಒಂದರಲ್ಲಿ ಬ್ಲಾಸ್ಟ್ ಸಂಭವಿಸಿದೆ.
ಕೆಲವು ಮಾಹಿತಿ ಪ್ರಕಾರ, ಎರಡು ಕಡೆ ಸ್ಫೋಟ ಸಂಭವಿಸಿದೆ ಎನ್ನಲಾಗುತ್ತಿದ್ದು ಹಲವರು ಸಾವಿಗೀಡಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಉಗ್ರರ ಕೃತ್ಯವೇ ಆಗಿರುವ ಸಾಧ್ಯತೆ ಇದೆ. ಸೋಮವಾರ ಬೆಳಗ್ಗೆ ಫರೀದಾಬಾದ್ ನಲ್ಲಿ ಭಾರೀ ಪ್ರಮಾಣದ ಆರ್ ಡಿಎಕ್ಸ್ ಸ್ಫೋಟಕಗಳನ್ನು ಪೊಲೀಸರು ಪತ್ತೆ ಮಾಡಿದ್ದರು. ಐಸಿಸ್ ಶಂಕಿತ ಉಗ್ರ ವೈದ್ಯನೊಬ್ಬನ ಮಾಹಿತಿ ಆಧರಿಸಿ ಸ್ಫೋಟಕಗಳನ್ನು ಪತ್ತೆ ಮಾಡಲಾಗಿತ್ತು.
Delhi bomb blast near Red Fort metro station.
— Yanika_Lit (@LogicLitLatte) November 10, 2025
LNJP Hospital confirms: 8 dead.
7 Islamic terrorist arrested with AK-47s, rifles, and explosives. pic.twitter.com/TNV8P0LcrB
A powerful explosion ripped through a car parked beside the road near Kempu Kote, close to the national capital, leaving nine people feared dead in an apparent terror strike on Monday evening around 6:30 pm.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 09:08 pm
HK News Desk
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm