ಬ್ರೇಕಿಂಗ್ ನ್ಯೂಸ್
11-11-25 10:20 pm HK News Desk ದೇಶ - ವಿದೇಶ
ಕಾಸರಗೋಡು, ನ.11: ಸ್ಥಳೀಯ ನಾಗರಿಕರ ಪ್ರತಿಭಟನೆ, ಹೋರಾಟಗಳ ನಡುವೆಯೇ ಕಾಸರಗೋಡು- ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಕುಂಬಳೆ ಆರಿಕ್ಕಾಡಿ ಟೋಲ್ ಪ್ಲಾಜಾದಲ್ಲಿ ನ.12ರ (ಬುಧವಾರ) ಬೆಳಗ್ಗೆ 8 ಗಂಟೆಯಿಂದ ಶುಲ್ಕ ವಸೂಲಿ ಆರಂಭಗೊಳ್ಳಲಿದೆ.
ಈ ಕುರಿತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಈಗಾಗಲೇ ಘೋಷಣೆ ಮಾಡಿದ್ದು, ಜಾಹೀರಾತು ನೀಡುವ ಮೂಲಕ ಜನರಿಗೆ ಮಾಹಿತಿ ನೀಡಿದೆ. ರಾಷ್ಟ್ರೀಯ ಹೆದ್ದಾರಿ ಇಲಾಖೆ ಪ್ರಕಟಿಸಿದ ಅಧಿಸೂಚನೆಯಂತೆ ನ.12ರಂದು ಬೆಳಗ್ಗೆ 8ರಿಂದ ವಾಹನಗಳಿಂದ ಟೋಲ್ ಶುಲ್ಕ ವಸೂಲಿ ಮಾಡಲಿದೆ.
ಇದರಂತೆ ಕಾರು, ಜೀಪು, ವ್ಯಾನ್ ಸಹಿತ ಲಘು ವಾಹನಗಳ ಏಕಮುಖಿ ಸಂಚಾರಕ್ಕೆ ನಾಳೆಯಿಂದ 85 ರೂ. ಶುಲ್ಕ ಪಾವತಿಸಬೇಕು. ಮಿನಿ ಬಸ್ ಸಹಿತ ಇತರ ವಾಹನಗಳಿಗೆ ಸಂಚಾರಕ್ಕೆ 140 ರೂ., ಬಸ್, ಟ್ರಕ್ ಸಹಿತ ಘನ ವಾಹನಕ್ಕೆ 290 ರೂ. ಮತ್ತು ವಾಣಿಜ್ಯ ವಾಹನಗಳಿಗೆ 320 ರೂ. ಶುಲ್ಕ ಸೇರಿದಂತೆ ವಿವಿಧ ಕೆಟಗರಿ ನೀಡಲಾಗಿದೆ. ಟೋಲ್ ಪ್ಲಾಜಾ ಸುತ್ತಲಿನ 20 ಕಿ.ಮೀ ವ್ಯಾಪ್ತಿಯಲ್ಲಿ ವಾಸಿಸುವವರ ವಾಣಿಜ್ಯೇತರ ವಾಹನಗಳಿಗೆ ಪ್ರತಿ ತಿಂಗಳು 340 ರೂ. ಶುಲ್ಕ ನಿಗದಿಗೊಳಿಸಿ ಶುಲ್ಕದಲ್ಲಿ ವಿನಾಯ್ತಿ ನೀಡಿದೆ.
ಟೋಲ್ ಪ್ಲಾಜಾ ವಿರೋಧಿಸಿ ನಾಗರಿಕ ಕ್ರಿಯಾ ಸಮಿತಿ ಕೇರಳ ಹೈಕೋರ್ಟ್ ಮೆಟ್ಟಿಲೇರಿದ್ದು ತಡೆಯಾಜ್ಞೆ ನೀಡಲು ಕೋರಿದೆ. ಇದರ ತೀರ್ಪು ಬುಧವಾರ ಹೊರಬೀಳುವ ಸಾಧ್ಯತೆ ಇದೆ. ಇದಕ್ಕೂ ಮೊದಲೇ ಹೆದ್ದಾರಿ ಇಲಾಖೆ ಶುಲ್ಕ ಸಂಗ್ರಹಕ್ಕೆ ಮುಂದಾಗಿದೆ.
Despite ongoing public protests and opposition, toll collection at the Kumble Arikkadi Toll Plaza on the Kasaragod–Mangaluru National Highway will begin from 8 a.m. on Wednesday, November 12.
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
17-02-26 12:42 pm
Mangaluru Staffer
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
17-02-26 03:03 pm
HK News Desk
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm