ಬ್ರೇಕಿಂಗ್ ನ್ಯೂಸ್
11-11-25 10:20 pm HK News Desk ದೇಶ - ವಿದೇಶ
ಕಾಸರಗೋಡು, ನ.11: ಸ್ಥಳೀಯ ನಾಗರಿಕರ ಪ್ರತಿಭಟನೆ, ಹೋರಾಟಗಳ ನಡುವೆಯೇ ಕಾಸರಗೋಡು- ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಕುಂಬಳೆ ಆರಿಕ್ಕಾಡಿ ಟೋಲ್ ಪ್ಲಾಜಾದಲ್ಲಿ ನ.12ರ (ಬುಧವಾರ) ಬೆಳಗ್ಗೆ 8 ಗಂಟೆಯಿಂದ ಶುಲ್ಕ ವಸೂಲಿ ಆರಂಭಗೊಳ್ಳಲಿದೆ.
ಈ ಕುರಿತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಈಗಾಗಲೇ ಘೋಷಣೆ ಮಾಡಿದ್ದು, ಜಾಹೀರಾತು ನೀಡುವ ಮೂಲಕ ಜನರಿಗೆ ಮಾಹಿತಿ ನೀಡಿದೆ. ರಾಷ್ಟ್ರೀಯ ಹೆದ್ದಾರಿ ಇಲಾಖೆ ಪ್ರಕಟಿಸಿದ ಅಧಿಸೂಚನೆಯಂತೆ ನ.12ರಂದು ಬೆಳಗ್ಗೆ 8ರಿಂದ ವಾಹನಗಳಿಂದ ಟೋಲ್ ಶುಲ್ಕ ವಸೂಲಿ ಮಾಡಲಿದೆ.
ಇದರಂತೆ ಕಾರು, ಜೀಪು, ವ್ಯಾನ್ ಸಹಿತ ಲಘು ವಾಹನಗಳ ಏಕಮುಖಿ ಸಂಚಾರಕ್ಕೆ ನಾಳೆಯಿಂದ 85 ರೂ. ಶುಲ್ಕ ಪಾವತಿಸಬೇಕು. ಮಿನಿ ಬಸ್ ಸಹಿತ ಇತರ ವಾಹನಗಳಿಗೆ ಸಂಚಾರಕ್ಕೆ 140 ರೂ., ಬಸ್, ಟ್ರಕ್ ಸಹಿತ ಘನ ವಾಹನಕ್ಕೆ 290 ರೂ. ಮತ್ತು ವಾಣಿಜ್ಯ ವಾಹನಗಳಿಗೆ 320 ರೂ. ಶುಲ್ಕ ಸೇರಿದಂತೆ ವಿವಿಧ ಕೆಟಗರಿ ನೀಡಲಾಗಿದೆ. ಟೋಲ್ ಪ್ಲಾಜಾ ಸುತ್ತಲಿನ 20 ಕಿ.ಮೀ ವ್ಯಾಪ್ತಿಯಲ್ಲಿ ವಾಸಿಸುವವರ ವಾಣಿಜ್ಯೇತರ ವಾಹನಗಳಿಗೆ ಪ್ರತಿ ತಿಂಗಳು 340 ರೂ. ಶುಲ್ಕ ನಿಗದಿಗೊಳಿಸಿ ಶುಲ್ಕದಲ್ಲಿ ವಿನಾಯ್ತಿ ನೀಡಿದೆ.
ಟೋಲ್ ಪ್ಲಾಜಾ ವಿರೋಧಿಸಿ ನಾಗರಿಕ ಕ್ರಿಯಾ ಸಮಿತಿ ಕೇರಳ ಹೈಕೋರ್ಟ್ ಮೆಟ್ಟಿಲೇರಿದ್ದು ತಡೆಯಾಜ್ಞೆ ನೀಡಲು ಕೋರಿದೆ. ಇದರ ತೀರ್ಪು ಬುಧವಾರ ಹೊರಬೀಳುವ ಸಾಧ್ಯತೆ ಇದೆ. ಇದಕ್ಕೂ ಮೊದಲೇ ಹೆದ್ದಾರಿ ಇಲಾಖೆ ಶುಲ್ಕ ಸಂಗ್ರಹಕ್ಕೆ ಮುಂದಾಗಿದೆ.
Despite ongoing public protests and opposition, toll collection at the Kumble Arikkadi Toll Plaza on the Kasaragod–Mangaluru National Highway will begin from 8 a.m. on Wednesday, November 12.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm