ಬ್ರೇಕಿಂಗ್ ನ್ಯೂಸ್
11-11-25 10:56 pm HK News Desk ದೇಶ - ವಿದೇಶ
ನವದೆಹಲಿ, ನ.12 : ರಾಜಧಾನಿ ದೆಹಲಿಯ ಕೆಂಪು ಕೋಟೆ ಬಳಿ ನಡೆದ ಕಾರು ಬಾಂಬ್ ಸ್ಫೋಟದ ತನಿಖೆ ತೀವ್ರ ಗತಿಯಲ್ಲಿ ನಡೆದಿದ್ದು, ಪ್ರಾಥಮಿಕ ತನಿಖೆಯಲ್ಲಿ ಕಾರು ಸ್ಫೋಟವು ಆತ್ಮಾಹುತಿ ಬಾಂಬ್ ಸ್ಫೋಟವಲ್ಲ. ಬದಲಿಗೆ ಶಂಕಿತ ವ್ಯಕ್ತಿ ಭಯಭೀತನಾಗಿ ಆತುರದಲ್ಲಿದ್ದಾಗ ಸ್ಫೋಟ ಸಂಭವಿಸಿದೆ ಎಂದು ಪೊಲೀಸರು ಶಂಕಿಸಿದ್ದಾರೆ.
ಭದ್ರತಾ ಸಂಸ್ಥೆಗಳು ಭಯೋತ್ಪಾದಕ ಜಾಲಗಳಿಗೆ ಸಂಬಂಧಿಸಿದ ಅನೇಕ ಸ್ಥಳಗಳಲ್ಲಿ ದಾಳಿ ನಡೆಸಿದ್ದು, ಹಲವಾರು ಮಾಹಿತಿಗಳನ್ನು ಕಲೆಹಾಕಿದೆ. ಕಾರು ಸೋಮವಾರ ಸಂಜೆ 3.15ರಿಂದ ಮೂರು ಗಂಟೆ ಕಾಲ ಮಸೀದಿಯೊಂದರ ಪಾರ್ಕಿಂಗ್ ಏರಿಯಾದಲ್ಲಿ ನಿಂತಿದ್ದು ಆನಂತರ 6.30ರ ವೇಳೆಗೆ ಅಲ್ಲಿಂದ ಹೊರಟು ಕೆಂಪು ಕೋಟೆ ಬಳಿಗೆ ಬಂದಿದ್ದ. 6.50ರ ವೇಳೆಗೆ ಕಾರು ಸಿಗ್ನಲ್ ನಲ್ಲಿ ನಿಂತಿದ್ದಾಗಲೇ ಆಕಸ್ಮಿಕ ಎನ್ನುವಂತೆ ಭಾರೀ ಸದ್ದಿನೊಂದಿಗೆ ಬ್ಲಾಸ್ಟ್ ಆಗಿತ್ತು. ಕಾರು ಚಾಲನೆ ಮಾಡುತ್ತಿದ್ದ ವ್ಯಕ್ತಿ ಒತ್ತಡದಿಂದ ತಾನೇ ಸ್ಫೋಟಿಸಿಕೊಂಡಿದ್ದಾನೆಯೇ, ಸ್ಫೋಟಕ ತುಂಬಿದ್ದ ಕಾರಿಗೆ ಬೇರೆ ಕಾರು ತಾಗಿ ಸ್ಫೋಟ ಆಗಿತ್ತೇ ಎನ್ನುವ ಶಂಕೆ ಮೂಡಿದೆ.
ಶಂಕಿತ ವ್ಯಕ್ತಿ ಆತ್ಮಾಹುತಿ ಬಾಂಬ್ ದಾಳಿಯ ರೀತಿ ಸಾಮಾನ್ಯ ಮಾದರಿಯನ್ನು ಅನುಸರಿಸಿಲ್ಲ. ಮತ್ತು ಕಾರನ್ನು ಉದ್ದೇಶಪೂರ್ವಕ ಡಿಕ್ಕಿ ಹೊಡೆಸಿಲ್ಲ ಎಂದು ಪೊಲೀಸ್ ಮೂಲಗಳು ANI ಗೆ ತಿಳಿಸಿವೆ. ಕೆಂಪು ಕೋಟೆ ಬಳಿ ನಡೆದ ಸ್ಫೋಟವು ಗರಿಷ್ಠ ಹಾನಿಯನ್ನುಂಟುಮಾಡುವ ಗುರಿಯನ್ನು ಹೊಂದಿರುವ ಆತ್ಮಹತ್ಯಾ ಬಾಂಬರ್ಗಳ ಕಾರ್ಯಾಚರಣೆ ವಿಧಾನವನ್ನು ಅನುಸರಿಸಿಲ್ಲ ಎಂದು ಹೇಳಿವೆ.
ಬಾಂಬ್ ಅಕಾಲಿಕವಾಗಿ ಬ್ಲಾಸ್ಟ್ ಆಗಿದೆ ಮತ್ತು ಸಂಪೂರ್ಣವಾಗಿ ಅಭಿವೃದ್ಧಿಪಡಿಸಿ ಸ್ಫೋಟಗೊಳಿಸಿರಲಿಲ್ಲ ಎಂದು ಏಜೆನ್ಸಿ ಮೂಲಗಳು ಬಹಿರಂಗಪಡಿಸಿವೆ. ಸ್ಫೋಟ ಸಂಭವಿಸಿದಾಗ ವಾಹನವು ಇನ್ನೂ ಚಲಿಸುತ್ತಿತ್ತು ಮತ್ತು ಭಾರೀ ಸಾವು, ನೋವುಗಳನ್ನು ಉಂಟು ಮಾಡುವಷ್ಟು ಸ್ಫೋಟಕ ಸಜ್ಜುಗೊಂಡಿರಲಿಲ್ಲ ಎಂದು ಅವರು ತಿಳಿಸಿದ್ದಾರೆ.
ರಾಷ್ಟ್ರೀಯ ತನಿಖಾ ಸಂಸ್ಥೆಗೆ ತನಿಖೆ ಹೊಣೆ ವಹಿಸಿದ್ದು ಎಲ್ಲ ಆಯಾಮಗಳಿಂದ ತನಿಖೆ ನಡೆಯಿತ್ತಿದೆ. ಅಲ್ಲದೆ, ಕಾಶ್ಮೀರಿ ವೈದ್ಯ ಮೊಹಮ್ಮದ್ ಉಮರ್ ಬಗ್ಗೆ ಅನುಮಾನ ವ್ಯಕ್ತವಾಗಿದ್ದು ಕಾರಿನಲ್ಲಿದ್ದ ವ್ಯಕ್ತಿ ಆತನೇ ಎಂದು ರೇಖಾಚಿತ್ರವನ್ನು ಬಿಡುಗಡೆ ಮಾಡಿದೆ. ಇದೇ ವೇಳೆ, ಸ್ಫೋಟದಲ್ಲಿ ಅಮೋನಿಯಂ ನೈಟ್ರೇಟ್ ಬಳಕೆಯಾಗಿರುವುದನ್ನು ಎಫ್ಎಸ್ಎಲ್ ತಂಡ ಪತ್ತೆ ಮಾಡಿದೆ.
The investigation into the car explosion near Red Fort in the national capital has gained significant momentum. Preliminary findings suggest that the blast was not a suicide bombing, but rather an accidental explosion triggered when the suspect panicked and acted hastily, according to police sources.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm