ಬ್ರೇಕಿಂಗ್ ನ್ಯೂಸ್
13-11-25 05:13 pm HK Staffer ದೇಶ - ವಿದೇಶ
ಚೆನ್ನೈ, ನ.13: ತರಬೇತಿ ವಿವಾನವೊಂದು ಪುದುಕೊಟ್ಟೈ ಜಿಲ್ಲೆಯ ಕೀರನೂರ್ ಬಳಿಯ ತಿರುಚಿ-ಪುದುಕೊಟ್ಟೈ ರಾಷ್ಟ್ರೀಯ ಹೆದ್ದಾರಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ತಿರುಚಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳ ಪ್ರಕಾರ, ಎಂಜಿನ್ ವೈಫಲ್ಯದಿಂದಾಗಿ ತರಬೇತಿ ಪೈಲಟ್ಗಳು ವಿಮಾನವನ್ನು ರಾಷ್ಟ್ರೀಯ ಹೆದ್ದಾರಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದಾರೆ. ಈ ವೇಳೆ ಪೈಲಟ್ ಮತ್ತು ತರಬೇತಿ ಪೈಲಟ್ ಇಬ್ಬರೂ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ತಾಂತ್ರಿಕ ವೈಫಲ್ಯ ತಿಳಿಯುತ್ತಲೇ ತಿರುಚ್ಚಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳು ಸ್ಥಳೀಯ ಪೊಲೀಸರು ಮತ್ತು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಖಾಸಗಿ ಕಂಪನಿಯ ಒಡೆತನ ಹೊಂದಿರುವ ಮತ್ತು ಸೇಲಂನಿಂದ ಕಾರ್ಯ ನಿರ್ವಹಿಸುತ್ತಿದ್ದ ಸಿಂಗಲ್ ಎಂಜಿನ್ ವಿಮಾನವು ಕಾರೈಕುಡಿ ವಾಯುಪ್ರದೇಶಕ್ಕೆ ತೆರಳುತ್ತಿದ್ದಾಗ ಎಂಜಿನ್ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿತ್ತು. ತಿರುಚ್ಚಿ ವಿಮಾನ ನಿಲ್ದಾಣದ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ವಿಮಾನವನ್ನು ಪರಿಶೀಲಿಸಿದ್ದಾರೆ. ಬಿಝಿ ರೋಡ್ ನಲ್ಲಿ ವಿಮಾನ ಲ್ಯಾಂಡ್ ಆಗುತ್ತಲೇ ಜನರು ಅಚ್ಚರಿಗೀಡಾಗಿದ್ದಾರೆ. ಆದರೆ ಯಾವುದೇ ವಾಹನಕ್ಕೆ ಡಿಕ್ಕಿಯಾಗದೆ ಸೇಫ್ ಆಗಿ ಲ್ಯಾಂಡ್ ಆಗಿದೆ. ರಸ್ತೆಯಲ್ಲಿ ಲ್ಯಾಂಡ್ ಆದ ವಿಮಾನವನ್ನು ನೋಡಲು ಜನರು ಅಚ್ಚರಿಯಿಂದ ಸೇರಿದ್ದಾರೆ.
ಸೆಸ್ನಾ ವಿಮಾನವು ಸೇಲಂನ ಎಕ್ವೀರ್ ಫ್ಲೈಯಿಂಗ್ ಕ್ಲಬ್ ಒಡೆತನದಲ್ಲಿದೆ. ಡಿಜಿಸಿಎ ಅಧಿಕಾರಿಗಳ ತನಿಖೆಯ ನಂತರವೇ ಎಂಜಿನ್ ವೈಫಲ್ಯಕ್ಕೆ ನಿಖರವಾದ ಕಾರಣ ತಿಳಿಯಲಿದೆ.
Single-Engine Training Aircraft Makes Emergency Landing on Trichy-Pudukottai Highway.
— RT_India (@RT_India_news) November 13, 2025
Two people on board were not injured, and there was no damage to the public property when the… pic.twitter.com/zcw20Ooqp7
A training aircraft made an emergency landing on the Tiruchi–Pudukottai National Highway near Keeranur in Pudukottai district, surprising motorists and onlookers on Tuesday.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm