ಬ್ರೇಕಿಂಗ್ ನ್ಯೂಸ್
13-11-25 10:56 pm HK News Desk ದೇಶ - ವಿದೇಶ
ನವದೆಹಲಿ, ನ.13 : ದೆಹಲಿ ಕಾರು ಸ್ಫೋಟ ಪ್ರಕರಣ ಸಂಬಂಧಿಸಿ ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಕಾನ್ಪುರದ ವೈದ್ಯಕೀಯ ವಿದ್ಯಾರ್ಥಿಯನ್ನು ಬಂಧಿಸಿದೆ.
ರಾಜ್ಯ ಸರ್ಕಾರಿ ಸ್ವಾಮ್ಯದ ಗಣೇಶ್ ಶಂಕರ್ ವಿದ್ಯಾರ್ಥಿ ಸ್ಮಾರಕ (ಜಿಎಸ್ವಿಎಂ) ವೈದ್ಯಕೀಯ ಕಾಲೇಜಿನಲ್ಲಿ ಪ್ರಥಮ ವರ್ಷದ ಡಿಎಂ (ಹೃದಯಶಾಸ್ತ್ರ) ವಿದ್ಯಾರ್ಥಿಯಾಗಿರುವ 32 ವರ್ಷದ ಡಾ. ಮೊಹಮ್ಮದ್ ಆರಿಫ್ ಬಂಧನಕ್ಕೊಳಗಾದವ. ಆತನನ್ನು ನಿಗೂಢ ಸ್ಥಳದಿಂದ ವಶಕ್ಕೆ ಪಡೆಯಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.
ಎಟಿಎಸ್ ತಂಡ ನಜೀರಾಬಾದ್ನ ಅಶೋಕ್ ನಗರದಲ್ಲಿರುವ ಆತನ ಬಾಡಿಗೆ ವಸತಿಗೃಹವನ್ನು ಶೋಧಿಸಿ, ವಿಧಿವಿಜ್ಞಾನ ಪರೀಕ್ಷೆಗಾಗಿ ಮೊಬೈಲ್ ಫೋನ್ ಮತ್ತು ಲ್ಯಾಪ್ಟಾಪ್ ವಶಪಡಿಸಿ ವಿಚಾರಣೆಗಾಗಿ ದೆಹಲಿಗೆ ಕರೆದೊಯ್ದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಾಜಿ ಜಿಎಸ್ವಿಎಂ ಪ್ರಾಧ್ಯಾಪಕ ಡಾ. ಶಾಹೀನ್ ಸಯೀದ್ ಅವರ ವಿಚಾರಣೆಯಲ್ಲಿ ಸಿಕ್ಕ ಮಾಹಿತಿ ಆಧಾರದ ಮೇಲೆ ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಮೂಲದ ಆರಿಫ್ ಬಗ್ಗೆ ಎಟಿಎಸ್ ಕಣ್ಗಾವಲು ಇಟ್ಟಿತ್ತು. ಜೈಶ್-ಎ- ಮೊಹಮ್ಮದ್ ಮತ್ತು ಅನ್ಸರ್ ಘಜ್ವತ್-ಉಲ್-ಹಿಂದ್ ಜೊತೆ ಸಂಪರ್ಕ ಹೊಂದಿರುವ ವೈಟ್ ಕಾಲರ್ ಉಗ್ರರ ಜಾಲದ ಭಾಗವಾಗಿ ಅಲ್ ಫಲಾಹ್ ವಿಶ್ವವಿದ್ಯಾಲಯದೊಂದಿಗೆ ಸಂಪರ್ಕ ಹೊಂದಿರುವ ಸಯೀದ್ ಅವರನ್ನು ಬಂಧಿಸಲಾಗಿತ್ತು.
ದೆಹಲಿಯ ಕೆಂಪು ಕೋಟೆ ಬಳಿ ಸ್ಫೋಟದ ದಿನದಂದು, ಆರಿಫ್, ಡಾ.ಶಾಹೀನ್, ತಮ್ಮ ಜಾಲಕ್ಕೆ ಸಂಬಂಧಿಸಿದ ವ್ಯಕ್ತಿಗಳೊಂದಿಗೆ ಪರಸ್ಪರ ದೂರವಾಣಿ ಸಂಪರ್ಕದಲ್ಲಿದ್ದರು. ಅಲ್ಲದೆ, ಇವರು ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದ್ದು ಅನುಮಾನ ಹುಟ್ಟುಹಾಕಿತ್ತು. ಎಟಿಎಸ್ ಸಿಬ್ಬಂದಿ ಅವರ ನಿವಾಸವನ್ನು ತಲುಪಿದಾಗ, ಆರಿಫ್ ತನ್ನ ಫೋನ್ನಿಂದ ಡೇಟಾವನ್ನು ಅಳಿಸಲು ಪ್ರಯತ್ನಿಸುತ್ತಿದ್ದ ಎಂದು ಹೇಳಲಾಗುತ್ತದೆ. ಆದರೆ ಅಷ್ಟರಲ್ಲಿ ಅಧಿಕಾರಿಗಳು ಮೊಬೈಲ್ ವಶಪಡಿಸಿದ್ದಾರೆ.
In a major breakthrough in the Delhi car explosion case, the Uttar Pradesh Anti-Terrorism Squad (ATS) has arrested a medical student from Kanpur suspected of links to terror networks. The arrested individual has been identified as Dr. Mohammad Arif (32), a first-year DM (Cardiology) student at the Ganesh Shankar Vidyarthi Memorial (GSVM) Medical College, a government-run institution in Kanpur.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 10:56 pm
HK News Desk
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:09 pm
Mangalore Correspondent
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm