ಬ್ರೇಕಿಂಗ್ ನ್ಯೂಸ್
14-11-25 11:50 am HK News Desk ದೇಶ - ವಿದೇಶ
ಪಾಟ್ನಾ, ನ.14 : ಬಿಹಾರ ಅಸೆಂಬ್ಲಿ ಚುನಾವಣೆಯ ಮತ ಎಣಿಕೆ ನಡೆದಿದ್ದು, ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟ ಕ್ಲೀನ್ ಸ್ವೀಪ್ ಸಾಧನೆಯೊಂದಿಗೆ ಭರ್ಜರಿ ಜಯಭೇರಿ ಬಾರಿಸುವತ್ತ ಮುನ್ನುಗ್ಗಿದೆ. ಬೆಳಗ್ಗೆ 11 ಗಂಟೆ ವರೆಗಿನ ಮಾಹಿತಿಯಂತೆ, ಎನ್ ಡಿಎ ಕೂಟ 190 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಆರ್ ಜೆಡಿ- ಕಾಂಗ್ರೆಸ್ ನೇತೃತ್ವದ 50 ಕ್ಷೇತ್ರಗಳಲ್ಲಿ ಮುನ್ನಡೆ ಗಳಿಸಿದೆ.
ಎನ್ ಡಿಎ ಕೂಟದಲ್ಲಿ ಬಿಜೆಪಿ 82, ಜೆಡಿಯು 80, ಎಲ್ ಜೆಪಿ 22, ಎಚ್ ಎಎಂ 4, ಆರ್ ಎಲ್ ಎಂ 2 ಕ್ಷೇತ್ರಗಳಲ್ಲಿ ಮುನ್ನಡೆ ಗಳಿಸಿದೆ. ತೇಜಸ್ವಿ ಯಾದವ್ ನೇತೃತ್ವದ ಆರ್ ಜೆಡಿ 35, ಕಾಂಗ್ರೆಸ್ 6 ಕ್ಷೇತ್ರಗಳಲ್ಲಷ್ಟೇ ಮುನ್ನಡೆ ಸಾಧಿಸಿದೆ. ಎಡ ಪಕ್ಷಗಳು ಎಂಟು ಕ್ಷೇತ್ರಗಳಲ್ಲಿ ಮುನ್ನಡೆ ಹೊಂದಿದೆ.

ಬಿಹಾರದ 243 ಸದಸ್ಯ ಬಲದ ಅಸೆಂಬ್ಲಿಗೆ ನ.6 ಮತ್ತು 11ರಂದು ಎರಡು ಹಂತದಲ್ಲಿ ಚುನಾವಣೆ ನಡೆದಿತ್ತು. ಇತಿಹಾಸದಲ್ಲೇ ಮೊದಲು ಎನ್ನುವಂತೆ ಈ ಬಾರಿ ಬಿಹಾರದಲ್ಲಿ 67 ಶೇ. ಮತದಾನ ನಡೆದಿತ್ತು. 2005ರ ಬಳಿಕ ನಿರಂತರ ನಾಲ್ಕು ಬಾರಿ ಸಿಎಂ ಆಗಿರುವ ನಿತೀಶ್ ಕುಮಾರ್ 5ನೇ ಬಾರಿಗೆ ಗದ್ದುಗೆ ಹಿಡಿಯುತ್ತಾರಾ ಅನ್ನುವ ನಿರೀಕ್ಷೆಯಿತ್ತು. ಈ ಬಾರಿ ಬಿಜೆಪಿ ಅತಿ ಹೆಚ್ಚು ಸ್ಥಾನಗಳೊಂದಿಗೆ ಅತಿ ದೊಡ್ಡ ಪಕ್ಷವಾಗಿ ಮೂಡಿಬಂದಿದ್ದು ಸಿಎಂ ಯಾರಾಗುತ್ತಾರೆ ಎನ್ನುವ ಕುತೂಹಲ ಇದೆ.
243 ಕ್ಷೇತ್ರಗಳ ಪೈಕಿ 190ಕ್ಕೂ ಹೆಚ್ಚು ಸ್ಥಾನಗಳಷ್ಟು ಮುನ್ನಡೆಯೊಂದಿಗೆ ಅತಿ ದೊಡ್ಡ ಕ್ಲೀನ್ ಸ್ವೀಪ್ ಸಾಧನೆಯನ್ನು ಬಿಜೆಪಿ ಮೈತ್ರಿಕೂಟ ಮಾಡುವ ಲಕ್ಷಣ ಕಂಡುಬಂದಿದೆ. ಈ ಫಲಿತಾಂಶ 2020ರಲ್ಲಿ ಬಂದಿದ್ದ ಸಾಧನೆಯನ್ನೂ ಮೀರಿಸಿದ್ದು ಬಿಜೆಪಿ ಪಾಲಿಗೆ ದೊಡ್ಡ ಪ್ಲಸ್ ಪಾಯಿಂಟ್ ಆಗಿದೆ. ಕಾಂಗ್ರೆಸ್ ಪಾಲಿಗೆ ಅತಿ ಹೀನಾಯ ಫಲಿತಾಂಶ ಇದಾಗಿದ್ದು ಬಿಹಾರದಲ್ಲಿ ಒಂದಂಕಿಗೆ ಇಳಿದಿರುವುದು ಆ ಪಕ್ಷದ ಅಧೋಗತಿಯನ್ನು ತೋರಿಸಿದೆ. ಈ ಬಾರಿ ಭಾರೀ ನಿರೀಕ್ಷೆ ಮೂಡಿಸಿದ್ದ ಪ್ರಶಾಂತ ಕಿಶೋರ್ ಅವರ ಪಕ್ಷವು ಒಂದು ಕ್ಷೇತ್ರದಲ್ಲಿ ಮಾತ್ರ ಮುನ್ನಡೆಯನ್ನು ತೋರಿಸಿದ್ದು, ಮತ ವಿಭಜನೆ ಮಾಡುವುದಕ್ಕೂ ಸಫಲವಾಗಿಲ್ಲ.
The counting of votes for the Bihar Assembly elections is underway, and the NDA alliance led by the BJP is heading for a massive clean sweep, registering an overwhelming lead. As of 11:00 AM, the NDA is leading in 190 constituencies, while the RJD–Congress alliance is ahead in just 50 seats.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm