ಬ್ರೇಕಿಂಗ್ ನ್ಯೂಸ್
17-11-25 06:13 pm HK News Desk ದೇಶ - ವಿದೇಶ
ನವದೆಹಲಿ, ನ.17 : ಮೆಕ್ಕಾದಿಂದ ಮದೀನಾಕ್ಕೆ ತೆರಳುತ್ತಿದ್ದ ಉಮ್ರಾ ಯಾತ್ರಿಕರಿದ್ದ ಬಸ್ಸಿಗೆ ಡಿಸೇಲ್ ಟ್ಯಾಂಕರ್ ಡಿಕ್ಕಿ ಹೊಡೆದು ಬೆಂಕಿ ಹತ್ತಿಕೊಂಡ ಘಟನೆ ನಡೆದಿದ್ದು ಹೈದರಾಬಾದ್ ಮೂಲದ 45 ಮಂದಿ ಭಾರತೀಯರು ಸಾವನಪ್ಪಿದ್ದಾರೆ.
ಭಾರತೀಯ ಕಾಲಮಾನ ಸೋಮವಾರ ನಸುಕಿನ 1.30ರ ಸುಮಾರಿಗೆ ಅಪಘಾತ ಸಂಭವಿಸಿದ್ದು, ಬಸ್ಸಿನಲ್ಲಿ ತೆಲಂಗಾಣದಿಂದ ತೆರಳಿದ್ದ 46 ಮಂದಿ ಇದ್ದರು. ಒಬ್ಬರು ಮಾತ್ರ ಅಪಾಯದಿಂದ ಪಾರಾಗಿದ್ದಾರೆ.
![]()
ಅರೇಬಿಯಾದ ಸ್ಥಳೀಯ ಮಾಧ್ಯಮಗಳ ಪ್ರಕಾರ, ಉಮ್ರಾ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಬಸ್ ಮದೀನಾದಿಂದ 25 ಕಿಮೀ ದೂರದಲ್ಲಿ ಡೀಸೆಲ್ ಟ್ಯಾಂಕರ್ಗೆ ಡಿಕ್ಕಿ ಹೊಡೆದಿದೆ. ಡೀಸೆಲ್ ಟ್ಯಾಂಕರ್ ಆಗಿದ್ದರಿಂದಾಗಿ ಬೆಂಕಿ ಹತ್ತಿಕೊಂಡಿದ್ದು ಎಸಿ ಬಸ್ ಕೆಲವೇ ಹೊತ್ತಿನಲ್ಲಿ ಹೊತ್ತಿ ಉರಿದಿದೆ. ಈ ವೇಳೆ, ಪ್ರಯಾಣಿಕರು ನಿದ್ರಿಸುತ್ತಿದ್ದರು, ಹಾಗಾಗಿ ಬಸ್ ಬೆಂಕಿಗೆ ಆಹುತಿಯಾದ ಸಂದರ್ಭದಲ್ಲಿ ಪಾರಾಗಲು ಆಗಿರಲಿಲ್ಲ. ಬಲಿಯಾದವರಲ್ಲಿ ಕನಿಷ್ಠ 20 ಮಹಿಳೆಯರು ಮತ್ತು 11 ಮಕ್ಕಳು ಸೇರಿದ್ದಾರೆ. ಬಸ್ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಬಲಿಪಶುಗಳನ್ನು ಗುರುತಿಸುವುದು ಅತ್ಯಂತ ಸವಾಲಿನ ಕೆಲಸವಾಗಿದೆ ಎಂದು ರಕ್ಷಣಾ ತಂಡಗಳು ತಿಳಿಸಿವೆ.
ಘಟನೆ ಬಗ್ಗೆ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಆಘಾತ ವ್ಯಕ್ತಪಡಿಸಿದ್ದು ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ್ದಾರೆ. ಮೃತರಲ್ಲಿ 18 ಮಂದಿ ಹೈದರಾಬಾದ್ ಬಳಿಯ ಮಲ್ಲೇಪಳ್ಳಿ ಘಾಟ್ ಏರಿಯಾದವರು ಎಂದು ತಿಳಿದುಬಂದಿದೆ.
A tragic accident near Medina claimed the lives of 45 Umrah pilgrims from Hyderabad when their bus collided with a diesel tanker and caught fire. The incident occurred around 1:30 AM IST while the pilgrims were travelling from Mecca to Medina. The AC bus went up in flames within minutes, leaving only one survivor out of 46 passengers.
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
17-02-26 12:42 pm
Mangaluru Staffer
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
17-02-26 03:03 pm
HK News Desk
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm