ಬ್ರೇಕಿಂಗ್ ನ್ಯೂಸ್
17-11-25 10:58 pm HK News Desk ದೇಶ - ವಿದೇಶ
ಢಾಕಾ, ನ.17 : ಮಾನವ ಹಕ್ಕು ಉಲ್ಲಂಘನೆ ಪ್ರಕರಣದಲ್ಲಿ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರನ್ನು ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ ದೋಷಿ ಎಂದು ತೀರ್ಪು ನೀಡಿದ್ದು ಅವರಿಗೆ ಗಲ್ಲು ಶಿಕ್ಷೆ ವಿಧಿಸಿದೆ.
ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿಯ ತ್ರಿಸದಸ್ಯ ನ್ಯಾಯಪೀಠವು ಶೇಖ್ ಹಸೀನಾ ಅವರ ಮೇಲಿರುವ ಆರೋಪ ಸಾಬೀತಾಗಿದೆ ಎಂದು ಪ್ರಕಟಿಸಿದ್ದು ಶೇಖ್ ಹಸೀನಾ ಮಾನವ ಹಕ್ಕುಗಳ ಅಪರಾಧ ಎಸಗಿದ್ದಾರೆ. ಇದು ಗರಿಷ್ಠ ಶಿಕ್ಷೆಗೆ ಅರ್ಹವಾಗಿರುವ ಪ್ರಕರಣ ಎಂದು ತೀರ್ಪಿನಲ್ಲಿ ಉಲ್ಲೇಖಿಸಿದೆ.

ಕಳೆದ ವರ್ಷ ವಿದ್ಯಾರ್ಥಿಗಳ ನೇತೃತ್ವದಲ್ಲಿ ದೇಶವ್ಯಾಪಿ ಭುಗಿಲೆದ್ದ ದಂಗೆಗಳ ಮೇಲಿನ ‘ಮಾರಕ ದಮನ’ಕ್ಕೆ ಹಸೀನಾ ನೇರ ಸೂಚನೆ ನೀಡಿದ್ದಾಗಿ ನ್ಯಾಯಾಲಯವು ಹೇಳಿದೆ. ಶೇಖ್ ಹಸೀನಾ ಅವರ ಈ ನಡೆಯಿಂದ ಬಾಂಗ್ಲಾದೇಶದಲ್ಲಿ ಸಾಕಷ್ಟು ಹಿಂಸಾಚಾರ ನಡೆದಿತ್ತು. ನೂರಾರು ಪ್ರಜೆಗಳು ಸಾವನ್ನಪ್ಪಿದ್ದರು. ಪ್ರಕರಣದಲ್ಲಿ ಶೇಖ್ ಹಸೀನಾರನ್ನು ಪ್ರಮುಖ ಆರೋಪಿಯಾಗಿಸಲಾಗಿತ್ತು.
ಶೇಖ್ ಹಸೀನಾ ಅವರೇ ವಿದ್ಯಾರ್ಥಿ ಚಳುವಳಿಯನ್ನು ಅತ್ಯಂತ ಕಠೋರವಾಗಿ ಹತ್ತಿಕ್ಕುವಂತೆ ಸೇನೆ ಮತ್ತು ಪೊಲೀಸರಿಗೆ ಆದೇಶ ನೀಡಿದ್ದರು ಎಂಬ ವಾದವನ್ನು ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ ಒಪ್ಪಿಕೊಂಡಿದೆ. ಹೀಗಾಗಿ ಮಾಜಿ ಪ್ರಧಾನಿಗೆ ಗಲ್ಲುಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.
ಇದಕ್ಕೂ ಮೊದಲು ತಮ್ಮ ಬೆಂಬಲಿಗರಿಗೆ ಶೇಖ್ ಹಸೀನಾ ಆಡಿಯೋ ಸಂದೇಶ ಕಳುಹಿಸಿದ್ದರು. ಇದರಲ್ಲಿ "ನನ್ನ ವಿರುದ್ಧ ನ್ಯಾಯಾಲಯ ನೀಡುವ ತೀರ್ಪಿನ ಬಗ್ಗೆ ಯಾವುದೇ ಭಯವಿಲ್ಲ, ಅಲ್ಲಾ ಜೀವ ಕೊಟ್ಟಿದ್ದಾನೆ, ಅವನೇ ತೆಗೆದುಕೊಳ್ಳುತ್ತಾನೆ" ಎಂದು ಹೇಳಿದ್ದರು. ಅಲ್ಲದೇ ಈ ವಿಚಾರಣೆ ವಿರುದ್ಧ ಆವಾಮಿ ಲೀಗ್ ಬೆಂಬಲಿಗರು ನಡೆಸುತ್ತಿರುವ ಪ್ರತಿಭಟನೆ ಕೂಡ ಸ್ವಯಂಪ್ರೇರಿತ ಎಂದು ಶೇಖ್ ಹಸೀನಾ ಪ್ರತಿಪಾದಿಸಿದ್ದಾರೆ.
ಭಾರತದ ಆಪ್ತರಾಗಿರುವ ಶೇಖ್ ಹಸೀನಾ, ಕಳೆದ ವರ್ಷ ತಮ್ಮ ಸರ್ಕಾರದ ವಿರುದ್ಧ ಹಿಂಸಾತ್ಮಕ ಪ್ರತಿಭಟನೆ ಭುಗಿಲೆದ್ದ ಬಳಿಕ ಬಾಂಗ್ಲಾದಿಂದ ಪಲಾಯನ ಮಾಡಿ ನವದೆಹಲಿಗೆ ಆಗಮಿಸಿದ್ದರು. ತಮಗೆ ಆಶ್ರಯ ನೀಡಿದ ಭಾರತಕ್ಕೆ ಧನ್ಯವಾದ ಅರ್ಪಿಸಿರುವ ಶೇಖ್ ಹಸೀನಾ, ದಿಲ್ಲಿಯಲ್ಲಿ ಸ್ವತಂತ್ರವಾಗಿ ಬದುಕುತ್ತಿರುವುದಾಗಿ ಹೇಳಿದ್ದರು.
ನ್ಯಾಯಾಲಯ ತೀರ್ಪಿನ ಬೆನ್ನಲ್ಲೇ ಹಸೀನಾ ಅವರನ್ನು ಬಾಂಗ್ಲಾದೇಶಕ್ಕೆ ಹಸ್ತಾಂತರ ಮಾಡಬೇಕೆಂದು ಬಾಂಗ್ಲಾ ಸರ್ಕಾರ ಒತ್ತಾಯಿಸಿದೆ.
A special tribunal in Dhaka has sentenced former Bangladeshi Prime Minister Sheikh Hasina to death in absentia, finding her guilty of crimes against humanity in connection with the brutal suppression of student-led protests in 2024. The tribunal accused her of ordering lethal force, including the use of drones and helicopters, leading to mass killings. Hasina, now in exile in India, has strongly condemned the verdict, calling the trial “biased and politically motivated.”
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm