ಬ್ರೇಕಿಂಗ್ ನ್ಯೂಸ್
28-11-25 07:28 pm HK News Desk ದೇಶ - ವಿದೇಶ
ಪಣಜಿ, ನ.28 : ಗೋವಾದ ಕಾಣಕೋಣ ಎಂಬಲ್ಲಿರುವ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ ವತಿಯಿಂದ ಪ್ರತಿಷ್ಠಾಪನೆಗೊಂಡ ಜಗತ್ತಿನ ಅತಿ ಎತ್ತರದ (77 ಅಡಿ) ಶ್ರೀರಾಮನ ಕಂಚಿನ ಮೂರ್ತಿಯನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಲೋಕಾರ್ಪಣೆ ಮಾಡಿದ್ದಾರೆ.
ಗೋವಾದ ಪರ್ತಗಾಳಿ ಮಠವು "ದಕ್ಷಿಣದ ಅಯೋಧ್ಯೆ'ಯಾಗಿ ರೂಪುಗೊಳ್ಳುತ್ತಿದೆ. ಬಿಲ್ಲಿನಾಕಾರದಲ್ಲಿ ರೂಪಿಸಲಾಗಿರುವ "ಆದರ್ಶ ಧಾಮ್' ಪ್ರದೇಶದಲ್ಲಿ ಶ್ರೀರಾಮನ ಬೃಹತ್ ಮೂರ್ತಿಯನ್ನು ಇರಿಸಲಾಗಿದೆ. ಮೂರ್ತಿಯನ್ನು ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದರ ಜೊತೆ ಮೋದಿ ಅನಾವರಣಗೊಳಿಸಿದರು.





ಶ್ರೀಮಠಕ್ಕೆ 550 ಸಂವತ್ಸರ ತುಂಬಿದ ಹಿನ್ನೆಲೆಯಲ್ಲಿ ಆಯೋಜನೆಗೊಂಡಿರುವ "ಸಾರ್ಧ ಪಂಚ ಶತಮಾನೋತ್ಸವ' ಕಾರ್ಯಕ್ರಮದ ನಿಮಿತ್ತ ಪ್ರಧಾನಿಯವರು ವಿಶೇಷ ಅಂಚೆ ಚೀಟಿ ಹಾಗೂ ನಾಣ್ಯವನ್ನೂ ಬಿಡುಗಡೆಗೊಳಿಸಿದ್ದಾರೆ. ಜೊತೆಗೆ ಶ್ರೀರಾಮನ ಮೂರ್ತಿ ಸುತ್ತಲೂ ರಾಮಾಯಣ ಥೀಮ್ ಪಾರ್ಕ್, ಶ್ರೀರಾಮನ ಮಹಿಮೆ ಸಾರುವ ಮ್ಯೂಸಿಯಂ ಹಾಗೂ 7ಡಿ ರಂಗಮಂದಿರಕ್ಕೂ ಚಾಲನೆ ನೀಡಲಾಯಿತು.


ಶ್ರೀಮಠಕ್ಕೆ 550 ಸಂವತ್ಸರ ತುಂಬಿದ ಹಿನ್ನೆಲೆಯಲ್ಲಿ ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದರು, ದೇಶದ 120 ಕೇಂದ್ರಗಳಲ್ಲಿ 550 ಕೋಟಿ ಶ್ರೀರಾಮ ನಾಮ ಜಪ ಅಭಿಯಾನಕ್ಕೆ ಚಾಲನೆ ನೀಡಿದ್ದರು. ಆದರೆ, 590 ಕೋಟಿಗೂ ಹೆಚ್ಚು ಶ್ರೀರಾಮ ನಾಮ ಜಪ ನಡೆದು ದಾಖಲೆ ಸೃಷ್ಟಿಸಿದೆ. ಗುಜರಾತ್ ನಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಹಾಗೂ ಬೆಂಗಳೂರಿನಲ್ಲಿ ಕೆಂಪೇಗೌಡರ ಮೂರ್ತಿಗಳನ್ನು ವಿನ್ಯಾಸಗೊಳಿಸಿದ್ದ ಪ್ರಖ್ಯಾತ ಶಿಲ್ಪಿ "ಪದ್ಮಭೂಷಣ' ಪುರಸ್ಕೃತ ರಾಮ ಸುತಾರ್ ಅವರೇ 77 ಅಡಿ ಎತ್ತರದ ಈ ಶ್ರೀರಾಮನ ಮೂರ್ತಿಯನ್ನು ನಿರ್ಮಿಸಿದ್ದಾರೆ.
Prime Minister Narendra Modi inaugurated the world’s tallest 77-foot bronze statue of Lord Rama at Kanakona in Goa, installed by the Gokarna Partagali Jeevottam Math. The newly developed “Adarsh Dham,” designed in the shape of a bow, is now being hailed as the “Ayodhya of the South.”
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am