ಬ್ರೇಕಿಂಗ್ ನ್ಯೂಸ್
29-12-20 04:11 pm Headline Karnataka News Network ದೇಶ - ವಿದೇಶ
ಖಾನ್ಪುರ, ಡಿ.29: ಗ್ಯಾಂಗ್ ಸ್ಟರ್, ಭೂಗತ ಪಾತಕಿಗಳ ಫೋಟೋಗಳನ್ನು ಪೊಲೀಸ್ ಠಾಣೆಗಳ ಹಿಟ್ ಲಿಸ್ಟ್ ನಲ್ಲಿ ಅಥವಾ ಮೋಸ್ಟ್ ವಾಂಟೆಡ್ ಲಿಸ್ಟ್ ನಲ್ಲಿ ಹಾಕಿಡುವುದನ್ನು ಕೇಳಿದ್ದೇವೆ. ಆದರೆ, ಉತ್ತರ ಪ್ರದೇಶದಲ್ಲಿ ಭೂಗತ ಪಾತಕಿ ಛೋಟಾ ರಾಜನ್, ಮುನ್ನಾ ಬಜರಂಗಿಯಂತಹ ಗ್ಯಾಂಗ್ ಸ್ಟರ್ ಗಳ ಫೋಟೊಗಳನ್ನು ಸ್ಟಾಂಪ್ ಪೇಪರಿನಲ್ಲಿ ಪ್ರಿಂಟ್ ಮಾಡಿದ್ದು ಹೊಸ ವಿವಾದಕ್ಕೆ ಕಾರಣವಾಗಿದೆ. ಈ ರೀತಿಯ ಅಂಚೆ ಚೀಟಿ ಖಾನ್ ಪುರದ ಪ್ರಧಾನ ಅಂಚೆ ಇಲಾಖೆಯಲ್ಲಿ ಮುದ್ರಣವಾಗಿದೆ.

ಅಂಚೆ ಇಲಾಖೆಯಲ್ಲಿ ಮೈ ಸ್ಟಾಂಪ್ ಎನ್ನುವ ಯೋಜನೆ ಇದ್ದು, ಅದರಲ್ಲಿ ಕಾರ್ಪೊರೇಟ್ ಸಂಸ್ಥೆಗಳು, ಸಂಘಟನೆಗಳಿಗೆ ತಮ್ಮ ಹೆಸರಲ್ಲಿ ಸ್ಟಾಂಪ್ ಪೇಪರ್ ತರಬಹುದಾಗಿದೆ. ಸಂಘಟನೆಯ ಲೋಗೊ ಮತ್ತು ಅದಕ್ಕೆ ಸಂಬಂಧಪಟ್ಟ ಫೋಟೋಗಳನ್ನು ಮುದ್ರಿಸಲು ಅವಕಾಶ ಇರುತ್ತದೆ. ಯೋಜನೆಯಡಿ 12 ಸ್ಟಾಂಪ್ ಗಳುಳ್ಳ ಹಾಳೆ ದೊರಕಲಿದ್ದು, ಪ್ರತೀ ಅಂಚೆ ಚೀಟಿಯ ಮುಖಬೆಲೆ 5 ರೂ. ಆಗಿರುತ್ತದೆ. 12 ಸ್ಟಾಂಪಿನ ಒಂದು ಶೀಟ್ ಹೊರತರಲು 300 ರೂ. ಖರ್ಚು ತಗಲುತ್ತದೆ ಎನ್ನುವ ಮಾಹಿತಿ ಪೋಸ್ಟಲ್ ವೆಬ್ ನಲ್ಲಿ ಸಿಗುತ್ತದೆ.

ಈ ಬಗ್ಗೆ ಮಾಹಿತಿ ನೀಡಿರುವ ಖಾನ್ಪುರ ಅಂಚೆ ಇಲಾಖೆ ಪ್ರಧಾನ ಕಚೇರಿಯ ಪೋಸ್ಟ್ ಮಾಸ್ಟರ್ ಜನರಲ್ ವಿನೋದ್ ಕುಮಾರ್ ವರ್ಮಾ, ಮೈ ಸ್ಟಾಂಪ್ ಯೋಜನೆಯಡಿ ಖಾಸಗಿ ವ್ಯಕ್ತಿಗಳು ಕೂಡ ಪೋಸ್ಟಲ್ ಸ್ಟಾಂಪ್ ಹೊರತರಲು ಸಾಧ್ಯವಿದೆ. ಅದಕ್ಕಾಗಿ ಅಗತ್ಯ ದಾಖಲೆಗಳನ್ನು ಖುದ್ದಾಗಿ ಅಂಚೆ ಕಚೇರಿಗೆ ಬಂದು ನೀಡಬೇಕಾಗುತ್ತದೆ. ವೆಬ್ ಕ್ಯಾಮ್ ಮೂಲಕ ಪೋಸ್ಟೇಜ್ ಸ್ಟಾಂಪಿನ ಫೋಟೋಗಳನ್ನು ತೆಗೆಯಲಾಗುತ್ತದೆ. ಅದರಂತೆ, ಖಾನ್ಪುರದಲ್ಲಿ ಇಬ್ಬರು ಮಾಧ್ಯಮದ ವ್ಯಕ್ತಿಗಳು ಮೈ ಸ್ಪಾಂಪ್ ಗಾಗಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯಲ್ಲಿ ತಮ್ಮ ಹೆಸರನ್ನು ಮುನ್ನಾ ಬಜರಂಗಿ(ಪ್ರೇಮ್ ಪ್ರಕಾಶ್) ಮತ್ತು ಛೋಟಾ ರಾಜನ್ (ರಾಜೇಂದ್ರ ಎಸ್.) ಎಂದು ನಮೂದಿಸಿದ್ದರು.

ಮುನ್ನ ಮತ್ತು ಛೋಟಾ ರಾಜನ್ ಫೋಟೋಗಳನ್ನು ನೀಡಿದ್ದಲ್ಲದೆ, ತಮ್ಮದೇ ಐಡಿ ಕಾರ್ಡನ್ನು ನೀಡಿದ್ದರು. ಈ ವೇಳೆ, ಪೋಸ್ಟ್ ಮ್ಯಾನ್ ಬಳಿ ಕೇಳಿದಾಗ, ಅವರಿಬ್ಬರು ನನಗೆ ಗೊತ್ತಿರುವ ಮಂದಿಯೇ. ನಕಲಿ ವ್ಯಕ್ತಿಗಳಲ್ಲ ಎಂದಿದ್ದಾರೆ. ಅದರಂತೆ, ಹೆಚ್ಚುವರಿ ತನಿಖೆಗೆ ಒಳಪಡಿಸದೆ ಸ್ಟಾಂಪ್ ಪ್ರಿಂಟ್ ಆಗಿತ್ತು ಎಂದಿದ್ದಾರೆ.
ಪ್ರಕರಣ ಸಂಬಂಧಿಸಿ, ಈಗ ಪೋಸ್ಟಲ್ ಕಚೇರಿಯ ಕ್ಲರ್ಕ್ ಒಬ್ಬರನ್ನು ಸಸ್ಪೆಂಡ್ ಮಾಡಲಾಗಿದೆ. ಅಲ್ಲದೆ, ಆರು ಮಂದಿ ವಿರುದ್ಧ ಇಲಾಖೆ ತನಿಖೆಗೆ ಆದೇಶ ಮಾಡಲಾಗಿದೆ.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
24-08-26 11:05 am
HK News Staffer
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am