ಬ್ರೇಕಿಂಗ್ ನ್ಯೂಸ್
02-12-25 10:25 pm HK News Desk ದೇಶ - ವಿದೇಶ
ಲಕ್ನೋ, ಡಿ.2 : ಜಾತಿ ವ್ಯವಸ್ಥೆಗೆ ಮಾನ್ಯತೆ ಇಲ್ಲದ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿಗಳಿಗೆ ಎಸ್ಸಿ/ಎಸ್ಟಿ (ದೌರ್ಜನ್ಯ ತಡೆ) ಕಾಯ್ದೆಯ ರಕ್ಷಣಾ ನಿಯಮಗಳನ್ನು ವಿಸ್ತರಿಸಲು ಸಾಧ್ಯವಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದೆ.
ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿರುವ ಪರಿಶಿಷ್ಟ ಜಾತಿಗೆ(ಎಸ್ಸಿ) ಸೇರಿದ ಜಿತೇಂದ್ರ ಕುಮಾರ್ ಸಾಹ್ನಿ ಮೇಲೆ ಹಿಂದೂ ದೇವರನ್ನು ಅವಹೇಳನ ಮಾಡಿದ ಕಾರಣ ನೀಡಿ ವಿವಿಧ ಸೆಕ್ಷನ್ ಅಡಿಯಲ್ಲಿ ಮೊಕದ್ದಮೆ ಹೂಡಲಾಗಿದೆ. ಅದನ್ನು ಪ್ರಶ್ನಿಸಿ ಜಿತೇಂದ್ರ ಸಲ್ಲಿಸಿದ ಅರ್ಜಿಯನ್ನು ನ್ಯಾಯಮೂರ್ತಿ ಪ್ರವೀಣ್ ಕುಮಾರ್ ಗಿರಿ ನೇತೃತ್ವದ ಏಕದಸ್ಯ ಪೀಠ ವಜಾಗೊಳಿಸಿ, ಈ ಮಹತ್ವದ ತೀರ್ಪು ನೀಡಿದೆ.
ತಾನು ಎಸ್ಸಿ ಸಮುದಾಯಕ್ಕೆ ಸೇರಿದ್ದು, ಎಸ್ಸಿ/ಎಸ್ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ರಕ್ಷಣೆ ನೀಡುವಂತೆ ಜಿತೇಂದ್ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಕ್ರಿಶ್ಚಿಯನ್ ಧರ್ಮದಲ್ಲಿ ಜಾತಿ ಆಧಾರಿತ ವ್ಯವಸ್ಥೆ ಇಲ್ಲ. ಆದ್ದರಿಂದ ಪರಿಶಿಷ್ಟ ಜಾತಿಯಾಗಿದ್ದರೂ ಆ ಧರ್ಮಕ್ಕೆ ಮತಾಂತರಗೊಂಡ ನಂತರ, ಹಿಂದಿದ್ದ ಜಾತಿ ಪ್ರಮಾಣಪತ್ರ ಮಾನ್ಯವಾಗುವುದಿಲ್ಲ ಎಂದು ನ್ಯಾಯಾಲಯವು ತೀರ್ಪಿನಲ್ಲಿ ವಿವರಿಸಿದೆ.
'ಜಾತಿ ಆಧಾರಿತ ತಾರತಮ್ಯವನ್ನು ಎದುರಿಸಿದ ಸಮುದಾಯಗಳನ್ನು ರಕ್ಷಿಸುವುದು ಎಸ್ಸಿ/ಎಸ್ಟಿ(ದೌರ್ಜನ್ಯ ತಡೆ) ಕಾಯ್ದೆ ಉದ್ದೇಶವಾಗಿದೆ. ಹಾಗಾಗಿ ಪರಿಶಿಷ್ಟ ಜಾತಿಗೆ (ಎಸ್ಸಿ) ಸೇರಿದ ವ್ಯಕ್ತಿಗಳು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡ ತಕ್ಷಣ ತಮ್ಮ ಹಿಂದಿದ್ದ ಜಾತಿ ಸ್ಥಾನಮಾನವನ್ನು ಕಳೆದುಕೊಳ್ಳುತ್ತಾರೆ. ಹಾಗಾಗಿ ಈ ಕಾಯ್ದೆಯಲ್ಲಿನ ರಕ್ಷಣಾತ್ಮಕ ನಿಬಂಧನೆಗಳನ್ನು ವಿಸ್ತರಿಸಲಾಗುವುದಿಲ್ಲ ಎಂದು ಪೀಠ ತಿಳಿಸಿದೆ. ಅರ್ಜಿದಾರರ ಧರ್ಮದ ಕುರಿತು ಮೂರು ತಿಂಗಳೊಳಗೆ ತನಿಖೆ ನಡೆಸಬೇಕು. ಒಂದೊಮ್ಮೆ ಧರ್ಮದ ವಿಚಾರವಾಗಿ ನಕಲಿ ದಾಖಲೆ ಸೃಷ್ಟಿಸಿರುವುದು ಸಾಬೀತಾದರೆ, ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಈ ಮೂಲಕ ಭವಿಷ್ಯದಲ್ಲಿ ಯಾರೂ ನ್ಯಾಯಾಲಯಕ್ಕೆ ಇಂಥ ಪ್ರಮಾಣಪತ್ರಗಳನ್ನು ಸಲ್ಲಿಸಬಾರದು ಎಂದು ನ್ಯಾಯಾಲಯವು ಇದೇ ವೇಳೆ ಮಹಾರಾಜ್ಗಂಜ್ ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದೆ.
The Allahabad High Court has ruled that individuals who convert to Christianity cannot seek protection under the SC/ST (Prevention of Atrocities) Act, as the Christian faith does not recognize the caste system. The judgment came while dismissing a plea filed by Jitendra Kumar Sahni—originally from a Scheduled Caste—who converted to Christianity and sought protection under the SC/ST Act after being booked for allegedly insulting Hindu deities. Justice Praveen Kumar Giri stated that once a person converts to Christianity, the earlier caste certificate loses validity.
02-12-25 10:17 pm
Bangalore Correspondent
ಸಂಪುಟ ಪುನಾರಚನೆಯಾದ್ರೆ ಮುನಿಯಪ್ಪ, ಮಹದೇವಪ್ಪ, ಪರಮೇ...
02-12-25 06:29 pm
ಕೃತಕ ಬುದ್ಧಿಮತ್ತೆ ಎಫೆಕ್ಟ್ ; ಭವಿಷ್ಯದಲ್ಲಿ ಜನರು ಕ...
01-12-25 10:59 pm
ಸಿಎಂ, ಡಿಸಿಎಂ ಭೇಟಿಯಾಗಿ ಹೊಟ್ಟೆ ತುಂಬ ಉಪಹಾರ ಸೇವನೆ...
01-12-25 08:28 pm
Bangalore Suicide: ಎರಡು ವರ್ಷದ ಹಿಂದೆ ಗಂಡನ ಸಾವು...
01-12-25 08:18 pm
02-12-25 11:19 pm
HK News Desk
ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿಗಳಿಗೆ...
02-12-25 10:25 pm
ಭೂತಾನ್, ಮ್ಯಾನ್ಮಾರ್, ಶ್ರೀಲಂಕಾದಿಂದ ಕಳಪೆ ಅಡಿಕೆ...
01-12-25 10:18 pm
ಡಿಜಿಟಲ್ ಅರೆಸ್ಟ್ ಪ್ರಕರಣ ಹೆಚ್ಚಳ ; ಗಂಭೀರ ಪರಿಗಣಿಸ...
01-12-25 09:28 pm
ಇಡುಕ್ಕಿ ಸ್ಕೈ ಡೈನ್ ವೈಫಲ್ಯ ; 120 ಅಡಿ ಎತ್ತರದಲ್ಲಿ...
30-11-25 10:59 pm
01-12-25 09:25 pm
Mangalore Correspondent
ಕ್ರಿಸ್ಮಸ್ ವೇಳೆಗೆ ಮಂಗಳೂರು- ಮುಂಬೈ ನಡುವೆ ವಾರದ ಎಲ...
01-12-25 03:08 pm
Kapu Accident, Udupi, Five Killed: ಕಾಪು ಬಳಿ...
30-11-25 06:03 pm
DK Trasnsport Mangalore, Joel: ಡಿಕೆ ಟ್ರಾನ್ಸ್...
29-11-25 10:01 pm
Moodushedde, Mangalore, Daughter Assaults Mot...
29-11-25 04:26 pm
02-12-25 10:48 pm
Bangalore Correspondent
ಇನ್ನೋವಾ ಕಾರಿನಲ್ಲಿ ನಾಲ್ಕು ಕರುಗಳನ್ನು ಸಾಗಿಸುತ್ತಿ...
02-12-25 06:37 pm
ರೈಲಿನಲ್ಲಿ ಬಂದು ನಿಲ್ಲಿಸಿದ್ದ ಸ್ಕೂಟರ್ ಕಳವುಗೈದು ಪ...
02-12-25 02:26 pm
Udupi Rape, Crime, Hindu Jagaran Vedike: ಮದುವ...
01-12-25 04:50 pm
ಗಿಫ್ಟ್ ಕೊಡಲಿಕ್ಕಿದೆಯೆಂದು ಸ್ವರ್ಣ ಜುವೆಲ್ಲರಿಯಿಂದ...
29-11-25 10:57 pm