ಬ್ರೇಕಿಂಗ್ ನ್ಯೂಸ್
03-12-25 07:14 pm HK News Desk ದೇಶ - ವಿದೇಶ
ನವದೆಹಲಿ, ಡಿ.3: ಭಾರತದ ಮೊದಲ ಪ್ರಧಾನ ಮಂತ್ರಿ ಜವಾಹರಲಾಲ ನೆಹರೂ ಅಯೋಧ್ಯೆಯಲ್ಲಿ ಬಾಬರಿ ಮಸೀದಿ ನಿರ್ಮಾಣಕ್ಕಾಗಿ ಸಾರ್ವಜನಿಕ ನಿಧಿ ಬಳಸಲು ಬಯಸಿದ್ದರು. ಆದರೆ ಸರ್ದಾರ್ ವಲ್ಲಭಭಾಯಿ ಪಟೇಲ್ ತೀವ್ರವಾಗಿ ವಿರೋಧಿಸಿ ನೆಹರು ಪ್ರಯತ್ನಕ್ಕೆ ತಡೆಯೊಡ್ಡಿದ್ದರು ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಗುಜರಾತಿನ ವಡೋದರ ಹತ್ತಿರದ ಸಾಧ್ಲಿ ಗ್ರಾಮದಲ್ಲಿ ಸರ್ದಾರ್ ಪಟೇಲ್ 150ನೇ ಜಯಂತ್ಯುತ್ಸವದ ‘ಯುನಿಟಿ ಮಾರ್ಚ್’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಟೇಲ್ ನಿಜವಾದ ಸೆಕ್ಯುಲರ್ ನಾಯಕರಾಗಿದ್ದರು, ಯಾರನ್ನೂ ತೃಪ್ತಿಪಡಿಸುವ ರಾಜಕೀಯ ಮಾಡದೆ ಸಮಾನತೆಯ ಮೌಲ್ಯಗಳನ್ನು ಕಾಯ್ದುಕೊಂಡಿದ್ದರು ಎಂದು ಹೇಳಿದರು.
ನೆಹರೂ ಸಾರ್ವಜನಿಕ ಹಣದಿಂದ ಅಯೋಧ್ಯೆಯಲ್ಲಿ ಬಾಬರಿ ಮಸೀದಿ ನಿರ್ಮಿಸಲು ಬಯಸಿದ್ದರು. ಆದರೆ ಇದಕ್ಕೆ ಮೊದಲಿಗರಾಗಿ ಪಟೇಲ್ ವಿರೋಧ ವ್ಯಕ್ತಪಡಿಸಿದರು. ಅವರು ನೆಹರು ಯೋಜನೆ ಜಾರಿ ಆಗದಂತೆ ತಡೆದಿದ್ದರು ಎಂದು ಸಿಂಗ್ ಹೇಳಿದ್ದಾರೆ.
ಗುಜರಾತ್ನ ಸೋಮನಾಥ ದೇವಾಲಯದ ಪುನಃಸ್ಥಾಪನೆಯ ವಿಷಯವನ್ನು ನೆಹರು ಎತ್ತಿದಾಗ, ಜನಸಾಮಾನ್ಯರು ದಾನ ಮಾಡಿದ 30 ಲಕ್ಷ ರೂ.ಗಳನ್ನು ಬಳಸಿ ದೇಗುಲ ಪುನರ್ ಸ್ಥಾಪಿಸಲಾಯಿತು. ದೇಗುಲ ನಿರ್ಮಾಣಕ್ಕೆ ಸರ್ಕಾರದ ಹಣ ಬಳಸಿಲ್ಲ, ಸಾರ್ವಜನಿಕ ದೇಣಿಗೆಗಳನ್ನು ಮಾತ್ರ ಬಳಸಲಾಗಿತ್ತು, ಇದೇ ರೀತಿಯಲ್ಲಿ ಅಯೋಧ್ಯೆಯ ರಾಮ ಮಂದಿರಕ್ಕೂ ಯಾವುದೇ ಸರ್ಕಾರಿ ಹಣ ಕೊಡಲಾಗಿಲ್ಲ ಎಂದು ರಾಜನಾಥ್ ಸಿಂಗ್ ಸ್ಪಷ್ಟ ಪಡಿಸಿದರು. ಇದು ನಿಜವಾದ ಸೆಕ್ಯುಲರಿಸಂ ಎಂದು ಅವರು ಅಭಿಪ್ರಾಯಪಟ್ಟರು.
India’s Defence Minister Rajnath Singh has claimed that former Prime Minister Jawaharlal Nehru once proposed using public funds for the construction of the Babri Masjid in Ayodhya, but Sardar Vallabhbhai Patel strongly opposed the idea and prevented it from happening.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 11:47 am
HK News Staffer
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm