ಬ್ರೇಕಿಂಗ್ ನ್ಯೂಸ್
04-12-25 05:39 pm HK News Desk ದೇಶ - ವಿದೇಶ
ಕೊಲ್ಕತ್ತಾ, ಡಿ.4 : ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಮತ್ತೊಂದು ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದಕ್ಕೆ ಕಾರಣವಾಗಿದ್ದ ಭರತ್ಪುರ ಶಾಸಕ ಹುಮಾಯೂನ್ ಕಬೀರ್ ಅವರನ್ನು ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಪಕ್ಷದಿಂದ ಅಮಾನತು ಮಾಡಿದೆ.
ವಿವಾದಾತ್ಮಕ ಹೇಳಿಕೆಗಳಿಂದ ಕಳೆದ ಕೆಲವು ವರ್ಷಗಳಿಂದ ಗಮನ ಸೆಳೆದಿರುವ ಕಬೀರ್, ಡಿಸೆಂಬರ್ 6 ರಂದು ಬೆಲ್ದಂಗಾದಲ್ಲಿ ಬಾಬರಿ ಮಸೀದಿಗೆ ಅಡಿಪಾಯ ಹಾಕಲಾಗುವುದು ಎಂದು ಘೋಷಿಸಿದ್ದರು. ಪಕ್ಷವು ರಾಜ್ಯದಲ್ಲಿ ಶಾಂತಿ ಮತ್ತು ಕೋಮು ಸಾಮರಸ್ಯವನ್ನು ಕಾಪಾಡಿಕೊಳ್ಳಲು ಕೆಲಸ ಮಾಡುತ್ತಿರುವ ಸಮಯದಲ್ಲಿ ಕಬೀರ್ ಅವರ ನಡವಳಿಕೆ ತೀವ್ರ ಅಶಿಸ್ತಿನ ಕೂಡಿದ್ದಾಗಿದೆ ಎಂದು ಅಮಾನತು ನಿರ್ಧಾರವನ್ನು ಪ್ರಕಟಿಸಿದ ಪಕ್ಷದ ಹಿರಿಯ ನಾಯಕ ಫರ್ಹಾದ್ ಹಕೀಮ್ ಹೇಳಿದ್ದಾರೆ.
ಕಬೀರ್ ಕೋಮು ರಾಜಕೀಯದಲ್ಲಿ ತೊಡಗಿಸಿಕೊಂಡಿದ್ದು, ಇದನ್ನು ಟಿಎಂಸಿ ತೀವ್ರವಾಗಿ ವಿರೋಧಿಸುತ್ತದೆ. ಟಿಎಂಸಿ ಕೋಮು ರಾಜಕೀಯದಲ್ಲಿ ನಂಬಿಕೆ ಇಡುವುದಿಲ್ಲ. ಈ ಕ್ಷಣದಿಂದ ಅವರಿಗೆ ಪಕ್ಷದೊಂದಿಗೆ ಯಾವುದೇ ಸಂಬಂಧವಿರುವುದಿಲ್ಲ. ನಮ್ಮ ಉನ್ನತ ನಾಯಕತ್ವದ ಸೂಚನೆಯ ಮೇರೆಗೆ ಅವರನ್ನು ಅಮಾನತುಗೊಳಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ಕಬೀರ್, ಪಕ್ಷದಿಂದ ಅಮಾನತು ಮಾಡಿದ್ದಕ್ಕೆ ಹೆದರುವುದಿಲ್ಲ. ರಾಜೀನಾಮೆ ನೀಡಿ ಹೊಸ ಪಕ್ಷವನ್ನು ರಚಿಸುವುದಾಗಿ ಹೇಳಿದ್ದಾರೆ. ಡಿಸೆಂಬರ್ 6 ರಂದು ನಡೆದ ಕಾರ್ಯಕ್ರಮದಲ್ಲಿ ತನ್ನ ಜೊತೆಗೆ ಲಕ್ಷಾಂತರ ಜನರು ಸೇರುತ್ತಾರೆ ಎಂದು ಹೇಳಿಕೊಂಡಿದ್ದರು.
The Trinamool Congress has suspended Bharatpur MLA Humayun Kabir after he sparked controversy by announcing that a new Babri Masjid would be constructed on December 6 in Murshidabad district of West Bengal. Senior TMC leader Firhad Hakim stated that Kabir’s remarks were inflammatory and violated the party’s commitment to maintaining peace and communal harmony in the state.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm