ಬ್ರೇಕಿಂಗ್ ನ್ಯೂಸ್
07-12-25 12:31 pm HK News Desk ದೇಶ - ವಿದೇಶ
ನವದೆಹಲಿ, ಡಿ.6 : ಸಂವಿಧಾನದ ಪೀಠಿಕೆಯಲ್ಲಿರುವ ಜಾತ್ಯತೀತ ಮತ್ತು ಸಮಾಜವಾದಿ ಪದಗಳನ್ನು ತೆಗೆದುಹಾಕಲು ಬಿಜೆಪಿ ಸಂಸದರೊಬ್ಬರು ರಾಜ್ಯಸಭೆಯಲ್ಲಿ ಮಸೂದೆಯೊಂದನ್ನು ಮಂಡಿಸಿದ್ದಾರೆ. ಸಂವಿಧಾನದ ಪೀಠಿಕೆಯಲ್ಲಿ 'ಜಾತ್ಯತೀತ' ಮತ್ತು 'ಸಮಾಜವಾದಿ' ಪದಗಳ ಅಗತ್ಯವಿಲ್ಲ. ತುರ್ತು ಪರಿಸ್ಥಿತಿಯ ಸಮಯದಲ್ಲಿ ಪ್ರಜಾಪ್ರಭುತ್ವ ವಿರೋಧಿ ರೀತಿಯಲ್ಲಿ ಅವುಗಳನ್ನು ಸೇರಿಸಲಾಗಿದೆ ಎಂದು ಹೇಳಿರುವ ಬಿಜೆಪಿ ಸಂಸದ ಭೀಮ್ ಸಿಂಗ್, ಆ ಪದಗಳನ್ನು ಕಿತ್ತುಹಾಕಲು ಖಾಸಗಿ ಮಸೂದೆಯನ್ನು ಮಂಡಿಸಿದ್ದಾರೆ.
ಶುಕ್ರವಾರ ರಾಜ್ಯಸಭೆಯಲ್ಲಿ ಸಂವಿಧಾನ (ತಿದ್ದುಪಡಿ) ಮಸೂದೆ 2025 ಮಂಡಿಸಿದ ಸಿಂಗ್, ಈ ಪದಗಳು "ಗೊಂದಲ"ವನ್ನು ಸೃಷ್ಟಿಸುತ್ತವೆ ಮತ್ತು ಮೂಲ ಸಂವಿಧಾನದ ಭಾಗವಲ್ಲ ಎಂದು ಹೇಳಿದರು. ಸಂವಿಧಾನದ ಪೀಠಿಕೆಯನ್ನು ತಿದ್ದುಪಡಿ ಮಾಡಲು, 'ಸಮಾಜವಾದಿ' ಮತ್ತು 'ಜಾತ್ಯತೀತ' ಪದಗಳನ್ನು ತೆಗೆದುಹಾಕಲು ಖಾಸಗಿ ಸದಸ್ಯರ ಮಸೂದೆಯನ್ನು ಮಂಡಿಸಿದ್ದೇನೆ. 1950 ರಿಂದ ಜಾರಿಯಲ್ಲಿರುವ 1949 ರಲ್ಲಿ ಅಂಗೀಕರಿಸಲ್ಪಟ್ಟ ಮೂಲ ಸಂವಿಧಾನದಲ್ಲಿ ಈ ಎರಡು ಪದಗಳು ಇರಲಿಲ್ಲ. ಇಂದಿರಾ ಗಾಂಧಿ 1976 ರಲ್ಲಿ ತುರ್ತು ಪರಿಸ್ಥಿತಿಯ ಸಮಯದಲ್ಲಿ 42ನೇ ಸಂವಿಧಾನ ತಿದ್ದುಪಡಿಯಡಿ ಸಂವಿಧಾನಕ್ಕೆ ಈ ಎರಡು ಪದಗಳನ್ನು ಸೇರಿಸಿದರು. ಆ ಸಮಯದಲ್ಲಿ ಸಂಸತ್ತಿನಲ್ಲಿ ಯಾವುದೇ ಚರ್ಚೆ ನಡೆದಿರಲಿಲ್ಲ ಎಂದು ಸಿಂಗ್ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.
ಈ ವೇಳೆ, ಎಲ್ಲ ವಿರೋಧ ಪಕ್ಷದ ನಾಯಕರಾದ ಅಟಲ್ ಬಿಹಾರಿ ವಾಜಪೇಯಿ, ಲಾಲ್ ಕೃಷ್ಣ ಅಡ್ವಾಣಿ, ಜಾರ್ಜ್ ಫರ್ನಾಂಡಿಸ್ - ಜೈಲಿನಲ್ಲಿದ್ದರು. ಪ್ರಜಾಪ್ರಭುತ್ವವನ್ನು ಕತ್ತು ಹಿಸುಕಲಾಗಿತ್ತು. ಅಂತಹ ಪರಿಸ್ಥಿತಿಯಲ್ಲಿ ಇಂದಿರಾ ಗಾಂಧಿ ಈ ಎರಡು ಪದಗಳನ್ನು ಸೇರಿಸಿದ್ದು ತಪ್ಪು. ಹೀಗಾಗಿ ಈ ಪದಗಳನ್ನು ತೆಗೆದುಹಾಕಿ, ಸಂವಿಧಾನವು ಅದರ ಮೂಲ ರೂಪದಲ್ಲಿಯೇ ಉಳಿಯಬೇಕು ಎಂದು ಸಿಂಗ್ ಹೇಳಿದ್ದಾರೆ.
ಸಂವಿಧಾನ ರಚನಾ ಸಭೆಯಲ್ಲೂ ಈ ಬಗ್ಗೆ ಚರ್ಚೆ ನಡೆದಿತ್ತು. ಕರಡು ಸಮಿತಿಯ ಅಧ್ಯಕ್ಷ ಡಾ.ಬಿ.ಆರ್. ಅಂಬೇಡ್ಕರ್ ಅವರು ಉತ್ತರ ನೀಡಿದ್ದರು. ಭಾರತದ ಸಂವಿಧಾನದ ರಚನೆ ದೇಶವನ್ನು ಜಾತ್ಯತೀತವಾಗಿಯೇ ಇರಿಸುತ್ತದೆ. ಆ ಪದವನ್ನು ಹೆಚ್ಚುವರಿಯಾಗಿ ಸೇರಿಸುವ ಅಗತ್ಯ ಇಲ್ಲ ಎಂದು ಹೇಳಿದ್ದರು. ಸಮಾಜವಾದಿ ಪದದ ಕುರಿತು ಚರ್ಚೆ ನಡೆದಿತ್ತು. ಸಂವಿಧಾನ ರಚನಾ ಸಭೆಯು ಭವಿಷ್ಯದ ಪೀಳಿಗೆಗಳು ಒಂದೇ ರೀತಿಯ ರಾಜಕೀಯ ಮತ್ತು ಆರ್ಥಿಕ ನೀತಿಯನ್ನು ಅನುಸರಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ ಎಂದು ಅಂಬೇಡ್ಕರ್ ಉತ್ತರಿಸಿದ್ದರು.
ಆಗಿನ ಯುಎಸ್ಎಸ್ಆರ್ ಅನ್ನು ಸಂತೋಷಪಡಿಸಲು 'ಸಮಾಜವಾದಿ' ಎಂಬ ಪದವನ್ನು ಸೇರಿಸಲಾಗಿತ್ತು ಮತ್ತು ಮುಸ್ಲಿಮರನ್ನು ಸಮಾಧಾನಪಡಿಸಲು 'ಜಾತ್ಯತೀತ' ಎಂಬ ಪದವನ್ನು ಸೇರಿಸಲಾಯಿತು. ಇದು ಅನಗತ್ಯವಾಗಿದ್ದು, ಗೊಂದಲವನ್ನು ಮಾತ್ರ ಸೃಷ್ಟಿಸುತ್ತದೆ" ಎಂದು ಅವರು ವಾದಿಸಿದ್ದಾರೆ.
BJP Rajya Sabha MP Bheem Singh has introduced a private member’s bill seeking to remove the words “Secular” and “Socialist” from the Preamble of the Indian Constitution. He argued that these terms were not part of the original Constitution adopted in 1949 and were inserted undemocratically during the Emergency in 1976 through the 42nd Constitutional Amendment under then Prime Minister Indira Gandhi.
06-12-25 12:33 pm
HK News Desk
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
Indigo Flight News, Hubli Marriage: ಕೈಕೊಟ್ಟ ಇ...
05-12-25 07:26 pm
ಇಸ್ಲಾಂ ಹೆಸರಲ್ಲಿ ಬಲಾತ್ಕಾರ, ಲೂಟಿ, ಮತಾಂತರ ಮಾಡಿದ್...
04-12-25 05:36 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
07-12-25 03:02 pm
Mangalore Correspondent
ತಡರಾತ್ರಿ ಮನೆಗೆ ನುಗ್ಗಿ ಕಡಬ ಹೆಡ್ ಕಾನ್ಸ್ ಟೇಬಲ್ ದ...
06-12-25 06:12 pm
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm