ಬ್ರೇಕಿಂಗ್ ನ್ಯೂಸ್
10-12-25 11:13 pm HK News Desk ದೇಶ - ವಿದೇಶ
ನವದೆಹಲಿ, ಡಿ.10 : ತಮಿಳುನಾಡಿನ ತಿರುಪರನಕುಂದ್ರಂ ಬೆಟ್ಟದಲ್ಲಿ ದರ್ಗಾದ ಬಳಿ ಇರುವ ಕಲ್ಲಿನ ಕಂಬದ ಮೇಲೆ ಕಾರ್ತಿಗೈ ದೀಪ ಬೆಳಗಲು ಅನುಮತಿ ನೀಡಿದ್ದ ಮದ್ರಾಸ್ ಹೈಕೋರ್ಟ್ ನ್ಯಾಯಾಧೀಶ ಜಿ. ಆರ್ ಸ್ವಾಮಿನಾಥನ್ ವಿರುದ್ಧ ವಿಪಕ್ಷಗಳ ಸಂಸದರು ಮಹಾಭಿಯೋಗ ನಡೆಸಲು ಮುಂದಾಗಿದ್ದು 120 ಸಂಸದರು ಸಹಿ ಹಾಕಿ ಲೋಕಸಭೆ ಸ್ಪೀಕರ್ ಓಂ ಬಿರ್ಲಾಗೆ ಮನವಿ ನೀಡಿದ್ದಾರೆ.
ತಮಿಳುನಾಡಿನ ಡಿಎಂಕೆ ಪಕ್ಷ ಜಡ್ಜ್ ವಿರುದ್ಧ ಸಮರ ಸಾರಿದ್ದು, ನ್ಯಾಯಾಧೀಶರ ಆದೇಶ, ಅವರ ನಡೆಗಳು ನ್ಯಾಯಾಂಗದ ಜಾತ್ಯತೀತ, ಪಾರದರ್ಶಕ, ತಾರತಮ್ಯ ಇಲ್ಲದ ಸ್ವಭಾವಗಳ ಬಗ್ಗೆ ಪ್ರಶ್ನೆ ಮೂಡುವಂತೆ ಮಾಡುತ್ತಿದೆ ಎಂದು ತೀವ್ರ ಆಕ್ರೋಶ ಹೊರಹಾಕಿದೆ. ಅಷ್ಟೇ ಅಲ್ಲದೇ ಬೆಟ್ಟದ ಮೇಲಿನ ದರ್ಗಾ ಬಳಿ ಇರುವ ಕಲ್ಲಿನ ಕಂಬದ ಮೇಲೆ ಸಾಂಪ್ರದಾಯಿಕ ದೀಪ ಬೆಳಗಲು ಆದೇಶ ನೀಡಿರುವ ನ್ಯಾಯಾಧೀಶರನ್ನು ಪದಚ್ಯುತಗೊಳಿಸಬೇಕೆಂದು ಡಿಎಂಕೆ ಸಂಸದೆ ಕನಿಮೋಳ ನೇತೃತ್ವದಲ್ಲಿ ಸಂಸದರು ಸ್ಪೀಕರ್ ಗೆ ದೂರು ನೀಡಿದ್ದಾರೆ.
ನ್ಯಾಯಾಧೀಶರು ಪ್ರಕರಣಗಳನ್ನು ನಿರ್ದಿಷ್ಟ ರಾಜಕೀಯ ತತ್ವ- ಸಿದ್ಧಾಂತಗಳ ಆಧಾರದಲ್ಲಿ ಸೆಕ್ಯುಲರ್ ತತ್ವಕ್ಕೆ ವಿರುದ್ಧವಾಗಿ ನಿರ್ಧರಿಸುತ್ತಿದ್ದಾರೆ ಎಂದು ವಿಪಕ್ಷ ಸಂಸದರು ಆರೋಪಿಸಿದ್ದಾರೆ. ನ್ಯಾಯಾಧೀಶರನ್ನು ಪದಚ್ಯುತಗೊಳಿಸುವ ನಿರ್ಣಯಕ್ಕೆ ಕನಿಷ್ಠ 100 ಸಂಸದರು ಬೆಂಬಲ ನೀಡಬೇಕಾಗುತ್ತದೆ. ಈಗ ವಿಪಕ್ಷಗಳ 120 ಸಂಸದರು ಸಹಿ ಹಾಕಿದ್ದು ದೂರನ್ನು ಸ್ಪೀಕರ್ ಬಿರ್ಲಾ ಅವರ ಮುಂದಿಟ್ಟಿದ್ದಾರೆ.
ದೇವಾಲಯ ಮತ್ತು ಹತ್ತಿರದ ದರ್ಗಾ ಹೊಂದಿರುವ ತಿರುಪರಂಕುಂದ್ರಂ ಬೆಟ್ಟದ ಮೇಲೆ ಸಾಂಪ್ರದಾಯಿಕ ಕಾರ್ತಿಕ ದೀಪವನ್ನು ಬೆಳಗಿಸುವ ಬಗ್ಗೆ ಸ್ಥಳೀಯರ ಕೋರಿಕೆಯಂತೆ ನ್ಯಾ.ಜಿ.ಆರ್ ಸ್ವಾಮಿನಾಥನ್ ಅವರು ಆದೇಶ ನೀಡಿದ್ದರು. ನ್ಯಾಯಾಧೀಶರ ಆದೇಶದ ಪ್ರಕಾರ ಡಿಸೆಂಬರ್ 4 ರೊಳಗೆ "ದೀಪಥೂನ್" ಕಂಬದ ಮೇಲೆ ದೀಪವನ್ನು ಬೆಳಗಿಸಬೇಕಿತ್ತು. ದೀಪ ಉರಿಸುವುದು ಮುಸ್ಲಿಂ ಸಮುದಾಯದ ಧಾರ್ಮಿಕ ಹಕ್ಕುಗಳನ್ನು ಉಲ್ಲಂಘಿಸುವುದಿಲ್ಲ ಎಂದು ಪ್ರತಿಪಾದಿಸಿದ್ದರು. ಆದಾಗ್ಯೂ, ಕಾನೂನು ಮತ್ತು ಸುವ್ಯವಸ್ಥೆಯನ್ನು ಉಲ್ಲೇಖಿಸಿ ರಾಜ್ಯ ಸರ್ಕಾರವು ತೀರ್ಪನ್ನು ಜಾರಿಗೆ ತರಲು ನಿರಾಕರಿಸಿದ್ದು ಹಿಂದೂ ಪರ ಗುಂಪುಗಳ ಪ್ರತಿಭಟನೆ, ಪೊಲೀಸರೊಂದಿಗೆ ಘರ್ಷಣೆ, ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ.
Opposition MPs have initiated impeachment proceedings against Madras High Court judge Justice G.R. Swaminathan, who recently permitted the traditional Karthigai Deepam lamp to be lit atop the stone pillar near the dargah on Tirupparankunram Hill in Tamil Nadu.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm