ಬ್ರೇಕಿಂಗ್ ನ್ಯೂಸ್
10-12-25 11:13 pm HK News Desk ದೇಶ - ವಿದೇಶ
ನವದೆಹಲಿ, ಡಿ.10 : ತಮಿಳುನಾಡಿನ ತಿರುಪರನಕುಂದ್ರಂ ಬೆಟ್ಟದಲ್ಲಿ ದರ್ಗಾದ ಬಳಿ ಇರುವ ಕಲ್ಲಿನ ಕಂಬದ ಮೇಲೆ ಕಾರ್ತಿಗೈ ದೀಪ ಬೆಳಗಲು ಅನುಮತಿ ನೀಡಿದ್ದ ಮದ್ರಾಸ್ ಹೈಕೋರ್ಟ್ ನ್ಯಾಯಾಧೀಶ ಜಿ. ಆರ್ ಸ್ವಾಮಿನಾಥನ್ ವಿರುದ್ಧ ವಿಪಕ್ಷಗಳ ಸಂಸದರು ಮಹಾಭಿಯೋಗ ನಡೆಸಲು ಮುಂದಾಗಿದ್ದು 120 ಸಂಸದರು ಸಹಿ ಹಾಕಿ ಲೋಕಸಭೆ ಸ್ಪೀಕರ್ ಓಂ ಬಿರ್ಲಾಗೆ ಮನವಿ ನೀಡಿದ್ದಾರೆ.
ತಮಿಳುನಾಡಿನ ಡಿಎಂಕೆ ಪಕ್ಷ ಜಡ್ಜ್ ವಿರುದ್ಧ ಸಮರ ಸಾರಿದ್ದು, ನ್ಯಾಯಾಧೀಶರ ಆದೇಶ, ಅವರ ನಡೆಗಳು ನ್ಯಾಯಾಂಗದ ಜಾತ್ಯತೀತ, ಪಾರದರ್ಶಕ, ತಾರತಮ್ಯ ಇಲ್ಲದ ಸ್ವಭಾವಗಳ ಬಗ್ಗೆ ಪ್ರಶ್ನೆ ಮೂಡುವಂತೆ ಮಾಡುತ್ತಿದೆ ಎಂದು ತೀವ್ರ ಆಕ್ರೋಶ ಹೊರಹಾಕಿದೆ. ಅಷ್ಟೇ ಅಲ್ಲದೇ ಬೆಟ್ಟದ ಮೇಲಿನ ದರ್ಗಾ ಬಳಿ ಇರುವ ಕಲ್ಲಿನ ಕಂಬದ ಮೇಲೆ ಸಾಂಪ್ರದಾಯಿಕ ದೀಪ ಬೆಳಗಲು ಆದೇಶ ನೀಡಿರುವ ನ್ಯಾಯಾಧೀಶರನ್ನು ಪದಚ್ಯುತಗೊಳಿಸಬೇಕೆಂದು ಡಿಎಂಕೆ ಸಂಸದೆ ಕನಿಮೋಳ ನೇತೃತ್ವದಲ್ಲಿ ಸಂಸದರು ಸ್ಪೀಕರ್ ಗೆ ದೂರು ನೀಡಿದ್ದಾರೆ.
ನ್ಯಾಯಾಧೀಶರು ಪ್ರಕರಣಗಳನ್ನು ನಿರ್ದಿಷ್ಟ ರಾಜಕೀಯ ತತ್ವ- ಸಿದ್ಧಾಂತಗಳ ಆಧಾರದಲ್ಲಿ ಸೆಕ್ಯುಲರ್ ತತ್ವಕ್ಕೆ ವಿರುದ್ಧವಾಗಿ ನಿರ್ಧರಿಸುತ್ತಿದ್ದಾರೆ ಎಂದು ವಿಪಕ್ಷ ಸಂಸದರು ಆರೋಪಿಸಿದ್ದಾರೆ. ನ್ಯಾಯಾಧೀಶರನ್ನು ಪದಚ್ಯುತಗೊಳಿಸುವ ನಿರ್ಣಯಕ್ಕೆ ಕನಿಷ್ಠ 100 ಸಂಸದರು ಬೆಂಬಲ ನೀಡಬೇಕಾಗುತ್ತದೆ. ಈಗ ವಿಪಕ್ಷಗಳ 120 ಸಂಸದರು ಸಹಿ ಹಾಕಿದ್ದು ದೂರನ್ನು ಸ್ಪೀಕರ್ ಬಿರ್ಲಾ ಅವರ ಮುಂದಿಟ್ಟಿದ್ದಾರೆ.
ದೇವಾಲಯ ಮತ್ತು ಹತ್ತಿರದ ದರ್ಗಾ ಹೊಂದಿರುವ ತಿರುಪರಂಕುಂದ್ರಂ ಬೆಟ್ಟದ ಮೇಲೆ ಸಾಂಪ್ರದಾಯಿಕ ಕಾರ್ತಿಕ ದೀಪವನ್ನು ಬೆಳಗಿಸುವ ಬಗ್ಗೆ ಸ್ಥಳೀಯರ ಕೋರಿಕೆಯಂತೆ ನ್ಯಾ.ಜಿ.ಆರ್ ಸ್ವಾಮಿನಾಥನ್ ಅವರು ಆದೇಶ ನೀಡಿದ್ದರು. ನ್ಯಾಯಾಧೀಶರ ಆದೇಶದ ಪ್ರಕಾರ ಡಿಸೆಂಬರ್ 4 ರೊಳಗೆ "ದೀಪಥೂನ್" ಕಂಬದ ಮೇಲೆ ದೀಪವನ್ನು ಬೆಳಗಿಸಬೇಕಿತ್ತು. ದೀಪ ಉರಿಸುವುದು ಮುಸ್ಲಿಂ ಸಮುದಾಯದ ಧಾರ್ಮಿಕ ಹಕ್ಕುಗಳನ್ನು ಉಲ್ಲಂಘಿಸುವುದಿಲ್ಲ ಎಂದು ಪ್ರತಿಪಾದಿಸಿದ್ದರು. ಆದಾಗ್ಯೂ, ಕಾನೂನು ಮತ್ತು ಸುವ್ಯವಸ್ಥೆಯನ್ನು ಉಲ್ಲೇಖಿಸಿ ರಾಜ್ಯ ಸರ್ಕಾರವು ತೀರ್ಪನ್ನು ಜಾರಿಗೆ ತರಲು ನಿರಾಕರಿಸಿದ್ದು ಹಿಂದೂ ಪರ ಗುಂಪುಗಳ ಪ್ರತಿಭಟನೆ, ಪೊಲೀಸರೊಂದಿಗೆ ಘರ್ಷಣೆ, ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ.
Opposition MPs have initiated impeachment proceedings against Madras High Court judge Justice G.R. Swaminathan, who recently permitted the traditional Karthigai Deepam lamp to be lit atop the stone pillar near the dargah on Tirupparankunram Hill in Tamil Nadu.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am