ಬ್ರೇಕಿಂಗ್ ನ್ಯೂಸ್
14-12-25 07:20 pm HK News Desk ದೇಶ - ವಿದೇಶ
ಕ್ಯಾನ್ಬೆರಾ, ಡಿ.14: ಸಿಡ್ನಿಯ ಬೋಂಡಿ ಬೀಚ್ನಲ್ಲಿ ಇಬ್ಬರು ಬಂದೂಕುಧಾರಿಗಳು ನಡೆಸಿದ ಗುಂಡಿನ ದಾಳಿಗೆ 12 ಮಂದಿ ಬಲಿಯಾಗಿದ್ದಾರೆ.
ಜನರ ಗುಂಪಿನ ಮೇಲೆ ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿದರು. ಜನಸಮೂಹದ ಮೇಲೆ ಮನಬಂದಂತೆ ಸುಮಾರು 50 ಗುಂಡುಗಳನ್ನು ಹಾರಿಸಲಾಯಿತು. ಇಬ್ಬರು ಶೂಟರ್ಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಎಂಟು ದಿನಗಳ ಯಹೂದಿ ಹಬ್ಬ ಹನುಕ್ಕಾದ ಮೊದಲ ರಾತ್ರಿ ಗುಂಡಿನ ದಾಳಿ ನಡೆಸಲಾಗಿದೆ. ಯಹೂದಿ ಹಬ್ಬದ ಆರಂಭವನ್ನು ಗುರುತಿಸಲು ಕಡಲತೀರದ ಕಾರ್ಯಕ್ರಮಕ್ಕಾಗಿ ನೂರಾರು ಜನರು ಸಮುದ್ರತೀರದಲ್ಲಿ ಜಮಾಯಿಸಿದ್ದರು. ಈ ವೇಳೆ ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಸಿಡ್ನಿ ಮಾರ್ನಿಂಗ್ ಹೆರಾಲ್ಡ್ ವರದಿ ಮಾಡಿದೆ.


ಇದರ ನಡುವೆ, ಭಾರತದಲ್ಲಿಯೂ ಯಹೂದಿಗಳಿಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ಎಚ್ಚರಿಕೆ ನೀಡಲಾಗಿದ್ದು, ಬೆಂಗಳೂರು ಸೇರಿದಂತೆ ಹಲವು ನಗರಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ಕರುಳು ಕಿವುಚುವ ಭೀಕರ ದೃಶ್ಯಗಳು:
ಚನುಕ್ಕಾ ಬೈ ದಿ ಸೀ ಎಂಬ ಕಾರ್ಯಕ್ರಮದಲ್ಲಿ ಸುಮಾರು 2,000 ಯಹೂದಿ ಸಮುದಾಯದ ಸದಸ್ಯರು ಭಾಗವಹಿಸಿದ್ದರು. ಹಬ್ಬದ ಮೊದಲ ರಾತ್ರಿಯ ದೀಪ ಬೆಳಗುವ ಸಮಾರಂಭ ನಡೆಯುತ್ತಿದ್ದಾಗ, ಇಬ್ಬರು ಬಂದೂಕುಧಾರಿಗಳು ಜನರ ಮಧ್ಯೆ ನುಗ್ಗಿ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಇಬ್ಬರು ಬಂದೂಕುಧಾರಿಗಳು ಗುಂಡು ಹಾರಿಸುತ್ತಿರುವುದು ಮತ್ತು ಹಲವಾರು ಮೃತದೇಹಗಳು ನೆಲದ ಮೇಲೆ ಬಿದ್ದಿರುವುದು. ಅವರನ್ನು ಸಂಬಂಧಿಕರು ಹಿಡಿದು ಗೋಗರೆಯುತ್ತಿರುವುದು ಎಕ್ಸ್ನಲ್ಲಿ ಹರಿದಾಡುತ್ತಿರುವ ವಿಡಿಯೋದಲ್ಲಿ ಕಂಡುಬಂದಿದೆ. ಪ್ಯಾರಾಮೆಡಿಕ್ ಸಿಬ್ಬಂದಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲು ಹರಸಾಹಸ ಪಡುತ್ತಿದ್ದಾರೆ.
ಗುಂಡಿನ ದಾಳಿ ನಡೆಸಿದ ದುಷ್ಕರ್ಮಿಗಳ ಪೈಕಿ ಒಬ್ಬನನ್ನು ಪೊಲೀಸರು ಬಂಧಿಸಿದ್ದು, ಮತ್ತೊಬ್ಬ ಮೃತಪಟ್ಟಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ಹಂತಕರು ಈ ಪ್ರದೇಶದಲ್ಲಿ ಅಡಗಿರುವ ಶಂಕೆ ಇದ್ದು ಕಾರ್ಯಾಚರಣೆ ಮುಂದುವರಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
11 ವರ್ಷಗಳ ಹಿಂದೆಯೂ ಇದೇ ರೀತಿ ಭೀಕರ ದಾಳಿ;
ಹನುಕ್ಕಾ ಆಚರಣೆಯ ಸಂದರ್ಭ ಆಸ್ಟ್ರೇಲಿಯಾದಲ್ಲಿ ದಾಳಿ ನಡೆದಿರುವುದು ಇದೇ ಮೊದಲಲ್ಲ, 11 ವರ್ಷಗಳ ಹಿಂದೆ ಇದೇ ಹಬ್ಬದ ಸಂದರ್ಭ ಸಿಡ್ನಿಯ ಲಿಂಡ್ಟ್ ಕೆಫೆ ಮೇಲೆ ದಾಳಿ ನಡೆಸಿದ್ದು, ಓರ್ವ ಉಗ್ರ, 18 ಜನರನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ. ಅದಾದ 16 ಗಂಟೆಗಳ ಕಾಲ ನಡೆದ ಘರ್ಷಣೆಯ ನಂತರ, ಇಬ್ಬರು ಒತ್ತೆಯಾಳುಗಳು ಮತ್ತು ದಾಳಿಕೋರ ಸಾವನ್ನಪ್ಪಿದರು.
A devastating shooting incident at Bondi Beach in Sydney has left 12 people dead, Australian police have confirmed. The attack reportedly occurred when two gunmen opened fire on a crowd gathered at the beach. Authorities say the shooters unleashed around 50 rounds at the large group. Police have taken one of the shooters into custody, while the second is believed to have been killed during the incident, officials said.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm