ಬ್ರೇಕಿಂಗ್ ನ್ಯೂಸ್
18-12-25 04:34 pm HK News Desk ದೇಶ - ವಿದೇಶ
ಕೊಚ್ಚಿ, ಡಿ.18 : ಜೆಡ್ಡಾದಿಂದ ಕೋಝಿಕ್ಕೋಡ್ಗೆ 160 ಪ್ರಯಾಣಿಕರನ್ನು ಹೊತ್ತು ಹಾರುತ್ತಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನವು ತಾಂತ್ರಿಕ ವೈಫಲ್ಯದಿಂದಾಗಿ ಕೊಚ್ಚಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಈ ವೇಳೆ ಎರಡೂ ಟೈರ್ ಗಳು ಸ್ಫೋಟಗೊಂಡಿದ್ದು ಅದೃಷ್ಟವಶಾತ್ ದೊಡ್ಡ ಅನಾಹುತ ತಪ್ಪಿದೆ.
ಜೆಡ್ಡಾದಿಂದ ಕೋಝಿಕ್ಕೋಡ್ಗೆ ತೆರಳುತ್ತಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ IX 398, ಲ್ಯಾಂಡಿಂಗ್ ಗೇರ್ ಮತ್ತು ಟೈರ್ ವೈಫಲ್ಯದ ಸಮಸ್ಯೆಗಳಿಂದಾಗಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಕೊಚ್ಚಿನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ವಕ್ತಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮುಖ್ಯ ಲ್ಯಾಂಡಿಂಗ್ ಗೇರ್ ಮತ್ತು ಟೈರ್ ವೈಫಲ್ಯದ ತಾಂತ್ರಿಕ ಸಮಸ್ಯೆಯಿಂದಾಗಿ ಏರ್ ಇಂಡಿಯಾ ವಿಮಾನವನ್ನು ತುರ್ತು ಭೂಸ್ಪರ್ಶಕ್ಕಾಗಿ ಕೊಚ್ಚಿಗೆ ಡೈವರ್ಟ್ ಮಾಡಲಾಯಿತು. ಸಂಪೂರ್ಣ ತುರ್ತು ಪರಿಸ್ಥಿತಿಯಲ್ಲಿ ರನ್ ವೇ ಪೂರ್ತಿ ತೆರವುಗೊಳಿಸಿ ಇಂದು ಬೆಳಗ್ಗೆ 09.07 ಕ್ಕೆ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಲಾಯಿತು ಎಂದು ಪ್ರಕಟಣೆ ತಿಳಿಸಿದೆ.
"ಎಲ್ಲಾ ತುರ್ತು ಸೇವೆಗಳನ್ನು ಮುಂಚಿತವಾಗಿ ಸಕ್ರಿಯಗೊಳಿಸಲಾಗಿತ್ತು. ತುರ್ತು ಲ್ಯಾಂಡ್ ಆಗಿದ್ದರಿಂದ ಪ್ರಯಾಣಿಕರು ಅಥವಾ ಸಿಬ್ಬಂದಿಗೆ ಯಾವುದೇ ಗಾಯಗಳಾಗಿಲ್ಲ. ಲ್ಯಾಂಡಿಂಗ್ ನಂತರದ ಪರಿಶೀಲನೆಯಲ್ಲಿ ಬಲಭಾಗದ ಎರಡೂ ಟೈರ್ಗಳು ಸಿಡಿದಿರುವುದು ದೃಢಪಟ್ಟಿದೆ" ಎಂದು CIAL ವಕ್ತಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
An Air India Express flight carrying 160 passengers from Jeddah to Kozhikode was forced to make an emergency landing at Cochin International Airport on December 18 following a technical malfunction. The aircraft, operating as flight IX 398, developed issues related to the landing gear and tyres, prompting authorities to divert it to Kochi.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm