ಬ್ರೇಕಿಂಗ್ ನ್ಯೂಸ್
18-12-25 04:34 pm HK News Desk ದೇಶ - ವಿದೇಶ
ಕೊಚ್ಚಿ, ಡಿ.18 : ಜೆಡ್ಡಾದಿಂದ ಕೋಝಿಕ್ಕೋಡ್ಗೆ 160 ಪ್ರಯಾಣಿಕರನ್ನು ಹೊತ್ತು ಹಾರುತ್ತಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನವು ತಾಂತ್ರಿಕ ವೈಫಲ್ಯದಿಂದಾಗಿ ಕೊಚ್ಚಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಈ ವೇಳೆ ಎರಡೂ ಟೈರ್ ಗಳು ಸ್ಫೋಟಗೊಂಡಿದ್ದು ಅದೃಷ್ಟವಶಾತ್ ದೊಡ್ಡ ಅನಾಹುತ ತಪ್ಪಿದೆ.
ಜೆಡ್ಡಾದಿಂದ ಕೋಝಿಕ್ಕೋಡ್ಗೆ ತೆರಳುತ್ತಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ IX 398, ಲ್ಯಾಂಡಿಂಗ್ ಗೇರ್ ಮತ್ತು ಟೈರ್ ವೈಫಲ್ಯದ ಸಮಸ್ಯೆಗಳಿಂದಾಗಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಕೊಚ್ಚಿನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ವಕ್ತಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮುಖ್ಯ ಲ್ಯಾಂಡಿಂಗ್ ಗೇರ್ ಮತ್ತು ಟೈರ್ ವೈಫಲ್ಯದ ತಾಂತ್ರಿಕ ಸಮಸ್ಯೆಯಿಂದಾಗಿ ಏರ್ ಇಂಡಿಯಾ ವಿಮಾನವನ್ನು ತುರ್ತು ಭೂಸ್ಪರ್ಶಕ್ಕಾಗಿ ಕೊಚ್ಚಿಗೆ ಡೈವರ್ಟ್ ಮಾಡಲಾಯಿತು. ಸಂಪೂರ್ಣ ತುರ್ತು ಪರಿಸ್ಥಿತಿಯಲ್ಲಿ ರನ್ ವೇ ಪೂರ್ತಿ ತೆರವುಗೊಳಿಸಿ ಇಂದು ಬೆಳಗ್ಗೆ 09.07 ಕ್ಕೆ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಲಾಯಿತು ಎಂದು ಪ್ರಕಟಣೆ ತಿಳಿಸಿದೆ.
"ಎಲ್ಲಾ ತುರ್ತು ಸೇವೆಗಳನ್ನು ಮುಂಚಿತವಾಗಿ ಸಕ್ರಿಯಗೊಳಿಸಲಾಗಿತ್ತು. ತುರ್ತು ಲ್ಯಾಂಡ್ ಆಗಿದ್ದರಿಂದ ಪ್ರಯಾಣಿಕರು ಅಥವಾ ಸಿಬ್ಬಂದಿಗೆ ಯಾವುದೇ ಗಾಯಗಳಾಗಿಲ್ಲ. ಲ್ಯಾಂಡಿಂಗ್ ನಂತರದ ಪರಿಶೀಲನೆಯಲ್ಲಿ ಬಲಭಾಗದ ಎರಡೂ ಟೈರ್ಗಳು ಸಿಡಿದಿರುವುದು ದೃಢಪಟ್ಟಿದೆ" ಎಂದು CIAL ವಕ್ತಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
An Air India Express flight carrying 160 passengers from Jeddah to Kozhikode was forced to make an emergency landing at Cochin International Airport on December 18 following a technical malfunction. The aircraft, operating as flight IX 398, developed issues related to the landing gear and tyres, prompting authorities to divert it to Kochi.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am