ಬ್ರೇಕಿಂಗ್ ನ್ಯೂಸ್
20-12-25 01:51 pm HK News Desk ದೇಶ - ವಿದೇಶ
ತಿರುವನಂತಪುರಂ, ಡಿ.20 : ಶಬರಿಮಲೆ ಅಯ್ಯಪ್ಪ ದೇಗುಲದ ಚಿನ್ನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ವಿಶೇಷ ತನಿಖಾ ತಂಡದ ಪೊಲೀಸರು ಚಿನ್ನವನ್ನು ಖರೀದಿಸಿದ್ದ ಬಳ್ಳಾರಿ ಮೂಲದ ಜುವೆಲ್ಲರಿ ಮಾಲಕ ಸೇರಿ ಇಬ್ಬರನ್ನು ಕರ್ನಾಟಕದಲ್ಲಿ ಬಂಧಿಸಿದೆ.
ಶಬರಿಮಲೆ ದೇಗುಲದಲ್ಲಿ ಕಲಾಕೃತಿಗಳಿಗೆ ವಿದ್ಯುತ್ ಲೇಪನ ಮಾಡಿದ್ದ ಬೆಂಗಳೂರಿನ ‘ಸ್ಮಾರ್ಟ್ ಕ್ರಿಯೇಷನ್ಸ್’ ಸಿಇಒ ಪಂಕಜ್ ಭಂಡಾರಿ ಹಾಗೂ ಬಳ್ಳಾರಿಯ ಚಿನ್ನದ ಉದ್ಯಮಿ ಗೋವರ್ಧನ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಬಳಿಕ ಬಂಧಿಸಲಾಗಿದೆ. ಇವರನ್ನು ತಿರುವನಂತಪುರದ ಅಪರಾಧ ವಿಭಾಗದ ಕಚೇರಿಗೆ ಕರೆತಂದು ವಿಚಾರಣೆಗೆ ಒಳಪಡಿಸಿದ್ದು ಖಚಿತ ಸಾಕ್ಷ್ಯ ಸಿಕ್ಕಿದ ಬಳಿಕ ಬಂಧನ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
2019ರಲ್ಲಿ ದೇವಸ್ಥಾನದ ಟ್ರಸ್ಟಿಯಾಗಿದ್ದ ಆರೋಪಿ ಉಣ್ಣಿಕೃಷ್ಣನ್ ಪೋಟಿ, ದ್ವಾರಪಾಲಕ ಮೂರ್ತಿಗಳು ಹಾಗೂ ಗರ್ಭಗುಡಿಯ ದ್ವಾರಕ್ಕೆ ವಿದ್ಯುತ್ ಅಲಂಕಾರಕ್ಕಾಗಿ ಸ್ಮಾರ್ಟ್ ಕ್ರಿಯೇಷನ್ಗೆ ತೆಗೆದಕೊಂಡು ಹೋಗಿದ್ದರು. ಆ ವೇಳೆ ಅದರಲ್ಲಿದ್ದ 400 ಗ್ರಾಮ್ ಚಿನ್ನವನ್ನು ತೆಗೆಯಲಾಗಿದೆ ಎನ್ನುವುದು ಎಸ್ಐಟಿ ತನಿಖೆಯಲ್ಲಿ ಪತ್ತೆಯಾಗಿದೆ.
ಕಳವುಗೈದ ಚಿನ್ನವನ್ನು ಜುವೆಲ್ಲರಿ ಉದ್ಯಮಿ ಗೋವರ್ಧನ್ ಅವರಿಗೆ ಮಾರಾಟ ಮಾಡಲಾಗಿದೆ ಎಂದು ಉಣ್ಣಿಕೃಷ್ಣನ್ ಪೋಟಿ ವಿಚಾರಣೆ ವೇಳೆ ಬಾಯಿ ಬಿಟ್ಟಿದ್ದಾನೆ. ಇದರಂತೆ ಬೆಂಗಳೂರು, ಬಳ್ಳಾರಿಯಲ್ಲಿ ತನಿಖೆ ನಡೆಸಿದ ಪೊಲೀಸರು
ದ್ವಾರಪಾಲಕ ಮೂರ್ತಿಗಳ ಚಿನ್ನಗಳವು ಪ್ರಕರಣದದಲ್ಲಿ ಪಂಕಜ್ ಭಂಡಾರಿ ಹಾಗೂ ಗೋವರ್ಧನ್ ಆರೋಪಿತರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣ ದಾಖಲಿಸಿದ ಬೆನ್ನಲ್ಲೇ ಇವರನ್ನು ಎಸ್ಐಟಿ ವಿಚಾರಣೆ ನಡೆಸಿತ್ತು. ಈಗಾಗಲೇ ಪೊಲೀಸರು ಗೋವರ್ಧನ್ ಅವರಿಗೆ ಸೇರಿದ ಚಿನ್ನದ ಜುವೆಲ್ಲರಿಯಿಂದ 400 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದೆ.
In a major breakthrough in the Sabarimala Ayyappa Temple gold theft case, the Special Investigation Team (SIT) has arrested two individuals in Karnataka, including a Ballari-based jeweller who allegedly purchased the stolen gold.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm