ಬ್ರೇಕಿಂಗ್ ನ್ಯೂಸ್
20-12-25 01:51 pm HK News Desk ದೇಶ - ವಿದೇಶ
ತಿರುವನಂತಪುರಂ, ಡಿ.20 : ಶಬರಿಮಲೆ ಅಯ್ಯಪ್ಪ ದೇಗುಲದ ಚಿನ್ನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ವಿಶೇಷ ತನಿಖಾ ತಂಡದ ಪೊಲೀಸರು ಚಿನ್ನವನ್ನು ಖರೀದಿಸಿದ್ದ ಬಳ್ಳಾರಿ ಮೂಲದ ಜುವೆಲ್ಲರಿ ಮಾಲಕ ಸೇರಿ ಇಬ್ಬರನ್ನು ಕರ್ನಾಟಕದಲ್ಲಿ ಬಂಧಿಸಿದೆ.
ಶಬರಿಮಲೆ ದೇಗುಲದಲ್ಲಿ ಕಲಾಕೃತಿಗಳಿಗೆ ವಿದ್ಯುತ್ ಲೇಪನ ಮಾಡಿದ್ದ ಬೆಂಗಳೂರಿನ ‘ಸ್ಮಾರ್ಟ್ ಕ್ರಿಯೇಷನ್ಸ್’ ಸಿಇಒ ಪಂಕಜ್ ಭಂಡಾರಿ ಹಾಗೂ ಬಳ್ಳಾರಿಯ ಚಿನ್ನದ ಉದ್ಯಮಿ ಗೋವರ್ಧನ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಬಳಿಕ ಬಂಧಿಸಲಾಗಿದೆ. ಇವರನ್ನು ತಿರುವನಂತಪುರದ ಅಪರಾಧ ವಿಭಾಗದ ಕಚೇರಿಗೆ ಕರೆತಂದು ವಿಚಾರಣೆಗೆ ಒಳಪಡಿಸಿದ್ದು ಖಚಿತ ಸಾಕ್ಷ್ಯ ಸಿಕ್ಕಿದ ಬಳಿಕ ಬಂಧನ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
2019ರಲ್ಲಿ ದೇವಸ್ಥಾನದ ಟ್ರಸ್ಟಿಯಾಗಿದ್ದ ಆರೋಪಿ ಉಣ್ಣಿಕೃಷ್ಣನ್ ಪೋಟಿ, ದ್ವಾರಪಾಲಕ ಮೂರ್ತಿಗಳು ಹಾಗೂ ಗರ್ಭಗುಡಿಯ ದ್ವಾರಕ್ಕೆ ವಿದ್ಯುತ್ ಅಲಂಕಾರಕ್ಕಾಗಿ ಸ್ಮಾರ್ಟ್ ಕ್ರಿಯೇಷನ್ಗೆ ತೆಗೆದಕೊಂಡು ಹೋಗಿದ್ದರು. ಆ ವೇಳೆ ಅದರಲ್ಲಿದ್ದ 400 ಗ್ರಾಮ್ ಚಿನ್ನವನ್ನು ತೆಗೆಯಲಾಗಿದೆ ಎನ್ನುವುದು ಎಸ್ಐಟಿ ತನಿಖೆಯಲ್ಲಿ ಪತ್ತೆಯಾಗಿದೆ.
ಕಳವುಗೈದ ಚಿನ್ನವನ್ನು ಜುವೆಲ್ಲರಿ ಉದ್ಯಮಿ ಗೋವರ್ಧನ್ ಅವರಿಗೆ ಮಾರಾಟ ಮಾಡಲಾಗಿದೆ ಎಂದು ಉಣ್ಣಿಕೃಷ್ಣನ್ ಪೋಟಿ ವಿಚಾರಣೆ ವೇಳೆ ಬಾಯಿ ಬಿಟ್ಟಿದ್ದಾನೆ. ಇದರಂತೆ ಬೆಂಗಳೂರು, ಬಳ್ಳಾರಿಯಲ್ಲಿ ತನಿಖೆ ನಡೆಸಿದ ಪೊಲೀಸರು
ದ್ವಾರಪಾಲಕ ಮೂರ್ತಿಗಳ ಚಿನ್ನಗಳವು ಪ್ರಕರಣದದಲ್ಲಿ ಪಂಕಜ್ ಭಂಡಾರಿ ಹಾಗೂ ಗೋವರ್ಧನ್ ಆರೋಪಿತರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣ ದಾಖಲಿಸಿದ ಬೆನ್ನಲ್ಲೇ ಇವರನ್ನು ಎಸ್ಐಟಿ ವಿಚಾರಣೆ ನಡೆಸಿತ್ತು. ಈಗಾಗಲೇ ಪೊಲೀಸರು ಗೋವರ್ಧನ್ ಅವರಿಗೆ ಸೇರಿದ ಚಿನ್ನದ ಜುವೆಲ್ಲರಿಯಿಂದ 400 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದೆ.
In a major breakthrough in the Sabarimala Ayyappa Temple gold theft case, the Special Investigation Team (SIT) has arrested two individuals in Karnataka, including a Ballari-based jeweller who allegedly purchased the stolen gold.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am