ಬ್ರೇಕಿಂಗ್ ನ್ಯೂಸ್
26-12-25 09:41 pm HK News Desk ದೇಶ - ವಿದೇಶ
ತಿರುವನಂತಪುರಂ, ಡಿ.26 : ಇದೇ ಮೊದಲ ಬಾರಿಗೆ ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರ ಹಿಡಿದಿದ್ದು 40 ವರ್ಷಗಳ ಎಡಪಂಥೀಯರ ಆಡಳಿತದ ಬಳಿಕ ವೃತ್ತಿಯಲ್ಲಿ ವಕೀಲರೂ ಆಗಿರುವ ವಿವಿ ರಾಜೇಶ್ ಹೊಸ ಮೇಯರ್ ಆಗುವುದರೊಂದಿಗೆ ಇತಿಹಾಸ ನಿರ್ಮಿಸಿದ್ದಾರೆ.
49 ವರ್ಷದ ರಾಜೇಶ್ ಕೇರಳ ರಾಜಧಾನಿ ತಿರುವನಂತಪುರ ಮಹಾನಗರ ಪಾಲಿಕೆಯಲ್ಲಿ ಬಿಜೆಪಿಯ ಮೊದಲ ಮೇಯರ್ ಆಗಿ ಅಧಿಕಾರ ಸ್ವೀಕರಿಸಿದ್ದಾರೆ. ನಾಲ್ಕು ದಶಕಗಳ ಎಡ ಪ್ರಜಾಸತ್ತಾತ್ಮಕ ರಂಗದ (ಎಲ್ಡಿಎಫ್) ಆಳ್ವಿಕೆ ಅಗತ್ಯವಾಗಿದ್ದು ವಿವಿ ರಾಜೇಶ್ ಮೇಯರ್ ಚುನಾವಣೆಯಲ್ಲಿ 51 ಮತಗಳನ್ನು ಪಡೆದು ಅಧಿಕಾರಕ್ಕೇರಿದರು. ಎರಡು ಮತಗಳನ್ನು ಅಮಾನ್ಯವೆಂದು ಘೋಷಿಸಲಾಯಿತು. ಪ್ರಮಾಣ ವಚನ ಸಮಾರಂಭದ ವೀಕ್ಷಣೆಗಾಗಿ ನೂರಾರು ಬಿಜೆಪಿ ಕಾರ್ಯಕರ್ತರು ಜಮಾಯಿಸಿದ್ದರು.
ಇತ್ತೀಚಿನ ಚುನಾವಣೆಯಲ್ಲಿ ಒಟ್ಟು 101 ಸ್ಥಾನಗಳಲ್ಲಿ ಐವತ್ತು ಸ್ಥಾನಗಳನ್ನು ಪಡೆಯುವ ಮೂಲಕ ಬಿಜೆಪಿ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಇಬ್ಬರು ಸ್ವತಂತ್ರ ಅಭ್ಯರ್ಥಿಗಳಲ್ಲಿ ಒಬ್ಬರಾದ ಕಣ್ಣಮೂಲ ವಾರ್ಡ್ನಿಂದ ಗೆದ್ದ ಪಟ್ಟೂರ್ ರಾಧಾಕೃಷ್ಣನ್ ಬಿಜೆಪಿಗೆ ಬೆಂಬಲ ವ್ಯಕ್ತಪಡಿಸಿದ್ದು ಇದರಿಂದಾಗಿ ಸರಳ ಬಹುಮತ ಪಡೆಯಿತು.
ಎಲ್ಡಿಎಫ್ ಮತ್ತು ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ ಕ್ರಮವಾಗಿ 29 ಮತ್ತು 19 ಸ್ಥಾನಗಳನ್ನು ಗೆದ್ದಿವೆ. ಎರಡನೇ ಅವಧಿಗೆ ಪಾಲಿಕೆಗೆ ಆಯ್ಕೆಯಾಗಿರುವ ರಾಜೇಶ್, ಕೊಡಂಗನೂರು ವಾರ್ಡ್ ಪ್ರತಿನಿಧಿಸುತ್ತಾರೆ. ಪ್ರಮಾಣವಚನ ಸಮಾರಂಭದಲ್ಲಿ ಬಿಜೆಪಿ ರಾಜ್ಯ ಅಧ್ಯಕ್ಷ ರಾಜೀವ್ ಚಂದ್ರಶೇಖರ್, ಕೇಂದ್ರ ಸಚಿವ ಸುರೇಶ್ ಗೋಪಿ, ಮಾಜಿ ಅಧ್ಯಕ್ಷ ಕೆ. ಸುರೇಂದ್ರನ್, ಸಿ.ಕೆ ಪದ್ಮನಾಭನ್ ಮತ್ತು ಸಿಪಿಎಂನ ಮಾಜಿ ಸಚಿವ ಕಡಕಂಪಳ್ಳಿ ಸುರೇಂದ್ರನ್ ಭಾಗವಹಿಸಿದ್ದರು.
ಕಾನೂನು ಪದವೀಧರರಾದ ವಿ.ವಿ. ರಾಜೇಶ್ ಪ್ರಸ್ತುತ ಬಿಜೆಪಿಯ ರಾಜ್ಯ ಕಾರ್ಯದರ್ಶಿಯಾಗಿದ್ದಾರೆ. ಹಿಂದೆ, ಅವರು ಪಕ್ಷದ ತಿರುವನಂತಪುರಂ ಜಿಲ್ಲಾ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಬಿಜೆಪಿಯ ಉಪ ಮೇಯರ್ ಅಭ್ಯರ್ಥಿ ಜಿ.ಎಸ್. ಆಶಾನಾಥ್ ಮೂರನೇ ಬಾರಿಗೆ ಕೌನ್ಸಿಲರ್ ಆಗಿದ್ದಾರೆ. ಅವರು ಕರುಮಂ ವಾರ್ಡ್ ಪ್ರತಿನಿಧಿಸುತ್ತಾರೆ.
In a historic political shift, the Bharatiya Janata Party (BJP) has taken control of the Thiruvananthapuram Municipal Corporation for the first time, ending 40 years of uninterrupted Left Democratic Front (LDF) governance. Advocate V.V. Rajesh, 49, has been elected as the city’s first BJP Mayor after securing 51 votes in the mayoral election, with two votes declared invalid.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm