ಬ್ರೇಕಿಂಗ್ ನ್ಯೂಸ್
01-01-26 09:34 pm HK News Desk ದೇಶ - ವಿದೇಶ
ಢಾಕಾ, ಜ.1 : ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲಿನ ಹಿಂಸಾಚಾರ ಮುಂದುವರಿದಿದ್ದು ಗುಂಪೊಂದು ಮತ್ತೊಬ್ಬ ಹಿಂದೂ ವ್ಯಕ್ತಿ ಮೇಲೆ ಹಲ್ಲೆ ನಡೆಸಿ ಬೆಂಕಿ ಹಚ್ಚಿದೆ. 50 ವರ್ಷದ ಖೋಕೊನ್ ದಾಸ್ ಎಂಬ ವ್ಯಕ್ತಿ ಹಲ್ಲೆ ನಡೆಸಿ ಬೆಂಕಿ ಹಚ್ಚಿ ಸುಟ್ಟು ಹಾಕಲು ಯತ್ನಿಸಲಾಗಿದೆ.
ದಾಸ್ ಗಂಭೀರ ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಬಾಂಗ್ಲಾದೇಶದ ಶರಿಯತ್ಪುರ ಜಿಲ್ಲೆಯಲ್ಲಿ ಡಿಸೆಂಬರ್ 31 ರಂದು ಘಟನೆ ನಡೆದಿದ್ದು ಖೋಕೊನ್ ದಾಸ್ ತನ್ನ ಮನೆಗೆ ಹೋಗುತ್ತಿದ್ದಾಗ ಅಡ್ಡಗಟ್ಟಿದ ಗುಂಪೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದು, ಬೆಂಕಿ ಹಚ್ಚಿ ಸಜೀವ ಸುಟ್ಟು ಹಾಕಲು ಯತ್ನಿಸಿದೆ ಎಂದು ಅವರು ಆರೋಪಿಸಿದ್ದಾರೆ.


ಕೆಯೋರ್ಬಂಗಾ ಪ್ರದೇಶದಲ್ಲಿ ಫಾರ್ಮಸಿ ನಡೆಸುತ್ತಿದ್ದ ದಾಸ್, ಮನೆಗೆ ಹಿಂದಿರುಗುತ್ತಿದ್ದಾಗ ದಾಳಿ ನಡೆಸಲಾಗಿದೆ. ಉದ್ರಿಕ್ತ ಗುಂಪು ದಾಸ್ ಅವರ ಹೊಟ್ಟೆಯ ಭಾಗಕ್ಕೆ ಇರಿದು ಗಾಯಗೊಳಿಸಿದೆ. ಬಳಿಕ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದೆ. ಆದರೆ ದಾಸ್ ಅವರು ಅಲ್ಲಿಯೇ ಸಮೀಪದಲ್ಲಿದ್ದ ಕೆರೆಗೆ ಹಾರಿ ಅಪಾಯದಿಂದ ಪಾರಾಗಿದ್ದಾರೆ. ದಾಸ್ ಅವರನ್ನು ತಕ್ಷಣ ಶರಿಯತ್ಪುರ ಸದರ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ನಂತರ ಅವರನ್ನು ಢಾಕಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸಾಗಿಸಿದ್ದು ಅವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.
ಎರಡು ವಾರಗಳಲ್ಲಿ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆದ ನಾಲ್ಕನೇ ದಾಳಿ ಇದಾಗಿದೆ. ಡಿಸೆಂಬರ್ 24ರಂದು 29 ವರ್ಷದ ಅಮೃತ್ ಮೊಂಡಲ್ ಎಂಬ ಯುವಕನ ಹತ್ಯೆಯಾಗಿತ್ತು. ಡಿ.18ರಂದು ದೀಪು ಚಂದ್ರದಾಸ್ ಎಂಬ 25 ವರ್ಷದ ಯುವಕನನ್ನು ಉದ್ರಿಕ್ತ ಗುಂಪು ಹತ್ಯೆಗೈದು ಸುಟ್ಟು ಹಾಕಿತ್ತು. ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ಸರಣಿ ದಾಳಿ ನಡೆಯುತ್ತಿದ್ದು, ಜಗತ್ತಿನಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.
In yet another shocking attack on the Hindu minority community in Bangladesh, a 50-year-old man, Khokon Das, was brutally assaulted and set on fire by a mob in Shariatpur district on December 31.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am