ಬ್ರೇಕಿಂಗ್ ನ್ಯೂಸ್
07-01-26 04:47 pm HK News Desk ದೇಶ - ವಿದೇಶ
ನವದೆಹಲಿ, ಜ.7 : ದೆಹಲಿಯ ರಾಮಲೀಲಾ ಮೈದಾನದ ಬಳಿಯಿರುವ ಸೈಯದ್ ಫೈಜ್ ಇಲಾಹಿ ಮಸೀದಿ ಬಳಿಯ ಅತಿಕ್ರಮಣ ತೆರವು ಕಾರ್ಯಾಚರಣೆ ಮಾಡುತ್ತಿದ್ದಾಗ ಸ್ಥಳೀಯರು ಏಕಾಏಕಿ ಪೊಲೀಸರ ಮೇಲೆ ಕಲ್ಲು ಮತ್ತು ಬಾಟಲಿಗಳನ್ನು ತೂರಿ ಹಿಂಸಾಚಾರಕ್ಕಿಳಿದಿದ್ದು, ಐವರು ಪೊಲೀಸ್ ಸಿಬಂದಿ ಗಾಯಗೊಂಡಿದ್ದಾರೆ. ಘಟನೆ ಸಂಬಂಧಿಸಿ ಪೊಲೀಸರು ಐವರನ್ನು ಬಂಧಿಸಿದ್ದಾರೆ.
ಕೋರ್ಟ್ ಆದೇಶದಂತೆ, ಸರ್ಕಾರಿ ಜಾಗದ ಅತಿಕ್ರಮಣವನ್ನು ತೆರವು ಮಾಡಲು ದೆಹಲಿ ಮಹಾನಗರ ಪಾಲಿಕೆ ಮುಂದಾಗಿತ್ತು. ಈ ವೇಳೆ, ಸ್ಥಳೀಯ ಜನರು ವಿರೋಧಿಸಿದ್ದು ಪೊಲೀಸರ ಮೇಲೆ ಕಲ್ಲು ತೂರಾಟ ಆರಂಭಿಸಿದ್ದಾರೆ. ಬಳಿಕ ಪೊಲೀಸರು ಅಶ್ರುವಾಯು ಮತ್ತು ಜಲಫಿರಂಗಿ ಮೂಲಕ ಉದ್ರಿಕ್ತರನ್ನು ಚದುರಿಸಿದ್ದಾರೆ. ಸಿಸಿಟಿವಿ ಆಧರಿಸಿ ಕಲ್ಲು ತೂರಾಟ ನಡೆಸಿದವರನ್ನು ಪತ್ತೆ ಮಾಡುತ್ತಿದ್ದಾರೆ. ಅಲ್ಲದೆ, ಇದು ಉದ್ದೇಶಪೂರ್ವಕ ಕೃತ್ಯವೇ ಅಥವಾ ಅನಿರೀಕ್ಷಿತ ಬೆಳವಣಿಗೆಯೇ ಎಂದು ತನಿಖೆ ನಡೆಸುತ್ತಿದ್ದಾರೆ.




ತೆರವು ಕಾರ್ಯಾಚರಣೆಯಿಂದ ಮಸೀದಿಗೆ ಯಾವುದೇ ಹಾನಿಯಾಗಿಲ್ಲ. ದೆಹಲಿ ಹೈಕೋರ್ಟ್ ಸೂಚನೆಯಂತೆ ಅತಿಕ್ರಮಣ ತೆರವು ಮಾಡುತ್ತಿದ್ದು ಪಾಲಿಕೆಯಿಂದ 300 ರಷ್ಟು ಕಾರ್ಮಿಕರು, 30 ಜೆಸಿಬಿ ಇನ್ನಿತರ ವಾಹನಗಳನ್ನು ಬಳಸಲಾಗಿದೆ. ಅತಿಕ್ರಮಿಸಿ ಕಟ್ಟಲಾಗಿರುವ ಕಟ್ಟಡ ಸೇರಿದಂತೆ ಎಲ್ಲವನ್ನೂ ನೆಲಸಮ ಮಾಡಲಾಗುವುದು, ರಾತ್ರಿಯೂ ತೆರವು ಕಾರ್ಯ ಮುಂದುವರಿಯಲಿದೆ ಎಂದು ಪಾಲಿಕೆಯ ಅಧಿಕಾರಿಗಳು ತಿಳಿಸಿದ್ದಾರೆ.
ಹಿಂಸೆಯನ್ನು ಯಾವುದೇ ಕಾರಣಕ್ಕು ಸಹಿಸುವುದಿಲ್ಲ. ಮಸೀದಿ ಆವರಣದಲ್ಲಿ ಅಕ್ರಮವಾಗಿ ಕಟ್ಟಲಾಗಿರುವ ಕಟ್ಟಡಗಳನ್ನು ಕೋರ್ಟ್ ಆದೇಶದಂತೆ ತೆರವು ಮಾಡಲಾಗುವುದು. ಇದರ ನೆಪದಲ್ಲಿ ಹಿಂಸೆಗೆ ಇಳಿದರೆ ಕಠಿಣ ಕ್ರಮ ಜರುಗಿಸಲಾಗುವುದು ದೆಹಲಿ ಸರ್ಕಾರದ ಗೃಹ ಸಚಿವ ಆಶಿಶ್ ಸೂದ್ ತಿಳಿಸಿದ್ದಾರೆ.
Violence broke out in Delhi when locals began pelting stones and bottles at police officers during an anti-encroachment demolition drive near the Sayed Faiz Ilahi Mosque, located close to the Ramlila Maidan. Five police personnel were injured in the attack, and the police have arrested five individuals in connection with the incident.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm