ಬ್ರೇಕಿಂಗ್ ನ್ಯೂಸ್
07-01-26 09:37 pm HK News Desk ದೇಶ - ವಿದೇಶ
ಮುಂಬೈ, ಜ.7 : ಮಹಾರಾಷ್ಟ್ರದಲ್ಲಿ ಬಿಜೆಪಿ- ಶಿಂಧೆ ಬಣದ ಶಿವಸೇನೆ ಮೈತ್ರಿ ಸರ್ಕಾರ ಆಡಳಿತದಲ್ಲಿದ್ದರೂ, ಅಚ್ಚರಿಯ ಬೆಳವಣಿಗೆಯಲ್ಲಿ ನಗರಸಭೆಯೊಂದರ ಅಧಿಕಾರ ಪಡೆಯಲು ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯನ್ನು ದೂರವಿರಿಸಿ ಬಿಜೆಪಿ, ಕಾಂಗ್ರೆಸ್ ಜೊತೆ ಸೇರಿ ಅಧಿಕಾರ ಹಿಡಿದಿದೆ.
ಮಹಾರಾಷ್ಟ್ರದ ಅಂಬರ್ನಾಥ್ ನಗರಸಭೆಯಲ್ಲಿ ಬಿಜೆಪಿ ಸದಸ್ಯೆ ತೇಜಶ್ರೀ ಕರಂಜುಲೆ ಮೇಯರ್ ಪಟ್ಟವನ್ನು ಅಲಂಕರಿಸಿದ್ದಾರೆ. ಬಿಜೆಪಿಯ 16, ಕಾಂಗ್ರೆಸ್ನ 12 ಮತ್ತು ಎನ್ಸಿಪಿ (ಅಜಿತ್ ಪವಾರ್ ಬಣ) ಪಕ್ಷದ ನಾಲ್ವರು ಸದಸ್ಯರ ಬೆಂಬಲವನ್ನು ಇವರ ಮೈತ್ರಿಕೂಟ ಹೊಂದಿದ್ದು, ನಗರಸಭೆಯಲ್ಲಿ ಎದುರಾಳಿ ಶಿಂಧೆ ಬಣದ ಎದುರು ಬಹುಮತ ಸಾಧಿಸಿದೆ.
ಡಿಸೆಂಬರ್ 20ರಂದು 60 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಏಕನಾಥ್ ಶಿಂಧೆ ನೇತೃತ್ವದ ಪಕ್ಷವು ಅತಿ ಹೆಚ್ಚು 27 ಸ್ಥಾನಗಳನ್ನು ಗೆದ್ದುಕೊಂಡಿದ್ದರೂ ಬಹುಮತಕ್ಕೆ 4 ಸ್ಥಾನಗಳ ಕೊರತೆಯಿತ್ತು. ಅಧಿಕೃತ ಮೈತ್ರಿ ಪಕ್ಷ ಬಿಜೆಪಿ ಎರಡನೇ ಅತಿ ದೊಡ್ಡ ಪಕ್ಷವಾಗಿ ಫಲಿತಾಂಶ ಪಡೆದಿತ್ತು. ಆದರೆ ಮೇಯರ್ ಸ್ಥಾನವನ್ನು ಶಿವಸೇನೆಗೆ ಬಿಟ್ಟು ಕೊಡಬೇಕೆಂಬ ನೆಲೆಯಲ್ಲಿ ಬಿಜೆಪಿ, ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಂಡಿದೆ.
ಅಂಬರ್ನಾಥ್ ವಿಕಾಸ್ ಅಘಾಡಿ ಹೆಸರಿನಲ್ಲಿ ಮೂರು ಪಕ್ಷಗಳು ಅಧಿಕಾರಕ್ಕಾಗಿ ಒಂದಾಗಿರುವುದು ಸ್ಪಷ್ಟವಾಗಿದೆ. ಈ ಮೈತ್ರಿಕೂಟಕ್ಕೆ ಯಾವುದೇ ಔಪಚಾರಿಕ ಸಮ್ಮತಿ ಇಲ್ಲ ಎಂದು ಕಾಂಗ್ರೆಸ್ ರಾಜ್ಯ ನಾಯಕತ್ವ ಹೇಳಿದರೆ, ಇವು ಸ್ಥಳೀಯ ಚುನಾವಣೆಗಳಾಗಿದ್ದು ಸ್ಥಳೀಯ ನಾಯಕರಿಗೆ ನಿರ್ಧಾರಗಳನ್ನು ತೆಗೆದುಕೊಳ್ಳುವ ಅಧಿಕಾರ ನೀಡಲಾಗಿದೆ ಎಂದು ಬಿಜೆಪಿ ನಾಯಕರು ಹೇಳಿಕೊಂಡಿದ್ದಾರೆ.
ಶಿಂಧೆ ಬಣದ ಶಾಸಕ ಬಾಲಾಜಿ ಕಿನಿಕರ್ ಅವರು ಈ ಮೈತ್ರಿಕೂಟವನ್ನು ಅಪವಿತ್ರ ಮೈತ್ರಿ ಎಂದು ಕರೆದಿದ್ದು ಬಿಜೆಪಿ ದ್ರೋಹ ಮಾಡಿದೆ ಎಂದು ಆರೋಪಿಸಿದ್ದಾರೆ. ಬಿಜೆಪಿ ದೇಶಾದ್ಯಂತ ಕಾಂಗ್ರೆಸ್ ಮುಕ್ತಗೊಳಿಸುವ ಬಗ್ಗೆ ಮಾತನಾಡುತ್ತಿದೆ. ಆದರೆ ಇಲ್ಲಿ ಅಧಿಕಾರಕ್ಕಾಗಿ ಕಾಂಗ್ರೆಸ್ ಜೊತೆ ಸೇರಿದ್ದು ಶಿವಸೇನೆಯ ಬೆನ್ನಿಗೆ ಚೂರಿ ಹಾಕಿದೆ ಎಂದು ದೂರಿದ್ದಾರೆ.
In a surprising political development, the BJP has joined hands with the Congress—instead of ally Shinde-led Shiv Sena—to capture power in a Maharashtra municipal council. This happened despite the BJP–Shinde faction coalition ruling the state together.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am