ಬ್ರೇಕಿಂಗ್ ನ್ಯೂಸ್
09-01-26 11:00 pm HK News Desk ದೇಶ - ವಿದೇಶ
ತಿರುವನಂತಪುರಂ, ಜ.9 : ಶಬರಿಮಲೆ ಚಿನ್ನ ಕಳವು ಪ್ರಕರಣದಲ್ಲಿ ಸನ್ನಿಧಾನದ ಪ್ರಧಾನ ತಂತ್ರಿ ಕಂಠರಾರು ರಾಜೀವಾರ್ ಅವರನ್ನು ಎಸ್ಐಟಿ ಪೊಲೀಸರು ಬಂಧಿಸಿದ್ದಾರೆ. ಶುಕ್ರವಾರ ಬೆಳಗ್ಗೆ ರಹಸ್ಯ ಕೇಂದ್ರಕ್ಕೆ ವಿಚಾರಣೆಗೆ ಕರೆಸಿದ್ದ ವಿಶೇಷ ತನಿಖಾ ತಂಡ ತಂತ್ರಿಗಳನ್ನು ವಶಕ್ಕೆ ಪಡೆದಿದೆ.
ಸುದೀರ್ಘ ವಿಚಾರಣೆ ನಡೆಸಿದ ಬಳಿಕ ಪೊಲೀಸರು ಬಂಧನದ ಬಗ್ಗೆ ಮಾಹಿತಿ ನೀಡಿದ್ದು ಬಳಿಕ ಹೆಚ್ಚಿನ ತನಿಖೆಗಾಗಿ ಕ್ರೈಂ ಬ್ರ್ಯಾಂಚ್ ಕಚೇರಿಗೆ ಕರೆದೊಯ್ದಿದ್ದಾರೆ. ಚಿನ್ನ ಕಳವು ಪ್ರಕರಣದಲ್ಲಿ ತಂತ್ರಿಗಳ ಪಾತ್ರದ ಬಗ್ಗೆ ಶಂಕೆ ಇದ್ದರೂ, ಇತರೇ ಆರೋಪಿಗಳ ಬಂಧನ, ಸಾಕ್ಷ್ಯ ಸಂಗ್ರಹ ಎಲ್ಲದರಲ್ಲೂ ರಹಸ್ಯ ಕಾಯ್ದುಕೊಂಡು ಬಂಧನ ಕ್ರಮ ಕೈಗೊಂಡಿದೆ. ತಂತ್ರಿಗಳು ಬಂಧನಕ್ಕು ಮುನ್ನ ನಿರೀಕ್ಷಣಾ ಜಾಮೀನು ಪಡೆಯಬಹುದೆಂಬ ನೆಲೆಯಲ್ಲಿ ಯಾವುದೇ ಸುಳಿವು ಬಿಟ್ಟುಕೊಡದೆ ಕಾರ್ಯಾಚರಣೆ ನಡೆಸಿದ್ದರು. ತಿರುವಿದಾಂಕೂರು ದೇವಸ್ವಂ ಮಂಡಳಿ (ಟಿಡಿಬಿ) ಮಾಜಿ ಅಧ್ಯಕ್ಷ ಪದ್ಮಕುಮಾರ್ ಬಂಧನ, ಜಾಮೀನು ಅರ್ಜಿಯಲ್ಲು ತಂತ್ರಿಗಳ ಪಾತ್ರವನ್ನು ತೋರಿಸದೆ ಎಸ್ ಐಟಿ ವಿಶೇಷ ಕಾಳಜಿ ವಹಿಸಿತ್ತು.
ಪ್ರಕರಣದ ಪ್ರಮುಖ ಆರೋಪಿ ಉಣ್ಣಿಕೃಷ್ಣನ್ ಪೋಟ್ಟಿಯನ್ನು ಸನ್ನಿಧಾನದ ಒಳಗೆ ಬಿಟ್ಟುಕೊಂಡಿರುವುದು, ಬೇಕಾಬಿಟ್ಟಿ ಸ್ವಾತಂತ್ರ್ಯ ಒದಗಿಸಿದ್ದಕ್ಕೆ ಪ್ರಧಾನ ತಂತ್ರಿಗಳೇ ಕಾರಣ ಎಂಬ ಮಾಹಿತಿ ತನಿಖಾ ತಂಡಕ್ಕೆ ಲಭಿಸಿತ್ತು. ಶಬರಿಮಲೆಯಿಂದ ಒಮ್ಮೆ ಹೊರ ಹಾಕಲ್ಪಟ್ಟ ಪೋಟ್ಟಿಯನ್ನು ಪ್ರಾಯೋಜಕತ್ವದ ಮರೆಯಲ್ಲಿ ಮತ್ತೆ ಶಬರಿಮಲೆಗೆ ಕರೆಸಿರುವುದು ಕಂಠರಾರು ರಾಜೀವರ್ ಆಗಿದ್ದರು ಎಂದು ತನಿಖಾ ತಂಡ ಪತ್ತೆಹಚ್ಚಿದೆ. ನಾನಾ ಹಂತಗಳಲ್ಲಿ ನಡೆದ ಚಿನ್ನ ಲೂಟಿಯ ಬಗ್ಗೆ ತಂತ್ರಿಗಳಿಗೆ ತಿಳಿದಿತ್ತು ಎಂಬ ಮಾಹಿತಿ ತನಿಖಾ ತಂಡಕ್ಕೆ ಲಭಿಸಿದೆ. ಚಿನ್ನ ಹಸ್ತಾಂತರಕ್ಕೆ ಸಂಬಂಧಿಸಿ ತಂತ್ರಿಗಳ ಅನುಮತಿಯನ್ನೂ ಮರೆ
ಶಬರಿಮಲೆ ಸನ್ನಿಧಾನಕ್ಕೆ ಸಂಬಂಧಿಸಿದ ಯಾವುದೇ ವಿಚಾರಗಳಿಗೂ ಪ್ರಧಾನ ತಂತ್ರಿಯ ಅನುಮತಿ ಬೇಕಾಗುತ್ತದೆ. ದ್ವಾರಗಳಿಗೆ ಚಿನ್ನ ಲೇಪನ, ಅವುಗಳ ದುರಸ್ತಿ ವಿಚಾರದಲ್ಲಿ ಪ್ರಧಾನ ತಂತ್ರಿಗೆ ತಿಳಿಯದೆ ಆಗಿರಲು ಸಾಧ್ಯವಿಲ್ಲ. ಹೀಗಾಗಿ ಎಸ್ಐಟಿ ತಂಡಕ್ಕೆ ಮೊದಲೇ ಮಾಹಿತಿ ಇತ್ತಾದರೂ ಒಬ್ಬೊಬ್ಬರನ್ನೇ ಬಂಧನ ಮಾಡುತ್ತ ಬಂದಿದೆ.
In a major development in the Sabarimala gold theft case, the Special Investigation Team (SIT) has arrested Chief Tantri Kanthararu Rajeevar after summoning him discreetly for questioning. Following prolonged interrogation at a confidential location, he was taken into custody and later shifted to the Crime Branch office for further investigation. The SIT acted cautiously to prevent anticipatory bail, gathering evidence linking the Tantri to alleged lapses and permissions connected to the theft.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm