ಬ್ರೇಕಿಂಗ್ ನ್ಯೂಸ್
09-01-26 11:00 pm HK News Desk ದೇಶ - ವಿದೇಶ
ತಿರುವನಂತಪುರಂ, ಜ.9 : ಶಬರಿಮಲೆ ಚಿನ್ನ ಕಳವು ಪ್ರಕರಣದಲ್ಲಿ ಸನ್ನಿಧಾನದ ಪ್ರಧಾನ ತಂತ್ರಿ ಕಂಠರಾರು ರಾಜೀವಾರ್ ಅವರನ್ನು ಎಸ್ಐಟಿ ಪೊಲೀಸರು ಬಂಧಿಸಿದ್ದಾರೆ. ಶುಕ್ರವಾರ ಬೆಳಗ್ಗೆ ರಹಸ್ಯ ಕೇಂದ್ರಕ್ಕೆ ವಿಚಾರಣೆಗೆ ಕರೆಸಿದ್ದ ವಿಶೇಷ ತನಿಖಾ ತಂಡ ತಂತ್ರಿಗಳನ್ನು ವಶಕ್ಕೆ ಪಡೆದಿದೆ.
ಸುದೀರ್ಘ ವಿಚಾರಣೆ ನಡೆಸಿದ ಬಳಿಕ ಪೊಲೀಸರು ಬಂಧನದ ಬಗ್ಗೆ ಮಾಹಿತಿ ನೀಡಿದ್ದು ಬಳಿಕ ಹೆಚ್ಚಿನ ತನಿಖೆಗಾಗಿ ಕ್ರೈಂ ಬ್ರ್ಯಾಂಚ್ ಕಚೇರಿಗೆ ಕರೆದೊಯ್ದಿದ್ದಾರೆ. ಚಿನ್ನ ಕಳವು ಪ್ರಕರಣದಲ್ಲಿ ತಂತ್ರಿಗಳ ಪಾತ್ರದ ಬಗ್ಗೆ ಶಂಕೆ ಇದ್ದರೂ, ಇತರೇ ಆರೋಪಿಗಳ ಬಂಧನ, ಸಾಕ್ಷ್ಯ ಸಂಗ್ರಹ ಎಲ್ಲದರಲ್ಲೂ ರಹಸ್ಯ ಕಾಯ್ದುಕೊಂಡು ಬಂಧನ ಕ್ರಮ ಕೈಗೊಂಡಿದೆ. ತಂತ್ರಿಗಳು ಬಂಧನಕ್ಕು ಮುನ್ನ ನಿರೀಕ್ಷಣಾ ಜಾಮೀನು ಪಡೆಯಬಹುದೆಂಬ ನೆಲೆಯಲ್ಲಿ ಯಾವುದೇ ಸುಳಿವು ಬಿಟ್ಟುಕೊಡದೆ ಕಾರ್ಯಾಚರಣೆ ನಡೆಸಿದ್ದರು. ತಿರುವಿದಾಂಕೂರು ದೇವಸ್ವಂ ಮಂಡಳಿ (ಟಿಡಿಬಿ) ಮಾಜಿ ಅಧ್ಯಕ್ಷ ಪದ್ಮಕುಮಾರ್ ಬಂಧನ, ಜಾಮೀನು ಅರ್ಜಿಯಲ್ಲು ತಂತ್ರಿಗಳ ಪಾತ್ರವನ್ನು ತೋರಿಸದೆ ಎಸ್ ಐಟಿ ವಿಶೇಷ ಕಾಳಜಿ ವಹಿಸಿತ್ತು.
ಪ್ರಕರಣದ ಪ್ರಮುಖ ಆರೋಪಿ ಉಣ್ಣಿಕೃಷ್ಣನ್ ಪೋಟ್ಟಿಯನ್ನು ಸನ್ನಿಧಾನದ ಒಳಗೆ ಬಿಟ್ಟುಕೊಂಡಿರುವುದು, ಬೇಕಾಬಿಟ್ಟಿ ಸ್ವಾತಂತ್ರ್ಯ ಒದಗಿಸಿದ್ದಕ್ಕೆ ಪ್ರಧಾನ ತಂತ್ರಿಗಳೇ ಕಾರಣ ಎಂಬ ಮಾಹಿತಿ ತನಿಖಾ ತಂಡಕ್ಕೆ ಲಭಿಸಿತ್ತು. ಶಬರಿಮಲೆಯಿಂದ ಒಮ್ಮೆ ಹೊರ ಹಾಕಲ್ಪಟ್ಟ ಪೋಟ್ಟಿಯನ್ನು ಪ್ರಾಯೋಜಕತ್ವದ ಮರೆಯಲ್ಲಿ ಮತ್ತೆ ಶಬರಿಮಲೆಗೆ ಕರೆಸಿರುವುದು ಕಂಠರಾರು ರಾಜೀವರ್ ಆಗಿದ್ದರು ಎಂದು ತನಿಖಾ ತಂಡ ಪತ್ತೆಹಚ್ಚಿದೆ. ನಾನಾ ಹಂತಗಳಲ್ಲಿ ನಡೆದ ಚಿನ್ನ ಲೂಟಿಯ ಬಗ್ಗೆ ತಂತ್ರಿಗಳಿಗೆ ತಿಳಿದಿತ್ತು ಎಂಬ ಮಾಹಿತಿ ತನಿಖಾ ತಂಡಕ್ಕೆ ಲಭಿಸಿದೆ. ಚಿನ್ನ ಹಸ್ತಾಂತರಕ್ಕೆ ಸಂಬಂಧಿಸಿ ತಂತ್ರಿಗಳ ಅನುಮತಿಯನ್ನೂ ಮರೆ
ಶಬರಿಮಲೆ ಸನ್ನಿಧಾನಕ್ಕೆ ಸಂಬಂಧಿಸಿದ ಯಾವುದೇ ವಿಚಾರಗಳಿಗೂ ಪ್ರಧಾನ ತಂತ್ರಿಯ ಅನುಮತಿ ಬೇಕಾಗುತ್ತದೆ. ದ್ವಾರಗಳಿಗೆ ಚಿನ್ನ ಲೇಪನ, ಅವುಗಳ ದುರಸ್ತಿ ವಿಚಾರದಲ್ಲಿ ಪ್ರಧಾನ ತಂತ್ರಿಗೆ ತಿಳಿಯದೆ ಆಗಿರಲು ಸಾಧ್ಯವಿಲ್ಲ. ಹೀಗಾಗಿ ಎಸ್ಐಟಿ ತಂಡಕ್ಕೆ ಮೊದಲೇ ಮಾಹಿತಿ ಇತ್ತಾದರೂ ಒಬ್ಬೊಬ್ಬರನ್ನೇ ಬಂಧನ ಮಾಡುತ್ತ ಬಂದಿದೆ.
In a major development in the Sabarimala gold theft case, the Special Investigation Team (SIT) has arrested Chief Tantri Kanthararu Rajeevar after summoning him discreetly for questioning. Following prolonged interrogation at a confidential location, he was taken into custody and later shifted to the Crime Branch office for further investigation. The SIT acted cautiously to prevent anticipatory bail, gathering evidence linking the Tantri to alleged lapses and permissions connected to the theft.
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
17-02-26 12:42 pm
Mangaluru Staffer
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
17-02-26 03:03 pm
HK News Desk
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm