ಬ್ರೇಕಿಂಗ್ ನ್ಯೂಸ್
12-01-26 05:01 pm Mangaluru Staffer ದೇಶ - ವಿದೇಶ
ಕಾಸರಗೋಡು, ಜ.12: ರಾಷ್ಟ್ರೀಯ ಹೆದ್ದಾರಿ 66ರ ಕುಂಬಳೆಯ ಆರಿಕ್ಕಾಡಿಯಲ್ಲಿ ತಾತ್ಕಾಲಿಕ ಟೋಲ್ ಪ್ಲಾಜಾ ಆರಂಭಿಸುವುದನ್ನು ವಿರೋಧಿಸಿ ಮಂಜೇಶ್ವರ ಶಾಸಕ ಎಕೆಎಂ ಶರೀಫ್ ನೇತೃತ್ವದಲ್ಲಿ ಸಾವಿರಾರು ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಮೂರು ಗಂಟೆ ಕಾಲ ಧರಣಿ ಕುಳಿತ ಶಾಸಕ ಮತ್ತು ಇತರ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.
ಜ.12ರಿಂದ ತಾತ್ಕಾಲಿಕವಾಗಿ ಟೋಲ್ ಸಂಗ್ರಹಿಸಲು ಜಿಲ್ಲಾಡಳಿತ ಅನುಮತಿ ನೀಡಿದ್ದು, ಇದರಂತೆ ಸೋಮವಾರದಿಂದ ಆರಿಕ್ಕಾಡಿಯಲ್ಲಿ ಟೋಲ್ ಸಂಗ್ರಹಿಸಲು ವ್ಯವಸ್ಥೆಯಾಗಿತ್ತು. ಆದರೆ ಬೆಳಗ್ಗೆ 7 ಗಂಟೆಗೆ ಸರ್ವಪಕ್ಷಗಳ ಆಕ್ಷನ್ ಕಮಿಟಿಯ ನೇತೃತ್ವದಲ್ಲಿ ಸಾರ್ವಜನಿಕರು ಪ್ರತಿಭಟನೆ ಆರಂಭಿಸಿದ್ದಾರೆ. ಮೂರು ಗಂಟೆ ಕಾಲ ರಸ್ತೆಯಲ್ಲಿ ಧರಣಿ ನಡೆಸಿದ್ದರಿಂದ ಟ್ರಾಫಿಕ್ ಜಾಮ್ ಆಗಿದ್ದಕ್ಕೆ ಶಾಸಕ ಅಶ್ರಫ್ ಮತ್ತು ಇತರರನ್ನು ಪೊಲೀಸರು ಬಂಧಿಸಿ ಬಳಿಕ ಕುಂಬಳೆ ಠಾಣೆಗೆ ಒಯ್ದಿದ್ದಾರೆ.

ಅಲ್ಲಿಯೂ ಕಾರ್ಯಕರ್ತರು ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ, ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಶಾಸಕ ಅಶ್ರಫ್, ಕೇಂದ್ರ ಸರಕಾರದ ನಿಯಮ ಪ್ರಕಾರ 60 ಕಿಮೀಗೆ ಒಂದರಂತೆ ಟೋಲ್ ಕಲೆಕ್ಷನ್ ಮಾಡಬೇಕು. ಇಲ್ಲಿ ತಲಪಾಡಿಯಿಂದ 20 ಕಿಮೀ ಅಂತರದಲ್ಲಿ ಟೋಲ್ ಪ್ಲಾಜಾ ನಡೆಸುವುದಕ್ಕೆ ನಮ್ಮ ವಿರೋಧ ಇದೆ. ನಿಯಮ ಪ್ರಕಾರ, ಪೆರಿಯಾ ಪಂಚಾಯತಿನ ಚಾಲಿಂಗಾಲ್ ನಲ್ಲಿ ಟೋಲ್ ಪ್ಲಾಜಾ ಆಗಬೇಕಿದ್ದು, ಅಲ್ಲಿಗೆ ಶಿಫ್ಟ್ ಮಾಡಬೇಕು. ತಲಪಾಡಿ ಟೋಲ್ ಗೇಟ್ ಮಂಜೇಶ್ವರ ಕ್ಷೇತ್ರಕ್ಕೆ ತಾಗಿಕೊಂಡಿದ್ದು, ಹೀಗಿರುವಾಗ ಒಂದೇ ಕ್ಷೇತ್ರದಲ್ಲಿ ಎರಡು ಕಡೆ ಟೋಲ್ ಕಲೆಕ್ಷನ್ ಮಾಡುವುದಕ್ಕೆ ನಾವು ಬಿಡುವುದಿಲ್ಲ. ಕನಿಷ್ಠ ಮಂಜೇಶ್ವರ ಕ್ಷೇತ್ರ ಹೊರತುಪಡಿಸಿಯಾದ್ರೂ ಟೋಲ್ ಕಲೆಕ್ಷನ್ ಮಾಡಿ ಎಂದು ಹೇಳಿದ್ದಾರೆ.
ಕುಂಬಳೆ ಪಂಚಾಯತ್ ಸದಸ್ಯ ಖಾಲಿದ್ ಮಾತನಾಡಿ, ತಾತ್ಕಾಲಿಕ ಟೋಲ್ ಗೇಟ್ ವಿರುದ್ಧ ಹೈಕೋರ್ಟಿನಲ್ಲಿ ರಿಟ್ ಹಾಕಿದ್ದೇವೆ, ಅಲ್ಲಿ ವಿಚಾರಣೆ ಮುಗಿಯೋ ವರೆಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಟೋಲ್ ಕಲೆಕ್ಷನ್ ನಿಲ್ಲಿಸಬೇಕು ಎಂದು ಆಗ್ರಹಿಸಿದ್ದಾರೆ. ಆದರೆ ಪೊಲೀಸರು ಕೋರ್ಟ್ ಸೂಚನೆಯಂತೆ, ತಾತ್ಕಾಲಿಕ ಟೋಲ್ ಕಲೆಕ್ಷನ್ ಮಾಡಲು ಅನುಮತಿ ನೀಡಿದ್ದಾರೆ. ಪ್ರತಿಭಟನೆ ಸಂದರ್ಭದಲ್ಲಿ ಶಾಸಕ ಎಕೆಎಂ ಅಶ್ರಫ್ ಮತ್ತು ಪೊಲೀಸರ ನಡುವೆ ತಳ್ಳಾಟ, ಮಾತಿನ ವಾಗ್ವಾದ ನಡೆಯಿತು. ಆದರೆ ಪೊಲೀಸರು ಯಾವುದೇ ಪ್ರತಿಭಟನೆಗೂ ಬಗ್ಗಲಿಲ್ಲ.
Thousands of activists led by Manjeshwar MLA A.K.M. Ashraf staged a protest on Monday opposing the start of a temporary toll plaza at Arikkady in Kumble on National Highway 66. The protest resulted in a three-hour road blockade, causing heavy traffic congestion. Police later arrested the MLA along with several protestors.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm