ಬ್ರೇಕಿಂಗ್ ನ್ಯೂಸ್
15-01-26 12:14 pm HK News Desk ದೇಶ - ವಿದೇಶ
ಕಾಸರಗೋಡು, ಜ.15 : ಕುಂಬಳೆ ಆರಿಕ್ಕಾಡಿಯಲ್ಲಿ ಟೋಲ್ ಪ್ಲಾಜಾ ವಿರೋಧಿ ಹೋರಾಟ ವಿಕೋಪಕ್ಕೆ ತಿರುಗಿದ್ದು, ಬುಧವಾರ ರಾತ್ರಿ ಏಕಾಏಕಿ ಸಾವಿರಾರು ಮಂದಿ ಪ್ರತಿಭಟನಾಕಾರರು ನುಗ್ಗಿ ಬಂದು ಟೋಲ್ ಗೇಟ್ ಕ್ಯಾಮರಾ ಹಾಗೂ ಗಾಜುಗಳನ್ನು ಪುಡಿಗೈದಿದ್ದಾರೆ.
ಕುಂಬಳೆ ಪೇಟೆಯಿಂದ ಬಂದ ಸಾವಿರಕ್ಕೂ ಅಧಿಕ ಮಂದಿ ತಡರಾತ್ರಿ ಹೊಸದಾಗಿ ಹಾಕಿರುವ ಟೋಲ್ ಗೇಟ್ ಕ್ಯಾಮರಾಗಳನ್ನು ಧ್ವಂಸಗೊಳಿಸಿದ್ದು, ಕಚೇರಿ ಗಾಜುಗಳನ್ನು ಹಾನಿಗೊಳಿಸಿದ್ದಾರೆ. ವಾಹನಗಳನ್ನು ತಡೆಯುವ ಟೋಲ್ ಬೂತ್ ಹ್ಯಾಂಡಲ್ ಗಳನ್ನು ಪ್ರತಿಭಟನಕಾರರು ಕಿತ್ತು ಹಾಕಿದ್ದಾರೆ. ಸ್ಕ್ಯಾನರ್ ಗಳಿಗೆ ಕಪ್ಪು ಸ್ಟಿಕ್ಕರ್ ಲಗತ್ತಿಸಿದ್ದು ವಾಹನಗಳನ್ನು ನೇರವಾಗಿ ಹೋಗಲು ಬಿಟ್ಟಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ತೆರಳದಂತೆ ಹೆಚ್ಚುವರಿ ಪೊಲೀಸ್ ಪಡೆಯನ್ನು ಸ್ಥಳಕ್ಕೆ ಕರೆಸಿ ಜನರನ್ನು ಚದುರಿಸಲಾಗಿದೆ.







ಡಿವೈಎಫ್ಐ, ಲೀಗ್ ಸೇರಿದಂತೆ ಹಲವು ಯುವಜನ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆಯಲ್ಲಿ ಆಗಮಿಸಿದ್ದರು. ಕಚೇರಿಯೊಳಗೆ ನುಗ್ಗಲು ಯತ್ನಿಸಿದವರನ್ನು ಪೊಲೀಸರು ತಡೆದು ರಕ್ಷಣೆ ನೀಡಿದ್ದಾರೆ. ಶಾಸಕ ಎಂಕೆಎಂ ಅಶ್ರಫ್ ನೇತೃತ್ವದ ಪ್ರತಿಭಟನೆ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಸೋಮವಾರದಿಂದ ಪೊಲೀಸರು ಟೋಲ್ ಗೇಟ್ ಗೆ ಭದ್ರತೆ ಕಲ್ಪಿಸಿದ್ದಾರೆ. ಆದರೆ ರಾತ್ರಿ ವೇಳೆ ಏಕಾಏಕಿ ಸಾವಿರಾರು ಜನರು ಬಂದಿದ್ದರಿಂದ ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಪರದಾಡಿದರು. ಘಟನೆ ಬಳಿಕ ವಾಹನಗಳು ಬೆಳಗ್ಗೆ ವರೆಗೆ ಟೋಲ್ ಶುಲ್ಕ ಇಲ್ಲದೆ ಸಂಚಾರ ನಡೆಸಿದವು.
ತಾತ್ಕಾಲಿಕ ಟೋಲ್ ವಸೂಲಿ ವಿರುದ್ಧ ಮಂಜೇಶ್ವರ ಶಾಸಕ ಎ.ಕೆ.ಎಂ ಅಶ್ರಫ್ ನಡೆಸುತ್ತಿರುವ ಅನಿರ್ಧಿಷ್ಟಾವಧಿ ಪ್ರತಿಭಟನೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕೆ.ಇಂಪಾಶೇಖರ್ ನೇತೃತ್ವದಲ್ಲಿ ಬುಧವಾರ ಸಂಜೆ ನಡೆದ ಸಭೆ ಯಾವುದೇ ತೀರ್ಮಾನಕ್ಕೆ ಬರಲು ವಿಫಲಗೊಂಡಿತ್ತು. ವಿಧಾನಸಭಾ ಅಧಿವೇಶನದ ಸಂದರ್ಭದಲ್ಲಿ ರಾಜ್ಯ ಮುಖ್ಯ ಕಾರ್ಯದರ್ಶಿ ಸಮ್ಮುಖದಲ್ಲಿ ಈ ಕುರಿತು ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುವ ಬಗ್ಗೆ ನಿರ್ಧಾರಕ್ಕೆ ಬರಲಾಯಿತು. ಆದರೆ ಪ್ರಕರಣ ಹೈಕೋರ್ಟ್ ವಿಚಾರಣೆಯಲ್ಲಿರುವುದರಿಂದ ಅಂತಿಮ ತೀರ್ಮಾನ ಹೊರಬೀಳುವ ತನಕ ಟೋಲ್ ವಸೂಲಿ ಸ್ಥಗಿತಗೊಳಿವಂತೆ ಶಾಸಕ ಅಶ್ರಫ್ ಒತ್ತಾಯಿಸಿದ್ದಾರೆ.
A protest against the Arikkady toll plaza near Kumble in Kasaragod district escalated into violence late Wednesday night, as thousands of protesters stormed the site and vandalised toll infrastructure. Protesters smashed CCTV cameras, damaged glass panels, tore off booth barriers, and disabled scanners, allowing vehicles to pass without paying toll fees until morning.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm