ಬ್ರೇಕಿಂಗ್ ನ್ಯೂಸ್
20-01-26 07:04 pm HK News Desk ದೇಶ - ವಿದೇಶ
ಕಾಸರಗೋಡು, ಜ.20: ಕುಂಬಳೆಯಲ್ಲಿ ಟೋಲ್ ವಸೂಲಿ ಆರಂಭಿಸಿರುವುದರಿಂದ ಕಾಸರಗೋಡು - ಮಂಗಳೂರು ಮಧ್ಯೆ ಸಂಚರಿಸುವ ಕರ್ನಾಟಕ ಕೆಎಸ್ಸಾರ್ಟಿಸಿ ಬಸ್ ಗಳಲ್ಲಿ ಟಿಕೆಟ್ ದರ ಏರಿಸಲಾಗಿದೆ. ಟೋಲ್ ದರದ ನೆಪದಲ್ಲಿ ಕರ್ನಾಟಕ ಕೆಎಸ್ಸಾರ್ಟಿಸಿ ಜ.20ರಿಂದಲೇ ಟಿಕೆಟ್ ದರವನ್ನು ಏರಿಸಿದೆ. ಕೇರಳ ಕೆಎಸ್ಸಾರ್ಟಿಸಿ ಬಸ್ ಗಳಲ್ಲಿ ಟಿಕೆಟ್ ದರ ಹೆಚ್ಚಳಗೊಂಡಿಲ್ಲ.
ಕುಂಬಳೆಯಿಂದ ಮಂಗಳೂರಿಗೆ 67 ರೂ. ಇದ್ದ ಟಿಕೆಟ್ ದರವನ್ನು 75 ರೂ.ಗೆ ಏರಿಸಲಾಗಿದೆ. ರಾಜಹಂಸ ಬಸ್ಸಿನ ದರವನ್ನು 10 ರೂ. ಏರಿಸಿ 90 ರೂ. ಮಾಡಲಾಗಿದೆ. ಕರ್ನಾಟಕ ಸಾರಿಗೆ ಬಸ್ ಗಳು ಮಾತ್ರ ಟಿಕೆಟ್ ದರ ಹೆಚ್ಚಿಸಿರುವುದು ಪ್ರಯಾಣಿಕರ ಆಕ್ರೋಶಕ್ಕೆ ಕಾರಣವಾಗಿದೆ. ಕಾಸರಗೋಡು- ಮಂಗಳೂರು ನಡುವೆ, ಹೊಸ ಹೆದ್ದಾರಿ ರಚನೆಯಾಗಿದ್ದರೂ ಸಾರಿಗೆ ಬಸ್ ಗಳು ಮಾತ್ರ ಸರ್ವೀಸ್ ರೂಟಿನಲ್ಲೇ ಸಂಚರಿಸುತ್ತವೆ. ಎಲ್ಲ ಕಡೆ ಸ್ಟಾಪ್ ನೀಡುವುದರಿಂದ ಸಾರಿಗೆ ಬಸ್ಗಳು ಎಲ್ಲಿಯೂ ಹೆದ್ದಾರಿ ಬಳಸುತ್ತಿಲ್ಲ. ಕೇವಲ ಕುಂಬಳೆ ಟೋಲ್ ಗೇಟಿನಲ್ಲಷ್ಟೇ ಹೆದ್ದಾರಿ ಬಳಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಟೋಲ್ ವಿನಾಯಿತಿ ನೀಡಬೇಕೆಂದು ಸಾರಿಗೆ ಬಸ್ಸುಗಳ ವತಿಯಿಂದ ಜಿಲ್ಲಾಡಳಿತಕ್ಕೆ ಮನವಿ ಮಾಡಲಾಗಿದೆ. ವಿನಾಯಿತಿ ನೀಡದಿದ್ದರೆ ಹೆಚ್ಚುವರಿ ಹೊರೆಯನ್ನು ನಾವು ಟಿಕೆಟ್ ಮೂಲಕ ಪ್ರಯಾಣಿಕರಿಗೆ ಹೇರಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿಗೆ ಸಲ್ಲಿಸಿದ ಮನವಿಯಲ್ಲಿ ಕರ್ನಾಟಕ ಕೆಎಸ್ಸಾರ್ಟಿಸಿ ಉಲ್ಲೇಖಿಸಿದೆ.
ಕರ್ನಾಟಕ ಕೆಎಸ್ಸಾರ್ಟಿಸಿಯಿಂದ ಸುಮಾರು 35 ಬಸ್ ಗಳು ಕಾಸರಗೋಡು - ಮಂಗಳೂರು ನಡುವೆ ಸಂಚರಿಸುತ್ತಿವೆ. ಇದಕ್ಕೆ ದಿನವೊಂದಕ್ಕೆ 48 ಸಾವಿರ ರೂ. ಟೋಲ್ ಪಾವತಿಗೆ ಬೇಕಾಗುತ್ತದೆ. ಟೋಲ್ ಶುಲ್ಕವನ್ನು ಹೆದ್ದಾರಿ ಬಳಸದಿದ್ದರೂ ಪಾವತಿಸಬೇಕಾದರೆ ಟಿಕೆಟ್ ದರ ಏರಿಕೆ ಅನಿವಾರ್ಯ ಎಂದು ಸಾರಿಗೆ ಇಲಾಖೆಯ ಮಂಗಳೂರು ಡಿಪೋ ಅಧಿಕಾರಿಗಳು ತಿಳಿಸಿದ್ದಾರೆ.
ಇದೇ ಹೆದ್ದಾರಿಯಲ್ಲಿ ಕೇರಳ ಕೆಎಸ್ಸಾರ್ಟಿಸಿ ಬಸ್ ಗಳು ಚಲಿಸುತ್ತಿದ್ದರೂ ಟೋಲ್ ನೆಪದಲ್ಲಿ ಟಿಕೆಟ್ ದರ ಹೆಚ್ಚಿಸಿಲ್ಲ. ಟಿಕೆಟ್ ದರ ಹೆಚ್ಚಳವಾಗಬೇಕಿದ್ದರೆ ಸಾರಿಗೆ ಸಚಿವರು ಇಲಾಖೆ ಸಭೆ ನಡೆಸಿ ನಿರ್ಣಯಿಸಿ ಬಳಿಕ ಆದೇಶವಾಗಬೇಕು ಎಂದು ಕಾಸರಗೋಡು ಡಿಪೋ ಅಧಿಕಾರಿಗಳು ತಿಳಿಸಿದ್ದಾರೆ.
The Karnataka State Road Transport Corporation (KSRTC) has increased ticket fares on buses operating between Kasaragod and Mangaluru with effect from January 20, citing the start of toll collection at Kumbla. The ordinary bus fare has been raised from ₹67 to ₹75, while Rajahamsa service fares have gone up by ₹10 to ₹90. The hike has triggered strong backlash from passengers, especially as Kerala KSRTC buses operating on the same route have not increased fares. KSRTC officials said nearly 35 buses ply daily on this route, requiring about ₹48,000 per day towards toll payments, making the fare hike unavoidable unless toll exemption is granted.
20-01-26 02:15 pm
Bangalore Correspondent
ರಾಸಲೀಲೆಯ ಬಿರುಗಾಳಿ ಬೆನ್ನಲ್ಲೇ ರಾಮಚಂದ್ರ ರಾವ್ ತಲ...
20-01-26 12:20 pm
ಮೈಸೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಸುಗಮ ಬಸ್...
20-01-26 12:18 pm
ಇವಿಎಂಗೆ ಗುಡ್ ಬೈ, ಮತ್ತೆ ಬ್ಯಾಲೆಟ್ ಪೇಪರ್ ಬಳಕೆ ;...
20-01-26 12:03 pm
ನನ್ನ ವಿರುದ್ಧ ಯಾರೋ ಅಪರಿಚಿತರು ಷಡ್ಯಂತ್ರ ಮಾಡಿದ್ದಾ...
19-01-26 08:42 pm
20-01-26 07:04 pm
HK News Desk
ಬಸ್ಸಿನಲ್ಲಿ ಲೈಂಗಿಕ ಕಿರುಕುಳ ಎಂದು ವಿಡಿಯೋ ; ನೊಂದು...
19-01-26 11:03 pm
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
20-01-26 08:07 pm
Mangalore Correspondent
ಮರದ ಗೆಲ್ಲು ಕಡಿಯುವ ವಿಚಾರದಲ್ಲಿ ತಗಾದೆ ; ಮಾತನಾಡಲು...
19-01-26 10:55 pm
Kukke Subramanya, Drowning: ಕುಕ್ಕೆ ಸುಬ್ರಹ್ಮಣ್...
18-01-26 09:58 pm
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
20-01-26 07:51 pm
Bangalore Correspondent
ಸಿಎಂ ಕ್ಲಾಸ್ ಬೆನ್ನಲ್ಲೇ ಅಲರ್ಟ್ ಆದ ಬೆಂಗಳೂರು ಖಾಕಿ...
20-01-26 05:01 pm
100ಕ್ಕೂ ಹೆಚ್ಚು ಜನರನ್ನು ಹನಿಟ್ರ್ಯಾಪ್ ಬಲೆಗೆ ಬೀಳ...
19-01-26 10:20 pm
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm