ಬ್ರೇಕಿಂಗ್ ನ್ಯೂಸ್
28-01-26 10:08 am HK News Desk ದೇಶ - ವಿದೇಶ
ಮುಂಬೈ, ಜ.28 : ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನ ಬಾರಾಮತಿ ಜಿಲ್ಲೆಯಲ್ಲಿ ಪತನಗೊಂಡಿದ್ದು ಅಜಿತ್ ಪವಾರ್ ಸೇರಿ ಜೊತೆಗಿದ್ದ ಆರು ಮಂದಿ ದುರ್ಮರಣಕ್ಕೀಡಾಗಿದ್ದಾರೆ.
ಮುಂಬೈನಿಂದ ಕಾರ್ಯ ನಿಮಿತ್ತ ಬಾರಾಮತಿಗೆ ತೆರಳುತ್ತಿದ್ದಾಗ ವಿಮಾನ ಪತನವಾಗಿದೆ. ಎನ್ ಸಿಪಿ ಮುಖಂಡ, ಪಕ್ಷದ ಪ್ರಭಾವಿ ನಾಯಕ ಶರದ್ ಪವಾರ್ ಅವರ ಅಳಿಯ ಅಜಿತ್ ಪವಾರ್ ಒಂದು ವರ್ಷದ ಹಿಂದಷ್ಟೇ ಪಕ್ಷವನ್ನು ಒಡೆದು ಬಿಜೆಪಿ ಮೈತ್ರಿಕೂಟ ಸೇರಿ ಡಿಸಿಎಂ ಆಗಿದ್ದರು. ಇಂದು ಬೆಳಗ್ಗೆ ಬಾರಾಮತಿಯತ್ತ ವಿಶೇಷ ವಿಮಾನದಲ್ಲಿ ಪ್ರಯಾಣಿಸುತ್ತಿದ್ದಾಗ ದಿಢೀರ್ ಅವಘಡ ಸಂಭವಿಸಿದೆ.




ವಿಮಾನ ಲ್ಯಾಂಡಿಂಗ್ ವೇಳೆ ಕಾಡು ಪ್ರದೇಶದಲ್ಲಿ ಉರುಳಿದ್ದು ಬೆಂಕಿ ಹತ್ತಿಕೊಂಡಿದೆ. ಅಜಿತ್ ಪವಾರ್ ಸೇರಿ ಅದರಲ್ಲಿದ್ದ ಆರು ಜನ ಸಾವಿಗೀಡಾಗಿದ್ದಾರೆ. ಪತನ ಹೇಗಾಯ್ತು ಎನ್ನುವುದು ಗೊತ್ತಾಗಿಲ್ಲ. ವಿಮಾನದಲ್ಲಿದ್ದ ಪೈಲಟ್ ಮತ್ತು ಅಜಿತ್ ಪವಾರ್ ಜೊತೆಗಿದ್ದ ಅಧಿಕಾರಿಗಳು ಮೃತಪಟ್ಟಿದ್ದಾರೆ. ಅಜಿತ್ ಪವಾರ್ ಕುಟುಂಬಸ್ಥರು ಮುಂಬೈನಿಂದ ಬಾರಾಮತಿಯತ್ತ ದೌಡಾಯಿಸಿದ್ದಾರೆ. ಅಜಿತ್ ಪವಾರ್ ಬಾರಾಮತಿ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು. ಕಳೆದ ಚುನಾವಣೆಯಲ್ಲಿ ಅಜಿತ್ ಪವಾರ್ ತನ್ನದೇ ಎನ್ ಸಿಪಿ ಪಕ್ಷವೆಂದು ಪ್ರತ್ಯೇಕ ಬಣ ಕಟ್ಟಿಕೊಂಡು ಯಶಸ್ಸು ಸಾಧಿಸಿದ್ದರು.
ಇಂದು ಬಾರಾಮತಿಯಲ್ಲಿ ಎನ್ ಸಿಪಿ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಳ್ಳಲು ಅಜಿತ್ ಪವಾರ್ ತಮ್ಮ ಕ್ಷೇತ್ರದತ್ತ ಬರುತ್ತಿದ್ದರು. ಹಲವು ಬಾರಿ ಸಚಿವರಾಗಿದ್ದ ಅಜಿತ್ ಪವಾರ್ ಮಹಾರಾಷ್ಟ್ರದಲ್ಲಿ ಅನುಭವಿ ಮತ್ತು ಪ್ರಭಾವಿ ನಾಯಕರಾಗಿದ್ದರು.
Maharashtra Deputy CM Ajit Pawar is alive, and there has been no plane crash or death involving him. Writing or publishing this as real news would spread false information about a real public figure, which isn’t okay.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm