ಬ್ರೇಕಿಂಗ್ ನ್ಯೂಸ್
28-01-26 11:14 pm HK News Desk ದೇಶ - ವಿದೇಶ
ನವದೆಹಲಿ, ಜ.28 : ಬೌದ್ಧ ಧರ್ಮಕ್ಕೆ ಮತಾಂತರಗೊಂಡ ಬಳಿಕ ಅಲ್ಪಸಂಖ್ಯಾತರ ಕೋಟಾದಡಿ ಮೀಸಲಾತಿ ಕೇಳಿದ್ದ ಮೇಲ್ಜಾತಿ ಹಿಂದೂ ವ್ಯಕ್ತಿಯನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಅಷ್ಟೇ ಅಲ್ಲದೆ, ಇದೊಂದು ಹೊಸ ರೀತಿಯ ವಂಚನೆ ಎಂದು ಆಕ್ಷೇಪಿಸಿದೆ
ಅಲ್ಪಸಂಖ್ಯಾತ ಅಭ್ಯರ್ಥಿ ಕೋಟಾದಡಿ ಪ್ರವೇಶ ಕೋರಿ ನಿಖಿಲ್ ಕುಮಾರ್ ಪುನಿಯಾ ಎಂಬವರು ಸಲ್ಲಿಸಿದ್ದ ಅರ್ಜಿಯನ್ನು ಸಿಜೆಐ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರಿದ್ದ ಪೀಠ ವಿಚಾರಣೆ ನಡೆಸಿತು. ಈ ವೇಳೆ ನೀವು ಹೇಗೆ ಅಲ್ಪಸಂಖ್ಯಾತರು? ನೀವು ಯಾವ ಪುನಿಯಾ ಎಂದು ಸಿಜೆಐ ಕಾಂತ್ ಪ್ರಶ್ನಿಸಿದರು. ಇದಕ್ಕೆ ಅರ್ಜಿದಾರರ ಪರ ವಕೀಲ ಜಾಟ್ ಪುನಿಯಾ ಎಂದು ಉತ್ತರಿಸಿದರು. ಈ ಉತ್ತರ ಬಂದ ಬೆನ್ನಲ್ಲೇ, ನೀವು ಹೇಗೆ ಅಲ್ಪಸಂಖ್ಯಾತರು ಎಂದು ಪೀಠ ಮರು ಪ್ರಶ್ನೆ ಹಾಕಿತು. ಈ ಪ್ರಶ್ನೆಗೆ ವಕೀಲರು, ಈಗ ಬೌದ್ಧ ಧರ್ಮಕ್ಕೆ ಮತಾಂತರಗೊಂಡಿದ್ದೇನೆ. ಅದು ನನ್ನ ಹಕ್ಕು ಎಂದು ಉತ್ತರಿಸಿದರು.
ವಕೀಲರ ಉತ್ತರಕ್ಕೆ ಗರಂ ಆದ ಸಿಜೆಐ, ಇದು ಹೊಸ ರೀತಿಯ ವಂಚನೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ನಂತರ ಸಾಮಾನ್ಯ ವರ್ಗದ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿದ್ದಾರೆ ಎಂದು ಹೇಳಿಕೊಳ್ಳುವ ಮೂಲಕ ಅಲ್ಪಸಂಖ್ಯಾತ ಪ್ರಮಾಣಪತ್ರವನ್ನು ಪಡೆಯಬಹುದೇ? ಅಲ್ಪಸಂಖ್ಯಾತ ಪ್ರಮಾಣಪತ್ರ ನೀಡಲು ಏನೇನು ಮಾರ್ಗಸೂಚಿಗಳಿವೆ ಎಂದು ತಿಳಿಸುವಂತೆ ಹರಿಯಾಣದ ಮುಖ್ಯ ಕಾರ್ಯದರ್ಶಿಗೆ ನಿರ್ದೇಶಿಸಿತು.
The Supreme Court strongly criticised an upper-caste Hindu man who sought reservation under the minority quota after converting to Buddhism, calling it a “new form of fraud.” The court questioned the basis of granting minority certificates and sought guidelines from the Haryana government.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm