ಬ್ರೇಕಿಂಗ್ ನ್ಯೂಸ್
28-01-26 11:14 pm HK News Desk ದೇಶ - ವಿದೇಶ
ನವದೆಹಲಿ, ಜ.28 : ಬೌದ್ಧ ಧರ್ಮಕ್ಕೆ ಮತಾಂತರಗೊಂಡ ಬಳಿಕ ಅಲ್ಪಸಂಖ್ಯಾತರ ಕೋಟಾದಡಿ ಮೀಸಲಾತಿ ಕೇಳಿದ್ದ ಮೇಲ್ಜಾತಿ ಹಿಂದೂ ವ್ಯಕ್ತಿಯನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಅಷ್ಟೇ ಅಲ್ಲದೆ, ಇದೊಂದು ಹೊಸ ರೀತಿಯ ವಂಚನೆ ಎಂದು ಆಕ್ಷೇಪಿಸಿದೆ
ಅಲ್ಪಸಂಖ್ಯಾತ ಅಭ್ಯರ್ಥಿ ಕೋಟಾದಡಿ ಪ್ರವೇಶ ಕೋರಿ ನಿಖಿಲ್ ಕುಮಾರ್ ಪುನಿಯಾ ಎಂಬವರು ಸಲ್ಲಿಸಿದ್ದ ಅರ್ಜಿಯನ್ನು ಸಿಜೆಐ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರಿದ್ದ ಪೀಠ ವಿಚಾರಣೆ ನಡೆಸಿತು. ಈ ವೇಳೆ ನೀವು ಹೇಗೆ ಅಲ್ಪಸಂಖ್ಯಾತರು? ನೀವು ಯಾವ ಪುನಿಯಾ ಎಂದು ಸಿಜೆಐ ಕಾಂತ್ ಪ್ರಶ್ನಿಸಿದರು. ಇದಕ್ಕೆ ಅರ್ಜಿದಾರರ ಪರ ವಕೀಲ ಜಾಟ್ ಪುನಿಯಾ ಎಂದು ಉತ್ತರಿಸಿದರು. ಈ ಉತ್ತರ ಬಂದ ಬೆನ್ನಲ್ಲೇ, ನೀವು ಹೇಗೆ ಅಲ್ಪಸಂಖ್ಯಾತರು ಎಂದು ಪೀಠ ಮರು ಪ್ರಶ್ನೆ ಹಾಕಿತು. ಈ ಪ್ರಶ್ನೆಗೆ ವಕೀಲರು, ಈಗ ಬೌದ್ಧ ಧರ್ಮಕ್ಕೆ ಮತಾಂತರಗೊಂಡಿದ್ದೇನೆ. ಅದು ನನ್ನ ಹಕ್ಕು ಎಂದು ಉತ್ತರಿಸಿದರು.
ವಕೀಲರ ಉತ್ತರಕ್ಕೆ ಗರಂ ಆದ ಸಿಜೆಐ, ಇದು ಹೊಸ ರೀತಿಯ ವಂಚನೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ನಂತರ ಸಾಮಾನ್ಯ ವರ್ಗದ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿದ್ದಾರೆ ಎಂದು ಹೇಳಿಕೊಳ್ಳುವ ಮೂಲಕ ಅಲ್ಪಸಂಖ್ಯಾತ ಪ್ರಮಾಣಪತ್ರವನ್ನು ಪಡೆಯಬಹುದೇ? ಅಲ್ಪಸಂಖ್ಯಾತ ಪ್ರಮಾಣಪತ್ರ ನೀಡಲು ಏನೇನು ಮಾರ್ಗಸೂಚಿಗಳಿವೆ ಎಂದು ತಿಳಿಸುವಂತೆ ಹರಿಯಾಣದ ಮುಖ್ಯ ಕಾರ್ಯದರ್ಶಿಗೆ ನಿರ್ದೇಶಿಸಿತು.
The Supreme Court strongly criticised an upper-caste Hindu man who sought reservation under the minority quota after converting to Buddhism, calling it a “new form of fraud.” The court questioned the basis of granting minority certificates and sought guidelines from the Haryana government.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am