ಬ್ರೇಕಿಂಗ್ ನ್ಯೂಸ್
29-01-26 11:07 pm HK News Desk ದೇಶ - ವಿದೇಶ
ತಿರುವನಂತಪುರಂ, ಜ.29 : ಕೇರಳ ಸರ್ಕಾರವು ರಾಜ್ಯದ ಸಾರಿಗೆ ವ್ಯವಸ್ಥೆಯಲ್ಲಿ ಕ್ರಾಂತಿಕಾರಿ ಬದಲಾವಣೆ ತರಲು ಮುಂದಾಗಿದೆ. ವಿವಾದಿತ ಸಿಲ್ವರ್ ಲೈನ್ (K-Rail) ಯೋಜನೆ ತಾಂತ್ರಿಕ ಕಾರಣಗಳಿಂದ ಸ್ಥಗಿತಗೊಂಡ ಬೆನ್ನಲ್ಲೇ, 583 ಕಿ.ಮೀ ಉದ್ದದ ಪ್ರಾದೇಶಿಕ ಕ್ಷಿಪ್ರ ಸಾರಿಗೆ ವ್ಯವಸ್ಥೆ (RRTS) ಕಾರಿಡಾರ್ಗೆ ಕೇರಳ ಸಚಿವ ಸಂಪುಟವು ತಾತ್ವಿಕ ಅನುಮೋದನೆ ನೀಡಿದೆ.
ದೆಹಲಿ-ಮೀರತ್ ಕಾರಿಡಾರ್ ಮಾದರಿಯಲ್ಲಿ ಈ ರೈಲು ಮಾರ್ಗ ಬರಲಿದ್ದು, ಗಂಟೆಗೆ 160 ರಿಂದ 180 ಕಿ.ಮೀ ವೇಗದಲ್ಲಿ ಸಂಚರಿಸುವ ಸಾಮರ್ಥ್ಯ ಹೊಂದಿರುತ್ತದೆ. ಈ ಹಿಂದಿನ ಯೋಜನೆಗೆ ಭೂಸ್ವಾಧೀನ ಮತ್ತು ಪರಿಸರ ಸಮಸ್ಯೆಗಳು ದೊಡ್ಡ ಅಡ್ಡಿಯಾಗಿದ್ದವು. ಇದನ್ನು ತಪ್ಪಿಸಲು, ಹೊಸ ಯೋಜನೆಯಲ್ಲಿ ರೈಲು ಮಾರ್ಗವನ್ನು ಹೆಚ್ಚಾಗಿ ಎಲಿವೇಟೆಡ್ ಕಾರಿಡಾರ್ (ಮೇಲ್ಸೇತುವೆ) ಮೇಲೆ ನಿರ್ಮಿಸಲು ನಿರ್ಧರಿಸಲಾಗಿದೆ. ಸುರಂಗಗಳು ಮತ್ತು ತಡೆಗೋಡೆಗಳ ಬಳಕೆಯನ್ನು ಕಡಿಮೆಗೊಳಿಸಲಾಗಿದೆ.
ಮೊದಲ ಹಂತದಲ್ಲಿ ತಿರುವನಂತಪುರಂನಿಂದ ತೃಶೂರ್ ವರೆಗೆ (284 ಕಿ.ಮೀ) ಇರಲಿದೆ. ಇದನ್ನು 2027 ರಿಂದ 2033 ರೊಳಗೆ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ. ಎರಡನೇ ಹಂತದಲ್ಲಿ ಈ ಮಾರ್ಗವನ್ನು ಕೋಝಿಕೋಡ್, ಕಣ್ಣೂರು ಮತ್ತು ಕಾಸರಗೋಡಿನ ವರೆಗೆ ವಿಸ್ತರಿಸಲಾಗುವುದು. ಒಟ್ಟಾರೆ 12 ವರ್ಷಗಳಲ್ಲಿ ಯೋಜನೆ ಪೂರ್ಣಗೊಳಿಸುವ ಗುರಿ ಇದೆ.
ದೆಹಲಿ - ಮೀರತ್ ಕಾರಿಡಾರ್ ಮಾದರಿಯಲ್ಲೇ ಈ ಯೋಜನೆಯ ವೆಚ್ಚವನ್ನು ರಾಜ್ಯ ಸರ್ಕಾರ (20%), ಕೇಂದ್ರ ಸರ್ಕಾರ (20%) ಮತ್ತು ಅಂತರಾಷ್ಟ್ರೀಯ ಹಣಕಾಸು ಸಂಸ್ಥೆಗಳಿಂದ ಸಾಲದ ರೂಪದಲ್ಲಿ (60%) ಭರಿಸಲು ನಿರ್ಧರಿಸಲಾಗಿದೆ. ಈ ಯೋಜನೆ ಕೇವಲ ಕೇರಳಕ್ಕೆ ಸೀಮಿತವಾಗದೆ, ಭವಿಷ್ಯದಲ್ಲಿ ನೆರೆಯ ರಾಜ್ಯಗಳಿಗೂ ವಿಸ್ತರಣೆಯಾಗುವ ಗುರಿ ಹೊಂದಿದೆ. ಮಂಗಳೂರು (ಕರ್ನಾಟಕ), ಕೊಯಮತ್ತೂರು (ತಮಿಳುನಾಡು) ಮತ್ತು ಕನ್ಯಾಕುಮಾರಿಗೆ ಜೋಡಿಸುವ ದೀರ್ಘಕಾಲದ ಯೋಜನೆಯೂ ಇದರಲ್ಲಿದೆ.
The Kerala government has approved a new 583-km high-speed RRTS corridor between Thiruvananthapuram and Kasaragod, with trains running up to 180 kmph. Planned as an elevated rail line to avoid land and environmental issues, the project will be implemented in phases and funded jointly by the state, centre, and international agencies.
06-03-26 07:03 pm
HK News Staffer
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
ಡಿಜಿಟಲ್ ವ್ಯಸನಕ್ಕೆ ಬ್ರೇಕ್ ; 16 ವರ್ಷದೊಳಗಿನ ಮಕ್ಕ...
06-03-26 12:08 pm
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ; ಮುಂದುವರೆ...
06-03-26 10:21 am
Bhatkal Petrol News: ಬೆಲೆ ಏರಿಕೆ ಭೀತಿ ; ಭಟ್ಕಳ...
05-03-26 11:42 pm
06-03-26 11:04 pm
HK News Desk
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
06-03-26 07:01 pm
HK News Staffer
ಮಂಗಳೂರಿನ ನಿವೃತ್ತ ಬ್ಯಾಂಕ್ ಉದ್ಯೋಗಿ ಲೇಡಿಗೆ ಸೈಬರ್...
06-03-26 04:08 pm
ಪುತ್ತೂರಿನಲ್ಲಿ ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋ...
06-03-26 12:17 pm
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm