ಬ್ರೇಕಿಂಗ್ ನ್ಯೂಸ್
29-01-26 11:07 pm HK News Desk ದೇಶ - ವಿದೇಶ
ತಿರುವನಂತಪುರಂ, ಜ.29 : ಕೇರಳ ಸರ್ಕಾರವು ರಾಜ್ಯದ ಸಾರಿಗೆ ವ್ಯವಸ್ಥೆಯಲ್ಲಿ ಕ್ರಾಂತಿಕಾರಿ ಬದಲಾವಣೆ ತರಲು ಮುಂದಾಗಿದೆ. ವಿವಾದಿತ ಸಿಲ್ವರ್ ಲೈನ್ (K-Rail) ಯೋಜನೆ ತಾಂತ್ರಿಕ ಕಾರಣಗಳಿಂದ ಸ್ಥಗಿತಗೊಂಡ ಬೆನ್ನಲ್ಲೇ, 583 ಕಿ.ಮೀ ಉದ್ದದ ಪ್ರಾದೇಶಿಕ ಕ್ಷಿಪ್ರ ಸಾರಿಗೆ ವ್ಯವಸ್ಥೆ (RRTS) ಕಾರಿಡಾರ್ಗೆ ಕೇರಳ ಸಚಿವ ಸಂಪುಟವು ತಾತ್ವಿಕ ಅನುಮೋದನೆ ನೀಡಿದೆ.
ದೆಹಲಿ-ಮೀರತ್ ಕಾರಿಡಾರ್ ಮಾದರಿಯಲ್ಲಿ ಈ ರೈಲು ಮಾರ್ಗ ಬರಲಿದ್ದು, ಗಂಟೆಗೆ 160 ರಿಂದ 180 ಕಿ.ಮೀ ವೇಗದಲ್ಲಿ ಸಂಚರಿಸುವ ಸಾಮರ್ಥ್ಯ ಹೊಂದಿರುತ್ತದೆ. ಈ ಹಿಂದಿನ ಯೋಜನೆಗೆ ಭೂಸ್ವಾಧೀನ ಮತ್ತು ಪರಿಸರ ಸಮಸ್ಯೆಗಳು ದೊಡ್ಡ ಅಡ್ಡಿಯಾಗಿದ್ದವು. ಇದನ್ನು ತಪ್ಪಿಸಲು, ಹೊಸ ಯೋಜನೆಯಲ್ಲಿ ರೈಲು ಮಾರ್ಗವನ್ನು ಹೆಚ್ಚಾಗಿ ಎಲಿವೇಟೆಡ್ ಕಾರಿಡಾರ್ (ಮೇಲ್ಸೇತುವೆ) ಮೇಲೆ ನಿರ್ಮಿಸಲು ನಿರ್ಧರಿಸಲಾಗಿದೆ. ಸುರಂಗಗಳು ಮತ್ತು ತಡೆಗೋಡೆಗಳ ಬಳಕೆಯನ್ನು ಕಡಿಮೆಗೊಳಿಸಲಾಗಿದೆ.
ಮೊದಲ ಹಂತದಲ್ಲಿ ತಿರುವನಂತಪುರಂನಿಂದ ತೃಶೂರ್ ವರೆಗೆ (284 ಕಿ.ಮೀ) ಇರಲಿದೆ. ಇದನ್ನು 2027 ರಿಂದ 2033 ರೊಳಗೆ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ. ಎರಡನೇ ಹಂತದಲ್ಲಿ ಈ ಮಾರ್ಗವನ್ನು ಕೋಝಿಕೋಡ್, ಕಣ್ಣೂರು ಮತ್ತು ಕಾಸರಗೋಡಿನ ವರೆಗೆ ವಿಸ್ತರಿಸಲಾಗುವುದು. ಒಟ್ಟಾರೆ 12 ವರ್ಷಗಳಲ್ಲಿ ಯೋಜನೆ ಪೂರ್ಣಗೊಳಿಸುವ ಗುರಿ ಇದೆ.
ದೆಹಲಿ - ಮೀರತ್ ಕಾರಿಡಾರ್ ಮಾದರಿಯಲ್ಲೇ ಈ ಯೋಜನೆಯ ವೆಚ್ಚವನ್ನು ರಾಜ್ಯ ಸರ್ಕಾರ (20%), ಕೇಂದ್ರ ಸರ್ಕಾರ (20%) ಮತ್ತು ಅಂತರಾಷ್ಟ್ರೀಯ ಹಣಕಾಸು ಸಂಸ್ಥೆಗಳಿಂದ ಸಾಲದ ರೂಪದಲ್ಲಿ (60%) ಭರಿಸಲು ನಿರ್ಧರಿಸಲಾಗಿದೆ. ಈ ಯೋಜನೆ ಕೇವಲ ಕೇರಳಕ್ಕೆ ಸೀಮಿತವಾಗದೆ, ಭವಿಷ್ಯದಲ್ಲಿ ನೆರೆಯ ರಾಜ್ಯಗಳಿಗೂ ವಿಸ್ತರಣೆಯಾಗುವ ಗುರಿ ಹೊಂದಿದೆ. ಮಂಗಳೂರು (ಕರ್ನಾಟಕ), ಕೊಯಮತ್ತೂರು (ತಮಿಳುನಾಡು) ಮತ್ತು ಕನ್ಯಾಕುಮಾರಿಗೆ ಜೋಡಿಸುವ ದೀರ್ಘಕಾಲದ ಯೋಜನೆಯೂ ಇದರಲ್ಲಿದೆ.
The Kerala government has approved a new 583-km high-speed RRTS corridor between Thiruvananthapuram and Kasaragod, with trains running up to 180 kmph. Planned as an elevated rail line to avoid land and environmental issues, the project will be implemented in phases and funded jointly by the state, centre, and international agencies.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
04-04-26 10:53 pm
HK News Staffer
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm