ಬ್ರೇಕಿಂಗ್ ನ್ಯೂಸ್
30-01-26 02:04 pm HK News Desk ದೇಶ - ವಿದೇಶ
ಅಹಮದಾಬಾದ್, ಜ.30 : ಚಿರತೆ ದಾಳಿಯಿಂದ ರಕ್ಷಿಸಿಕೊಳ್ಳಲು 60 ವರ್ಷದ ರೈತನೊಬ್ಬ ಚಿರತೆಯನ್ನು ಕತ್ತಿಯಿಂದ ಹಲ್ಲೆ ಮಾಡಿ ಕೊಂದ ಘಟನೆ ಗುಜರಾತಿನ ಗಿರ್ ಸೋಮನಾಥ್ ಜಿಲ್ಲೆಯಲ್ಲಿ ನಡೆದಿದೆ. ಆದರೆ ಚಿರತೆ ಕೊಂದ ರೈತನ ವಿರುದ್ಧವೇ ಅರಣ್ಯ ಇಲಾಖೆಯ ಅಧಿಕಾರಿಗಳು ಕೇಸು ದಾಖಲಿಸಿದ್ದಾರೆ.
ಚಿರತೆ ದಾಳಿಯಿಂದ ರೈತನ ಮಗ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ. ತನಗೆ ಮತ್ತು ಮಗನ ಮೇಲೆ ಚಿರತೆ ದಾಳಿ ನಡೆಸಿದ್ದಕ್ಕೆ ರೈತ ಪ್ರತಿ ದಾಳಿ ನಡೆಸಿದ್ದ. ಆದರೆ ಅರಣ್ಯ ಇಲಾಖೆಯ ಅಧಿಕಾರಿಗಳು ಚಿರತೆ ಕೊಂದ ಆರೋಪದಲ್ಲಿ ರೈತ ಬಾಬು ವಾಜಾ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಗ್ಯಾಂಗ್ಡಾ ಗ್ರಾಮದ ತಮ್ಮ ಮನೆಯ ವರಾಂಡಾದಲ್ಲಿ ಬಾಬು ವಾಜಾ ವಿಶ್ರಾಂತಿ ಪಡೆಯುತ್ತಿದ್ದ ವೇಳೆ, ಸಮೀಪದ ಹೊಲದಿಂದ ಬಂದ ಚಿರತೆಯೊಂದು ಏಕಾಏಕಿ ದಾಳಿ ಮಾಡಿತ್ತು. ಚಿರತೆ ದಾಳಿಯನ್ನು ಕಂಡು ಬಾಬು ಅವರ ಮಗ ಶಾರ್ದೂಲ್ ತಂದೆಯ ರಕ್ಷಿಸಲು ಧಾವಿಸಿದ್ದು, ಚಿರತೆ ಅವನ ಮೇಲೆ ದಾಳಿ ಮಾಡಿತ್ತು. ಈ ವೇಳೆ, ಇಬ್ಬರೂ ಸೇರಿ ಚಿರತೆಯನ್ನು ಹೊಡೆದು ಕೊಂದಿದ್ದರು.
ಘಟನೆ ಕುರಿತು ಮಾತನಾಡಿದ ಬಾಬು ವಾಜಾ, “ಚಿರತೆ ನನ್ನ ತೋಳನ್ನು ಕಚ್ಚಿ ಎಳೆಯಲು ಶುರು ಮಾಡಿತ್ತು. ನನ್ನ ಕಿರುಚಾಟ ಕೇಳಿ ಮಗ ಶಾರ್ದೂಲ್ ಓಡಿ ಬಂದಿದ್ದ. ಚಿರತೆ ಅವನ ಮೇಲೂ ಹಾರಿ ಗಾಯಗೊಳಿಸಿತು. ಮಗನನ್ನು ಉಳಿಸಲು ಯತ್ನಿಸಿದಾಗ ಮತ್ತೆ ನನ್ನ ಮೇಲೆ ದಾಳಿ ಮಾಡಿತು. ಆಗ ಬೇರೆ ದಾರಿ ಇರಲಿಲ್ಲ. ಅಲ್ಲೇ ಇದ್ದ ಕತ್ತಿಯನ್ನು ತೆಗೆದುಕೊಂಡು ಚಿರತೆಗೆ ಹೊಡೆದೆ ಎಂದು ತಿಳಿಸಿದ್ದಾರೆ.
ಘಟನೆಯಲ್ಲಿ ಬಾಬು ಮತ್ತು ಅವರ ಮಗನ ಮುಂಗೈ ಹಾಗೂ ಹಣೆಯ ಭಾಗದಲ್ಲಿ ಗಾಯಗಳಾಗಿವೆ. ವರಾಂಡಾದಲ್ಲಿ ಇಡಲಾಗಿದ್ದ ಕತ್ತಿಯನ್ನೇ ಉಪಯೋಗಿಸಿ ಚಿರತೆಯನ್ನು ಕೊಂದು ಹಾಕಿದ್ದರು. ಘಟನೆಯ ಮಾಹಿತಿ ದೊರಕಿದ ತಕ್ಷಣ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಚಿರತೆ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.
In Gujarat’s Gir Somnath district, a 60-year-old farmer hacked a leopard to death with a machete while trying to save his son from an attack. Though the farmer and his son suffered injuries in the incident, forest department officials have registered a case against him for killing the protected animal, triggering debate over self-defence versus wildlife protection laws.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
04-04-26 10:53 pm
HK News Staffer
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm