ಬ್ರೇಕಿಂಗ್ ನ್ಯೂಸ್
31-12-20 08:31 pm Headline Karnataka News Network ದೇಶ - ವಿದೇಶ
ನವದೆಹಲಿ, ಡಿ.31: ಪಾಕಿಸ್ತಾನದಲ್ಲಿ ಹಿಂದುಗಳ ದೇವಸ್ಥಾನ ಒಂದನ್ನು ಮುಸ್ಲಿಂ ಮೂಲಭೂತವಾದಿಗಳು ಬೆಂಕಿ ಕೊಟ್ಟು ಕೆಡವಿ ಹಾಕಿದ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿ ಅಲ್ಲಿನ ಪೊಲೀಸರು 26 ಮಂದಿಯನ್ನು ಬಂಧಿಸಿದ್ದಾರೆ.
ಮೂಲಭೂತವಾದಿ ಸಂಘಟನೆ ಜಾಮಿಯತ್ ಉಲೇಮಾ ಇ- ಇಸ್ಲಾಮಿ ಪಾರ್ಟಿಯ ನಾಯಕ ರೆಹಮತ್ ಸಲಾಮ್ ಖಟ್ಟಕ್ ಸೇರಿ 30 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಪಖ್ತುಂಖ್ವಾ ಪ್ರಾಂತ್ಯದ ಕರಾಕ್ ಜಿಲ್ಲೆಯ ಟೆರ್ರಿ ಎನ್ನುವ ಗ್ರಾಮದಲ್ಲಿ ದೇವಸ್ಥಾನವನ್ನು ತಂಡವೊಂದು ಪುಡಿಗಟ್ಟಿದ ಘಟನೆ ನಡೆದಿದ್ದು, ಇದರ ವಿಡಿಯೋ ವೈರಲ್ ಆಗಿತ್ತು. ದೇವಸ್ಥಾನದ ಆವರಣ ಗೋಡೆಯನ್ನು ನವೀಕರಣ ಮಾಡುತ್ತಿರುವುದನ್ನು ವಿರೋಧಿಸಿದ ಉದ್ರಿಕ್ತ ಗುಂಪು, ಹಳೆಯ ದೇವಸ್ಥಾನ ಕಟ್ಟಡವನ್ನೇ ಕೆಡವಿ ಹಾಕಿದೆ.
ಘಟನೆ ಬಗ್ಗೆ ಮಾನವ ಹಕ್ಕು ಸಂಘಟನೆ ಮತ್ತು ಅಲ್ಪಸಂಖ್ಯಾತ ಹಿಂದು ಸಮುದಾಯದ ನಾಯಕರಿಂದ ಆಕ್ರೋಶ ಕೇಳಿಬಂದಿದೆ. ಪೇಶಾವರದ ಹಿಂದು ಸಮುದಾಯದ ನಾಯಕ ಹರೂನ್ ಸರಾಬ್ ದಿಯಾಳ್ ಹೇಳಿಕೆ ನೀಡಿ, ದೇವಸ್ಥಾನದ ಆವರಣದಲ್ಲಿ ಹಿಂದು ಸಂತರೊಬ್ಬರ ಸಮಾಧಿ ಇತ್ತು. ದೇಶಾದ್ಯಂತದ ಹಿಂದು ಬಂಧುಗಳು ಅಲ್ಲಿಗೆ ಭೇಟಿ ನೀಡುತ್ತಿದ್ದರು. ಇಂಥ ಸಮಾಧಿಯನ್ನೂ ಕೆಡವಿ ಹಾಕಿದ್ದಾರೆ. ಇದು ಹಿಂದು ಸಮುದಾಯದ ಭಾವನೆಯನ್ನು ಘಾಸಿಗೊಳಿಸಿದೆ. ಪಾಕಿಸ್ಥಾನ ಸರಕಾರ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿದ್ದಾರೆ.
ಪಾಕಿಸ್ತಾನದಲ್ಲಿ 75 ಲಕ್ಷ ಹಿಂದುಗಳಿದ್ದಾರೆಂದು ಅಲ್ಲಿನ ಅಧಿಕೃತ ಅಂಕಿಅಂಶಗಳು ಹೇಳುತ್ತವೆ. ಆದರೆ, ಅಲ್ಲಿನ ಹಿಂದು ಸಮುದಾಯ 90 ಲಕ್ಷ ಇದ್ದೇವೆ ಎಂದು ಹೇಳುತ್ತಾರೆ. ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಹೆಚ್ಚು ಹಿಂದುಗಳಿದ್ದಾರೆ. ಹೀಗಾಗಿ ಇತರೇ ಪ್ರಾಂತ್ಯಗಳಲ್ಲಿ ಹಿಂದುಗಳ ಮೇಲಿನ ದೌರ್ಜನ್ಯ, ದೇಗುಲ ಧ್ವಂಸ ಪ್ರಕರಣಗಳು ಸಾಮಾನ್ಯ ಎಂಬಂತಾಗಿದೆ.
Pakistani police have arrested over 30 people, most of them belonging to a radical Islamist party, after a Hindu temple was vandalised and set on fire by a mob protesting its renovation in northwest Pakistan.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm