ಬ್ರೇಕಿಂಗ್ ನ್ಯೂಸ್
31-01-26 04:56 pm HK News Desk ದೇಶ - ವಿದೇಶ
ಮುಂಬೈ, ಜ.31: ಮಹಾರಾಷ್ಟ್ರದ ನೂತನ ಡಿಸಿಎಂ ಆಗಿ ಇತ್ತೀಚೆಗೆ ವಿಮಾನ ಅಪಘಾತದಲ್ಲಿ ಮೃತಪಟ್ಟ ಅಜಿತ್ ಪವಾರ್ ಅವರ ಪತ್ನಿ ಸುನೇತ್ರ ಪವಾರ್ ಅವರನ್ನು ಆಯ್ಕೆ ಮಾಡಲಾಗಿದೆ. ಎನ್ ಸಿಪಿ ಶಾಸಕರು ಶನಿವಾರ ಮಧ್ಯಾಹ್ನ ಎರಡು ಗಂಟೆಗೆ ಸಭೆ ಸೇರಿ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಸುನೇತ್ರಾ ಅವರನ್ನು ಆಯ್ಕೆ ಮಾಡಿದ್ದು ರಾಜ್ಯಪಾಲರಿಗೆ ಪತ್ರ ರವಾನಿಸಿದ್ದಾರೆ.
ಇದಕ್ಕೂ ಮೊದಲೇ ಸುನೇತ್ರಾ ಅವರು ಅಜಿತ್ ಪವಾರ್ ಸ್ಥಾನವನ್ನು ತುಂಬಲಿದ್ದಾರೆಂದು ಹೇಳಲಾಗಿತ್ತು. ಕಳೆದ ಲೋಕಸಭೆ ಚುನಾವಣೆಯಲ್ಲಿ ಸೋತಿದ್ದ ಸುನೇತ್ರಾ, ಬಳಿಕ ರಾಜ್ಯಸಭೆ ಸದಸ್ಯರಾಗಿ ಆಯ್ಕೆಗೊಂಡಿದ್ದರು. ಇದೀಗ ರಾಜ್ಯಸಭೆ ಸದಸ್ಯತ್ವಕ್ಕೆ ರಾಜಿನಾಮೆ ನೀಡಿ, ರಾಜ್ಯದಲ್ಲಿ ವಿಧಾನ ಪರಿಷತ್ ಅಥವಾ ವಿಧಾನಸಭೆಗೆ ಆಯ್ಕೆಯಾಗಬೇಕು. ಅಜಿತ್ ಪವಾರ್ ಬಾರಾಮತಿ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದು ಅದೇ ಕ್ಷೇತ್ರದಲ್ಲಿ ಸುನೇತ್ರಾ ಉಪ ಚುನಾವಣೆ ಸ್ಪರ್ಧಿಸುವ ಸಾಧ್ಯತೆ ಇದೆ.
ಇಂದು ಸಂಜೆ ಐದು ಗಂಟೆಗೆ ಸಿಎಂ ಫಡ್ನವಿಸ್ ಸಮ್ಮುಖದಲ್ಲಿ ರಾಜ್ಯಪಾಲರ ಮೂಲಕ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಬಾರಾಮತಿ ಕ್ಷೇತ್ರದಿಂದ ಎಂಟು ಬಾರಿ ಆಯ್ಕೆಯಾಗಿದ್ದ ಅಜಿತ್ ಪವಾರ್ ತನ್ನ ಕ್ಷೇತ್ರದಲ್ಲಿ ಸೋಲಿಲ್ಲದ ಸರದಾರನಾಗಿದ್ದರು. ಹಲವು ಸರ್ಕಾರಗಳಲ್ಲಿ ನಾಲ್ಕು ಬಾರಿ ಡಿಸಿಎಂ ಆಗಿದ್ದ ಅಜಿತ್, ಹಲವಾರು ಖಾತೆಗಳನ್ನು ನಿಭಾಯಿಸಿದ್ದರು. ಹಾಲಿ ಸರ್ಕಾರದಲ್ಲಿ ಹಣಕಾಸು ಮತ್ತು ಅಬಕಾರಿ ಖಾತೆಗಳನ್ನು ಹೊಂದಿದ್ದರು. ಸುನೇತ್ರಾ ಅವರಿಗೆ ಅದೇ ಖಾತೆಗಳನ್ನು ಕೊಡಲಾಗುತ್ತದೆಯೇ ಎಂಬ ಬಗ್ಗೆ ಖಾತ್ರಿಯಿಲ್ಲ.
ಇದೇ ವೇಳೆ, ಡಿಸಿಎಂ ಸ್ಥಾನಕ್ಕೆ ಸುನೇತ್ರಾ ನೇಮಕ ಮಾಡಿರುವುದಕ್ಕೆ ಶಿವಸೇನೆ ಟೀಕೆ ಮಾಡಿದೆ. ಅಲ್ಲದೆ, ಎನ್ ಸಿಪಿಯ ಕೆಲವು ಶಾಸಕರು ಅಸಮ್ಮತಿ ತೋರಿದ್ದಾರೆ. ಇಂದು ನಡೆದ ಶಾಸಕಾಂಗ ಸಭೆಯಲ್ಲಿ ಪಕ್ಷದ 45 ಶಾಸಕರು ಪಾಲ್ಗೊಂಡು ಮೂವರು ಗೈರಾಗಿದ್ದರು. ಪಕ್ಷದ ಹಿರಿಯ ನಾಯಕ ಛಗನ್ ಭುಜಬಲ್, ಸುನೇತ್ರಾ ಅವರ ನೇಮಕದ ಪರವಾಗಿ ನಿಂತು ಶಾಸಕರನ್ನು ಸೇರಿ ಮುಂದಿನ ನಾಯಕರಾಗಿ ಆಯ್ಕೆ ಮಾಡಿದ್ದಾರೆ. ಅಜಿತ್ ಪವಾರ್ ಜ.28ರಂದು ನಡೆದ ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದರು.
Following the death of Ajit Pawar in a recent plane crash, the NCP has unanimously chosen his wife Sunetra Pawar as its legislative leader, paving the way for her appointment as Maharashtra’s first woman Deputy Chief Minister. She is set to take oath this evening, even as the decision draws mixed reactions within the ruling alliance.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am