ಬ್ರೇಕಿಂಗ್ ನ್ಯೂಸ್
03-02-26 11:55 am HK News Desk ದೇಶ - ವಿದೇಶ
ದಿಯೋರಿಯಾ (ಉತ್ತರ ಪ್ರದೇಶ), ಫೆ.3 : ಬಾಲಕನ ಮೊಮೋಸ್ ತಿನ್ನುವ ಆಸೆಯನ್ನೇ ದುರುಪಯೋಗ ಮಾಡಿಕೊಂಡ ಬೀದಿ ವ್ಯಾಪಾರಿಗಳು ಆತನಿಗೆ ಉಚಿತವಾಗಿ ಮೆಮೋಸ್ ತೆಗೆದುಕೊಟ್ಟು 85 ಲಕ್ಷ ಮೌಲ್ಯದ ಚಿನ್ನಾಭರಣ ಪಡೆದು ವಂಚಿಸಿದ ಆಘಾತಕಾರಿ ಘಟನೆ ಉತ್ತರ ಪ್ರದೇಶದ ದಿಯೋರಿಯಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ಮೊಮೊಸ್ ಮೇಲಿನ ಅಪಾರ ಆಸೆಯಿಂದ 7ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕನೊಬ್ಬ ಮನೆಯಲ್ಲಿದ್ದ ಸುಮಾರು 85 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ಬೀದಿ ವ್ಯಾಪಾರಿಗಳಿಗೆ ನೀಡಿದ್ದಾನೆ. ಸ್ಥಳೀಯವಾಗಿ ಮೊಮೋಸ್ ಮಾರಾಟ ಮಾಡುತ್ತಿದ್ದ ಮೂವರು ವ್ಯಕ್ತಿಗಳು ಬಾಲಕನಿಗೆ ಕೆಲವು ದಿನಗಳಿಂದ ಉಚಿತವಾಗಿ ಮೊಮೊಸ್ ನೀಡಲು ಆರಂಭಿಸಿದ್ದರು. ನಂತರ, ಅದೇ ಆಮಿಷವನ್ನು ಬಳಸಿ ಮನೆಯಲ್ಲಿದ್ದ ಚಿನ್ನಾಭರಣಗಳನ್ನು ತಂದುಕೊಟ್ಟರೆ ಪ್ರತಿ ದಿನ ಉಚಿತವಾಗಿ ಮೊಮೊಸ್ ನೀಡುವುದಾಗಿ ಬಾಲಕನಿಗೆ ಮನವೊಲಿಸಿದ್ದಾರೆ.
ಈ ಬಗ್ಗೆ ಬಾಲಕನ ತಂದೆ ವಿಮಲೇಶ್ ಮಿಶ್ರಾ ಪೊಲೀಸ್ ಠಾಣೆಗೆ ಲಿಖಿತ ದೂರು ನೀಡಿದ್ದಾರೆ. ದೇವಾಲಯದಲ್ಲಿ ಪುರೋಹಿತರಾಗಿರುವ ಮಿಶ್ರಾ, ತಮ್ಮ ಮಗನ ಆಹಾರದ ಆಸೆಯನ್ನೇ ದುರುಪಯೋಗಪಡಿಸಿ ಬೀದಿ ವ್ಯಾಪಾರಿಗಳು ಮನೆ ಬಂಗಾರವನ್ನು ಪಡೆದುಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಮಿಶ್ರಾ ಅವರ ಸಹೋದರಿ ಮನೆಗೆ ಭೇಟಿ ನೀಡಿ ಚಿನ್ನಾಭರಣಗಳ ಬಗ್ಗೆ ವಿಚಾರಿಸಿದಾಗ ವಿಷಯ ಬೆಳಕಿಗೆ ಬಂದಿದೆ. ಕುಟುಂಬದವರು ಕಪಾಟಿನಲ್ಲಿ ಇಟ್ಟಿದ್ದ ಆಭರಣ ಕಾಣೆಯಾಗಿದ್ದರಿಂದ ಆತಂಕಗೊಂಡಿದ್ದಾರೆ. ನಂತರ ಬಾಲಕನನ್ನು ವಿಚಾರಿಸಿದಾಗ, ಆತ ಆಭರಣಗಳನ್ನು ಮೊಮೊಸ್ ಮಾರಾಟಗಾರರಿಗೆ ನೀಡಿರುವುದಾಗಿ ತಿಳಿಸಿದ್ದಾನೆ.
ಆಭರಣಗಳನ್ನು ಕೊಟ್ಟರೆ ತಾನು ಉಚಿತವಾಗಿ ಮೊಮೊಸ್ ತಿನ್ನಬಹುದೆಂದು ವ್ಯಾಪಾರಿಗಳು ಹೇಳಿದ್ದರಂತೆ. ಕಳವಾದ ಚಿನ್ನಾಭರಣಗಳ ಪ್ರಸ್ತುತ ಮೌಲ್ಯ ಸುಮಾರು 85 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಪೋಷಕರ ದೂರಿನ ಮೇರೆಗೆ ಪೊಲೀಸರು ಮೂವರು ಬೀದಿ ವ್ಯಾಪಾರಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
In a shocking incident in Deoria, Uttar Pradesh, a Class 7 boy allegedly handed over gold jewellery worth ₹85 lakh from his home to street vendors who lured him with free momos. The vendors reportedly promised him daily free momos in exchange for the ornaments. The incident came to light after family members noticed the missing gold.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am