ಬ್ರೇಕಿಂಗ್ ನ್ಯೂಸ್
03-02-26 11:55 am HK News Desk ದೇಶ - ವಿದೇಶ
ದಿಯೋರಿಯಾ (ಉತ್ತರ ಪ್ರದೇಶ), ಫೆ.3 : ಬಾಲಕನ ಮೊಮೋಸ್ ತಿನ್ನುವ ಆಸೆಯನ್ನೇ ದುರುಪಯೋಗ ಮಾಡಿಕೊಂಡ ಬೀದಿ ವ್ಯಾಪಾರಿಗಳು ಆತನಿಗೆ ಉಚಿತವಾಗಿ ಮೆಮೋಸ್ ತೆಗೆದುಕೊಟ್ಟು 85 ಲಕ್ಷ ಮೌಲ್ಯದ ಚಿನ್ನಾಭರಣ ಪಡೆದು ವಂಚಿಸಿದ ಆಘಾತಕಾರಿ ಘಟನೆ ಉತ್ತರ ಪ್ರದೇಶದ ದಿಯೋರಿಯಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ಮೊಮೊಸ್ ಮೇಲಿನ ಅಪಾರ ಆಸೆಯಿಂದ 7ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕನೊಬ್ಬ ಮನೆಯಲ್ಲಿದ್ದ ಸುಮಾರು 85 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ಬೀದಿ ವ್ಯಾಪಾರಿಗಳಿಗೆ ನೀಡಿದ್ದಾನೆ. ಸ್ಥಳೀಯವಾಗಿ ಮೊಮೋಸ್ ಮಾರಾಟ ಮಾಡುತ್ತಿದ್ದ ಮೂವರು ವ್ಯಕ್ತಿಗಳು ಬಾಲಕನಿಗೆ ಕೆಲವು ದಿನಗಳಿಂದ ಉಚಿತವಾಗಿ ಮೊಮೊಸ್ ನೀಡಲು ಆರಂಭಿಸಿದ್ದರು. ನಂತರ, ಅದೇ ಆಮಿಷವನ್ನು ಬಳಸಿ ಮನೆಯಲ್ಲಿದ್ದ ಚಿನ್ನಾಭರಣಗಳನ್ನು ತಂದುಕೊಟ್ಟರೆ ಪ್ರತಿ ದಿನ ಉಚಿತವಾಗಿ ಮೊಮೊಸ್ ನೀಡುವುದಾಗಿ ಬಾಲಕನಿಗೆ ಮನವೊಲಿಸಿದ್ದಾರೆ.
ಈ ಬಗ್ಗೆ ಬಾಲಕನ ತಂದೆ ವಿಮಲೇಶ್ ಮಿಶ್ರಾ ಪೊಲೀಸ್ ಠಾಣೆಗೆ ಲಿಖಿತ ದೂರು ನೀಡಿದ್ದಾರೆ. ದೇವಾಲಯದಲ್ಲಿ ಪುರೋಹಿತರಾಗಿರುವ ಮಿಶ್ರಾ, ತಮ್ಮ ಮಗನ ಆಹಾರದ ಆಸೆಯನ್ನೇ ದುರುಪಯೋಗಪಡಿಸಿ ಬೀದಿ ವ್ಯಾಪಾರಿಗಳು ಮನೆ ಬಂಗಾರವನ್ನು ಪಡೆದುಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಮಿಶ್ರಾ ಅವರ ಸಹೋದರಿ ಮನೆಗೆ ಭೇಟಿ ನೀಡಿ ಚಿನ್ನಾಭರಣಗಳ ಬಗ್ಗೆ ವಿಚಾರಿಸಿದಾಗ ವಿಷಯ ಬೆಳಕಿಗೆ ಬಂದಿದೆ. ಕುಟುಂಬದವರು ಕಪಾಟಿನಲ್ಲಿ ಇಟ್ಟಿದ್ದ ಆಭರಣ ಕಾಣೆಯಾಗಿದ್ದರಿಂದ ಆತಂಕಗೊಂಡಿದ್ದಾರೆ. ನಂತರ ಬಾಲಕನನ್ನು ವಿಚಾರಿಸಿದಾಗ, ಆತ ಆಭರಣಗಳನ್ನು ಮೊಮೊಸ್ ಮಾರಾಟಗಾರರಿಗೆ ನೀಡಿರುವುದಾಗಿ ತಿಳಿಸಿದ್ದಾನೆ.
ಆಭರಣಗಳನ್ನು ಕೊಟ್ಟರೆ ತಾನು ಉಚಿತವಾಗಿ ಮೊಮೊಸ್ ತಿನ್ನಬಹುದೆಂದು ವ್ಯಾಪಾರಿಗಳು ಹೇಳಿದ್ದರಂತೆ. ಕಳವಾದ ಚಿನ್ನಾಭರಣಗಳ ಪ್ರಸ್ತುತ ಮೌಲ್ಯ ಸುಮಾರು 85 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಪೋಷಕರ ದೂರಿನ ಮೇರೆಗೆ ಪೊಲೀಸರು ಮೂವರು ಬೀದಿ ವ್ಯಾಪಾರಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
In a shocking incident in Deoria, Uttar Pradesh, a Class 7 boy allegedly handed over gold jewellery worth ₹85 lakh from his home to street vendors who lured him with free momos. The vendors reportedly promised him daily free momos in exchange for the ornaments. The incident came to light after family members noticed the missing gold.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 11:13 pm
Mangaluru Staffer
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Manjunath Bhandary MLC: ಕೆಪಿಸಿಸಿ ಕಾರ್ಯಾಧ್ಯಕ್ಷ...
16-02-26 01:48 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm