ಬ್ರೇಕಿಂಗ್ ನ್ಯೂಸ್
03-02-26 11:55 am HK News Desk ದೇಶ - ವಿದೇಶ
ದಿಯೋರಿಯಾ (ಉತ್ತರ ಪ್ರದೇಶ), ಫೆ.3 : ಬಾಲಕನ ಮೊಮೋಸ್ ತಿನ್ನುವ ಆಸೆಯನ್ನೇ ದುರುಪಯೋಗ ಮಾಡಿಕೊಂಡ ಬೀದಿ ವ್ಯಾಪಾರಿಗಳು ಆತನಿಗೆ ಉಚಿತವಾಗಿ ಮೆಮೋಸ್ ತೆಗೆದುಕೊಟ್ಟು 85 ಲಕ್ಷ ಮೌಲ್ಯದ ಚಿನ್ನಾಭರಣ ಪಡೆದು ವಂಚಿಸಿದ ಆಘಾತಕಾರಿ ಘಟನೆ ಉತ್ತರ ಪ್ರದೇಶದ ದಿಯೋರಿಯಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ಮೊಮೊಸ್ ಮೇಲಿನ ಅಪಾರ ಆಸೆಯಿಂದ 7ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕನೊಬ್ಬ ಮನೆಯಲ್ಲಿದ್ದ ಸುಮಾರು 85 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ಬೀದಿ ವ್ಯಾಪಾರಿಗಳಿಗೆ ನೀಡಿದ್ದಾನೆ. ಸ್ಥಳೀಯವಾಗಿ ಮೊಮೋಸ್ ಮಾರಾಟ ಮಾಡುತ್ತಿದ್ದ ಮೂವರು ವ್ಯಕ್ತಿಗಳು ಬಾಲಕನಿಗೆ ಕೆಲವು ದಿನಗಳಿಂದ ಉಚಿತವಾಗಿ ಮೊಮೊಸ್ ನೀಡಲು ಆರಂಭಿಸಿದ್ದರು. ನಂತರ, ಅದೇ ಆಮಿಷವನ್ನು ಬಳಸಿ ಮನೆಯಲ್ಲಿದ್ದ ಚಿನ್ನಾಭರಣಗಳನ್ನು ತಂದುಕೊಟ್ಟರೆ ಪ್ರತಿ ದಿನ ಉಚಿತವಾಗಿ ಮೊಮೊಸ್ ನೀಡುವುದಾಗಿ ಬಾಲಕನಿಗೆ ಮನವೊಲಿಸಿದ್ದಾರೆ.
ಈ ಬಗ್ಗೆ ಬಾಲಕನ ತಂದೆ ವಿಮಲೇಶ್ ಮಿಶ್ರಾ ಪೊಲೀಸ್ ಠಾಣೆಗೆ ಲಿಖಿತ ದೂರು ನೀಡಿದ್ದಾರೆ. ದೇವಾಲಯದಲ್ಲಿ ಪುರೋಹಿತರಾಗಿರುವ ಮಿಶ್ರಾ, ತಮ್ಮ ಮಗನ ಆಹಾರದ ಆಸೆಯನ್ನೇ ದುರುಪಯೋಗಪಡಿಸಿ ಬೀದಿ ವ್ಯಾಪಾರಿಗಳು ಮನೆ ಬಂಗಾರವನ್ನು ಪಡೆದುಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಮಿಶ್ರಾ ಅವರ ಸಹೋದರಿ ಮನೆಗೆ ಭೇಟಿ ನೀಡಿ ಚಿನ್ನಾಭರಣಗಳ ಬಗ್ಗೆ ವಿಚಾರಿಸಿದಾಗ ವಿಷಯ ಬೆಳಕಿಗೆ ಬಂದಿದೆ. ಕುಟುಂಬದವರು ಕಪಾಟಿನಲ್ಲಿ ಇಟ್ಟಿದ್ದ ಆಭರಣ ಕಾಣೆಯಾಗಿದ್ದರಿಂದ ಆತಂಕಗೊಂಡಿದ್ದಾರೆ. ನಂತರ ಬಾಲಕನನ್ನು ವಿಚಾರಿಸಿದಾಗ, ಆತ ಆಭರಣಗಳನ್ನು ಮೊಮೊಸ್ ಮಾರಾಟಗಾರರಿಗೆ ನೀಡಿರುವುದಾಗಿ ತಿಳಿಸಿದ್ದಾನೆ.
ಆಭರಣಗಳನ್ನು ಕೊಟ್ಟರೆ ತಾನು ಉಚಿತವಾಗಿ ಮೊಮೊಸ್ ತಿನ್ನಬಹುದೆಂದು ವ್ಯಾಪಾರಿಗಳು ಹೇಳಿದ್ದರಂತೆ. ಕಳವಾದ ಚಿನ್ನಾಭರಣಗಳ ಪ್ರಸ್ತುತ ಮೌಲ್ಯ ಸುಮಾರು 85 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಪೋಷಕರ ದೂರಿನ ಮೇರೆಗೆ ಪೊಲೀಸರು ಮೂವರು ಬೀದಿ ವ್ಯಾಪಾರಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
In a shocking incident in Deoria, Uttar Pradesh, a Class 7 boy allegedly handed over gold jewellery worth ₹85 lakh from his home to street vendors who lured him with free momos. The vendors reportedly promised him daily free momos in exchange for the ornaments. The incident came to light after family members noticed the missing gold.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm