ಬ್ರೇಕಿಂಗ್ ನ್ಯೂಸ್
04-02-26 03:42 pm HK News Desk ದೇಶ - ವಿದೇಶ
ಚೆನ್ನೈ, ಫೆ.4 : ತಮಿಳುನಾಡು ವಿಧಾನಸಭೆ ಚುನಾವಣೆ ಹೊಸ್ತಿಲಲ್ಲೇ ಫೈರ್ ಬ್ರಾಂಡ್ ಅಣ್ಣಾಮಲೈ ಬಿಜೆಪಿಗೆ ಶಾಕ್ ಕೊಟ್ಟಿದ್ದಾರೆ. ಆರು ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾ ಉಸ್ತುವಾರಿಯಾಗಿ ಸೀಮಿತಗೊಳಿಸಿದ್ದಕ್ಕೆ ಬೇಸರಗೊಂಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ತಮ್ಮ ಜವಾಬ್ದಾರಿಯಿಂದ ಹಿಂದೆ ಸರಿದಿದ್ದಾರೆ. ತಮ್ಮ ತಂದೆಯ ಅನಾರೋಗ್ಯದ ನೆಪವೊಡ್ಡಿ ತಮ್ಮ ಜವಾಬ್ದಾರಿಯಿಂದ ಹಿಂದೆ ಸರಿದು ಅಚ್ಚರಿ ಮೂಡಿಸಿದ್ದಾರೆ.
ವಯೋವೃದ್ಧ ತಂದೆಯ ಆರೈಕೆಗಾಗಿ ಕೊಯಮತ್ತೂರಿನಲ್ಲಿ ಇರಬೇಕಿದ್ದು ಚುನಾವಣಾ ಉಸ್ತುವಾರಿ ಕೆಲಸದ ಜವಾಬ್ದಾರಿ ವಹಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಅಣ್ಣಾಮಲೈ ಹೇಳಿದ್ದಾರೆ. ತಂದೆ ಅಸ್ವಸ್ಥರಾಗಿದ್ದು ಅವರನ್ನು ನೋಡಿಕೊಳ್ಳಬೇಕು. ಚುನಾವಣಾ ಜವಾಬ್ದಾರಿಗಳನ್ನು ನಿರ್ವಹಿಸಲು ಸಾಧ್ಯವಾಗುವುದಿಲ್ಲ ಎಂದು ಹೈಕಮಾಂಡ್ಗೆ ತಿಳಿಸಿದ್ದೇನೆ. ತಂದೆಯನ್ನು ನೋಡಿಕೊಳ್ಳುವುದು ನನ್ನ ಮೊದಲ ಆದ್ಯತೆ ಎಂದು ಅಣ್ಣಾಮಲೈ ತಿಳಿಸಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ತಮ್ಮನ್ನು ಕೇವಲ 6 ಸ್ಥಾನಗಳಿಗೆ ಸೀಮಿತಗೊಳಿಸಿದ್ದಕ್ಕಾಗಿ ಕೇಂದ್ರ ನಾಯಕತ್ವದ ಬಗ್ಗೆ ಅಸಮಾಧಾನಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಎಐಎಡಿಎಂಕೆ ಜೊತೆ ಬಿಜೆಪಿ ಮೈತ್ರಿ ಮಾಡಿಕೊಳ್ಳಲು ಅಣ್ಣಾಮಲೈ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲಾಗಿತ್ತು. ಬಳಿಕ ಬಿಜೆಪಿಯಲ್ಲಿ ಅವರು ಮೂಲೆಗುಂಪಾಗಿದ್ದರು. ರಾಷ್ಟ್ರೀಯ ಮಟ್ಟದಲ್ಲಿ ಜವಾಬ್ದಾರಿ ನೀಡಲಾಗುವುದೆಂದು ಹೇಳಲಾಗಿದ್ದರೂ ಅದನ್ನೂ ಮಾಡಿಲ್ಲ. ರಾಜ್ಯ ಘಟಕ ಆಯೋಜಿಸುವ ಕಾರ್ಯಕ್ರಮಗಳಿಂದಲೂ ಅಣ್ಣಾಮಲೈ ದೂರ ಉಳಿದಿದ್ದರು. ಬಿಜೆಪಿ ಎಐಎಡಿಎಂಕೆ ಜೊತೆ ವ್ಯವಹರಿಸುತ್ತಿರುವ ರೀತಿ ಬಗ್ಗೆಯೂ ಅವರು ಅಸಮಾಧಾನಗೊಂಡಿದ್ದಾರೆ ಎಂದು ಹೇಳಲಾಗಿದೆ.
ತಮಿಳುನಾಡು ಬಿಜೆಪಿಯ ಅತ್ಯಂತ ಜನಪ್ರಿಯ ನಾಯಕರಾಗಿರುವ ಅಣ್ಣಾಮಲೈ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗವಹಿಸುವ ಬಹುತೇಕ ಕಾರ್ಯಕ್ರಮಗಳಲ್ಲಿ ಗಮನ ಸೆಳೆಯುತ್ತಿದ್ದಾರೆ. ಆದರೆ ರಾಜ್ಯದಲ್ಲಿ ಎಐಎಡಿಎಂಕೆ ಬಗ್ಗೆ ಬಿಜೆಪಿ ನಾಯಕರು ಮೃದು ಧೋರಣೆ ಹೊಂದಿರುವುದು ಅಣ್ಣಾಮಲೈಗೆ ಸರಿ ಹೊಂದುತ್ತಿಲ್ಲ. ಎರಡೂ ದ್ರಾವಿಡ ಪಕ್ಷಗಳನ್ನ ಎದುರಿಸುತ್ತ ಬಂದಿರುವ ಅಣ್ಣಾಮಲೈ ಈಗ ತಮಗಿಂತ ಹೆಚ್ಚು ಜನಪ್ರಿಯರಾಗುತ್ತಿರುವುದು ಆ ಪಕ್ಷಗಳ ನಾಯಕರನ್ನು ಚಿಂತೆಗೀಡು ಮಾಡಿದೆ. ಎಐಎಡಿಎಂಕೆ ಪಕ್ಷದಲ್ಲಿ ಜನಪ್ರಿಯ ನಾಯಕರು ಇಲ್ಲದೇ ಇರುವುದರಿಂದ ಬಹುಮತ ಬಂದರೆ ಅಣ್ಣಾಮಲೈ ಕೈಮೇಲಾಗುತ್ತದೆಂಬ ಭಾವನೆ ಸ್ಥಳೀಯ ಪಕ್ಷಗಳಲ್ಲಿದೆ.
ತಮಿಳುನಾಡಿನಲ್ಲಿ ಮೇ ತಿಂಗಳಲ್ಲಿ ಚುನಾವಣೆ ನಡೆಯಲಿದ್ದು ಬಹುತೇಕ ಬಿಜೆಪಿ- ಎಐಎಡಿಎಂಕೆ ಮೈತ್ರಿಕೂಟ ಬಹುಮತ ಸಾಧಿಸುವ ಸಾಧ್ಯತೆ ಇದೆ. ಆದರೆ ಎಐಎಡಿಎಂಕೆ ಬೇಡಿಕೆಯಂತೆ ರಾಜ್ಯಾಧ್ಯಕ್ಷ ಸ್ಥಾನ ತ್ಯಜಿಸಿದ ಅಣ್ಣಾಮಲೈ ಅವರನ್ನೀಗ ಪೂರ್ತಿ ಮೂಲೆಗುಂಪು ಮಾಡಲು ಹುನ್ನಾರ ನಡೆದಿದೆ. ಮೋದಿ- ಷಾ ಜೋಡಿಗೆ ಅಣ್ಣಾಮಲೈ ಪ್ರಭಾವ ತಿಳಿದಿದ್ದರೂ, ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳದೆ ಅಧಿಕಾರ ಹಿಡಿಯಲು ಸಾಧ್ಯವಿಲ್ಲ ಎನ್ನುವ ನೆಲೆಯಲ್ಲಿ ಸ್ಥಳೀಯ ಪಕ್ಷದ ತಾಳಕ್ಕೆ ತಕ್ಕಂತೆ ಕುಣಿಯುವ ಸ್ಥಿತಿಯಾಗಿದೆ.
responsibilities, citing his father’s ill health. Reports suggest he was unhappy over being limited to overseeing just six constituencies ahead of the Assembly polls. The development has sparked political debate amid BJP’s alliance with AIADMK.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm