ಬ್ರೇಕಿಂಗ್ ನ್ಯೂಸ್
06-02-26 10:58 pm HK News Desk ದೇಶ - ವಿದೇಶ
ಜೈಪುರ, ಫೆ 06 : ರಾಜಸ್ಥಾನದ ದೇಗಾನ ನಗರದಲ್ಲಿ ಅಪರೂಪದ ಮತ್ತು ಅಚ್ಚರಿಯ ಘಟನೆಯೊಂದು ನಡೆದಿದೆ. ಚಿನ್ನದ ಅಂಗಡಿಯೊಳಗೆ ಹಾರಿಬಂದ ಪಾರಿವಾಳವೊಂದು ತನ್ನ ಕೊಕ್ಕಿನಲ್ಲಿ ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಸರವನ್ನ ಎತ್ತಿಕೊಂಡು ಹಾರಿಹೋಗಿದ್ದು, ಈ ದೃಶ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ದೇಗಾನ ನಗರದ ಚಿನ್ನದ ಮಾರುಕಟ್ಟೆಯಲ್ಲಿರುವ ಅಂಗಡಿಯಲ್ಲಿ ಕುಶಲಕರ್ಮಿಗಳು ಚಿನ್ನಾಭರಣ ತಯಾರಿಕೆಯಲ್ಲಿ ತೊಡಗಿದ್ದ ವೇಳೆ ಈ ಘಟನೆ ಸಂಭವಿಸಿದೆ. ಅಚಾನಕ್ ಆಗಿ ಅಂಗಡಿಯೊಳಗೆ ಪ್ರವೇಶಿಸಿದ ಪಾರಿವಾಳವು ಸುಮಾರು 1 ಲಕ್ಷ ರೂ. ಮೌಲ್ಯದ ಚಿನ್ನದ ಸರವನ್ನು ತನ್ನ ಕೊಕ್ಕಿನಲ್ಲಿ ಸಿಕ್ಕಿಸಿಕೊಂಡು ಹೊರಗೆ ಹಾರಿದುದರಿಂದ ಅಂಗಡಿ ಮಾಲೀಕರು ಮತ್ತು ಕಾರ್ಮಿಕರು ಬೆಚ್ಚಿಬಿದ್ದಿದ್ದಾರೆ.
ಕ್ಷಣಾರ್ಧದಲ್ಲಿ ಈ ವಿಷಯ ಇಡೀ ಮಾರುಕಟ್ಟೆಯಲ್ಲೇ ಹರಡಿದ್ದು, ಅಂಗಡಿಯ ಎದುರು ಜನಸ್ತೋಮವೇ ಸೇರಿತು. ಪರಿಸ್ಥಿತಿಯಿಂದ ಗೊಂದಲದ ವಾತಾವರಣ ನಿರ್ಮಾಣವಾಗಿದ್ದು, ವ್ಯಾಪಾರಿಗಳು ಮತ್ತು ಸಾರ್ವಜನಿಕರು ಪಾರಿವಾಳದ ಚಲನವಲನವನ್ನು ಆತಂಕದಿಂದ ಗಮನಿಸುತ್ತಿದ್ದರು. ಹಾರಿಹೋದ ಪಾರಿವಾಳ ಸಮೀಪದ ಮಾರುಕಟ್ಟೆಯ ಛಾವಣಿಯ ಮೇಲೆ ಕುಳಿತುಕೊಂಡು ದೀರ್ಘ ಸಮಯ ಅಲ್ಲಿಯೇ ಉಳಿದಿದ್ದು, ಕೆಳಗಿದ್ದ ಜನರ ಚಟುವಟಿಕೆಯನ್ನು ಶಾಂತವಾಗಿ ಗಮನಿಸುತ್ತಿದ್ದ ದೃಶ್ಯ ಕಂಡುಬಂತು.
ಅಂಗಡಿ ಮಾಲೀಕರು ಹಾಗೂ ಇತರ ವ್ಯಾಪಾರಿಗಳು ಏನು ಕ್ರಮ ಕೈಗೊಳ್ಳಬೇಕು ಎಂಬ ಗೊಂದಲದಲ್ಲೇ ಕೆಲಕಾಲ ಕಾಲ ಕಳೆಯಬೇಕಾಯಿತು. ಹಲವು ಪ್ರಯತ್ನಗಳು ನಡೆದರೂ ಪಾರಿವಾಳವನ್ನು ಹಿಡಿಯಲು ಯಾರಿಗೂ ಸಾಧ್ಯವಾಗಲಿಲ್ಲ. ಕೊನೆಗೆ ಪಾರಿವಾಳ ಮತ್ತೊಮ್ಮೆ ಹಾರಿದ ವೇಳೆ, ಅದರ ಕೊಕ್ಕಿನಲ್ಲಿ ಇದ್ದ ಚಿನ್ನದ ಸರ ಜಾರಿ ಕೆಳಗೆ ಬಿದ್ದಿದೆ.
ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಸರ ಸುರಕ್ಷಿತವಾಗಿ ಮರಳಿ ದೊರಕುತ್ತಿದ್ದಂತೆ ಅಂಗಡಿ ಮಾಲೀಕರು ನಿಟ್ಟುಸಿರು ಬಿಟ್ಟಿದ್ದು, ಸ್ಥಳದಲ್ಲಿದ್ದ ಜನರೂ ನಿರಾಳರಾದರು. ಈ ವಿಚಿತ್ರ ಮತ್ತು ಅಪರೂಪದ ಘಟನೆ ಮಾರುಕಟ್ಟೆಯಲ್ಲಿ ಕೆಲಕಾಲ ಚರ್ಚೆಯ ವಿಷಯವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿಯೂ ವ್ಯಾಪಕವಾಗಿ ವೈರಲ್ ಆಗುತ್ತಿದೆ.
In a bizarre incident in Rajasthan’s Degana town, a pigeon flew into a jewellery shop and picked up a gold chain worth ₹1 lakh in its beak, leaving locals stunned. The bird later dropped the chain from a nearby rooftop, bringing relief to the shop owner. The unusual episode has since gone viral on social media.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm