ಬ್ರೇಕಿಂಗ್ ನ್ಯೂಸ್
07-02-26 10:53 pm HK News Desk ದೇಶ - ವಿದೇಶ
ಮುಂಬೈ, ಫೆ.7: ಮುಂಬೈ ಮಹಾನಗರ ಪಾಲಿಕೆಯಲ್ಲಿ ಬಿಜೆಪಿಯೇ ಮೇಲುಗೈ ಸಾಧಿಸಿದೆ. ಬಿಜೆಪಿ ಸದಸ್ಯೆ ರಿತು ತಾವ್ಡೆ ಅವರು ಮುಂಬೈನ ನೂತನ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. 25 ವರ್ಷಗಳ ಶಿವಸೇನೆ ಅಧಿಪತ್ಯ ಬದಿಗಿಟ್ಟು ಮೊದಲ ಬಾರಿಗೆ ಬಿಜೆಪಿ ಮೇಯರ್ ಸ್ಥಾನವನ್ನು ತನ್ನದಾಗಿಸಿಕೊಂಡಿದೆ.
ಘಾಟ್ಕೋಪರ್ ವಾರ್ಡ್ ಕಾರ್ಪೊರೇಟರ್ ಆಗಿರುವ ರಿತು ತಾವ್ಡೆ ಈ ಹಿಂದೆ ಮುಂಬೈ ಪಾಲಿಕೆಯಲ್ಲಿ ಶಿಕ್ಷಣ ಸಮಿತಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಶಿವಸೇನೆಯ (ಶಿಂಧೆ ಬಣ) ಸಂಜಯ್ ಶಂಕರ್ ಘಾಡಿ ಅವರು ಉಪ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಇವರು ವಾರ್ಡ್ ಸಂಖ್ಯೆ 5 ರಿಂದ ಕಾರ್ಪೊರೇಟರ್ ಆಗಿ ಆಯ್ಕೆಯಾಗಿದ್ದರು.
ಉಪ ಮೇಯರ್ ಸ್ಥಾನವನ್ನು ಶಿವಸೇನೆ ಶಿಂಧೆ ಬಣವು ತನ್ನ ನಾಲ್ವರು ಕಾರ್ಪೊರೇಟರ್ಗಳಿಗೆ ಹಂಚಿಕೆ ಮಾಡಲು ನಿರ್ಧರಿಸಿದೆ. ಸಂಜಯ್ ಘಾಡಿ ಮೊದಲ 15 ತಿಂಗಳ ಕಾಲ ಈ ಹುದ್ದೆಯಲ್ಲಿ ಇರಲಿದ್ದಾರೆ.
2022ರಲ್ಲಿ ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ ಸರ್ಕಾರ ಪತನಗೊಂಡಾಗ, ಮುಂಬೈನಲ್ಲಿ ಏಕನಾಥ್ ಶಿಂಧೆ ಪರವಾಗಿ ನಿಂತ ಪ್ರಮುಖ ನಾಯಕರಲ್ಲಿ ಸಂಜಯ್ ಘಾಡಿ ಒಬ್ಬರಾಗಿದ್ದರು. ಮೈತ್ರಿ ಒಪ್ಪಂದದಂತೆ ಬಿಜೆಪಿ ಮತ್ತು ಶಿವಸೇನೆ (ಶಿಂಧೆ ಬಣ) ಅಧಿಕಾರ ಹಂಚಿಕೊಂಡಿವೆ.
227 ಸದಸ್ಯ ಬಲದ ಮುಂಬೈ ಪಾಲಿಕೆಗೆ ಜನವರಿ 15ರಂದು ನಡೆದ ಚುನಾವಣೆಯಲ್ಲಿ ಬಿಜೆಪಿ 89 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಶಿವಸೇನೆ ಶಿಂಧೆ ಬಣವು 29 ಸ್ಥಾನಗಳನ್ನು ಪಡೆದಿದ್ದು ಮೈತ್ರಿಕೂಟ 118 ಸ್ಥಾನಗಳೊಂದಿಗೆ ಸ್ಪಷ್ಟ ಬಹುಮತ ಪಡೆದಿತ್ತು. 1997ರಿಂದ ನಿರಂತರ ಅಧಿಕಾರದಲ್ಲಿದ್ದ ಶಿವಸೇನೆ 65 ಸ್ಥಾನಗಳನ್ನು ಪಡೆದಿತ್ತು. ಇವರ ಮೈತ್ರಿ ಪಕ್ಷಗಳಾದ ಎಂಎನ್ಎಸ್ 6 ಮತ್ತು ಎನ್ ಸಿಪಿ ಒಂದು ಸ್ಥಾನ ಪಡೆದಿತ್ತು. ಕಾಂಗ್ರೆಸ್ 24, ಎಐಎಂಐಎಂ ಎಂಟು, ಎನ್ ಸಿಪಿ (ಅಜಿತ್ ಬಣ) ಮೂರು ಹಾಗೂ ಸಮಾಜವಾದಿ ಪಾರ್ಟಿ ಎರಡು ಸ್ಥಾನ ಗಳಿಸಿದ್ದವು.
ಬೃಹನ್ಮುಂಬಯಿ ಮಹಾನಗರ ಪಾಲಿಕೆ ದೇಶದ ಶ್ರೀಮಂತ ಪಾಲಿಕೆಗಳಲ್ಲಿ ಒಂದಾಗಿದ್ದು ಏಳು ವರ್ಷಗಳ ಬಳಿಕ ಚುನಾವಣೆ ಆಗಿತ್ತು. 2022ರಲ್ಲಿ ಅವಧಿ ಮುಗಿದ ಬಳಿಕ ಪಾಲಿಕೆಗೆ ಆಡಳಿತಾಧಿಕಾರಿ ನೇಮಿಸಲಾಗಿತ್ತು. ಪಾಲಿಕೆಯ 2025-26ರ ಬಜೆಟ್ ಮೊತ್ತ 74 ಸಾವಿರ ಕೋಟಿಯಾಗಿತ್ತು.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am