ಬ್ರೇಕಿಂಗ್ ನ್ಯೂಸ್
07-02-26 10:53 pm HK News Desk ದೇಶ - ವಿದೇಶ
ಮುಂಬೈ, ಫೆ.7: ಮುಂಬೈ ಮಹಾನಗರ ಪಾಲಿಕೆಯಲ್ಲಿ ಬಿಜೆಪಿಯೇ ಮೇಲುಗೈ ಸಾಧಿಸಿದೆ. ಬಿಜೆಪಿ ಸದಸ್ಯೆ ರಿತು ತಾವ್ಡೆ ಅವರು ಮುಂಬೈನ ನೂತನ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. 25 ವರ್ಷಗಳ ಶಿವಸೇನೆ ಅಧಿಪತ್ಯ ಬದಿಗಿಟ್ಟು ಮೊದಲ ಬಾರಿಗೆ ಬಿಜೆಪಿ ಮೇಯರ್ ಸ್ಥಾನವನ್ನು ತನ್ನದಾಗಿಸಿಕೊಂಡಿದೆ.
ಘಾಟ್ಕೋಪರ್ ವಾರ್ಡ್ ಕಾರ್ಪೊರೇಟರ್ ಆಗಿರುವ ರಿತು ತಾವ್ಡೆ ಈ ಹಿಂದೆ ಮುಂಬೈ ಪಾಲಿಕೆಯಲ್ಲಿ ಶಿಕ್ಷಣ ಸಮಿತಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಶಿವಸೇನೆಯ (ಶಿಂಧೆ ಬಣ) ಸಂಜಯ್ ಶಂಕರ್ ಘಾಡಿ ಅವರು ಉಪ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಇವರು ವಾರ್ಡ್ ಸಂಖ್ಯೆ 5 ರಿಂದ ಕಾರ್ಪೊರೇಟರ್ ಆಗಿ ಆಯ್ಕೆಯಾಗಿದ್ದರು.
ಉಪ ಮೇಯರ್ ಸ್ಥಾನವನ್ನು ಶಿವಸೇನೆ ಶಿಂಧೆ ಬಣವು ತನ್ನ ನಾಲ್ವರು ಕಾರ್ಪೊರೇಟರ್ಗಳಿಗೆ ಹಂಚಿಕೆ ಮಾಡಲು ನಿರ್ಧರಿಸಿದೆ. ಸಂಜಯ್ ಘಾಡಿ ಮೊದಲ 15 ತಿಂಗಳ ಕಾಲ ಈ ಹುದ್ದೆಯಲ್ಲಿ ಇರಲಿದ್ದಾರೆ.
2022ರಲ್ಲಿ ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ ಸರ್ಕಾರ ಪತನಗೊಂಡಾಗ, ಮುಂಬೈನಲ್ಲಿ ಏಕನಾಥ್ ಶಿಂಧೆ ಪರವಾಗಿ ನಿಂತ ಪ್ರಮುಖ ನಾಯಕರಲ್ಲಿ ಸಂಜಯ್ ಘಾಡಿ ಒಬ್ಬರಾಗಿದ್ದರು. ಮೈತ್ರಿ ಒಪ್ಪಂದದಂತೆ ಬಿಜೆಪಿ ಮತ್ತು ಶಿವಸೇನೆ (ಶಿಂಧೆ ಬಣ) ಅಧಿಕಾರ ಹಂಚಿಕೊಂಡಿವೆ.
227 ಸದಸ್ಯ ಬಲದ ಮುಂಬೈ ಪಾಲಿಕೆಗೆ ಜನವರಿ 15ರಂದು ನಡೆದ ಚುನಾವಣೆಯಲ್ಲಿ ಬಿಜೆಪಿ 89 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಶಿವಸೇನೆ ಶಿಂಧೆ ಬಣವು 29 ಸ್ಥಾನಗಳನ್ನು ಪಡೆದಿದ್ದು ಮೈತ್ರಿಕೂಟ 118 ಸ್ಥಾನಗಳೊಂದಿಗೆ ಸ್ಪಷ್ಟ ಬಹುಮತ ಪಡೆದಿತ್ತು. 1997ರಿಂದ ನಿರಂತರ ಅಧಿಕಾರದಲ್ಲಿದ್ದ ಶಿವಸೇನೆ 65 ಸ್ಥಾನಗಳನ್ನು ಪಡೆದಿತ್ತು. ಇವರ ಮೈತ್ರಿ ಪಕ್ಷಗಳಾದ ಎಂಎನ್ಎಸ್ 6 ಮತ್ತು ಎನ್ ಸಿಪಿ ಒಂದು ಸ್ಥಾನ ಪಡೆದಿತ್ತು. ಕಾಂಗ್ರೆಸ್ 24, ಎಐಎಂಐಎಂ ಎಂಟು, ಎನ್ ಸಿಪಿ (ಅಜಿತ್ ಬಣ) ಮೂರು ಹಾಗೂ ಸಮಾಜವಾದಿ ಪಾರ್ಟಿ ಎರಡು ಸ್ಥಾನ ಗಳಿಸಿದ್ದವು.
ಬೃಹನ್ಮುಂಬಯಿ ಮಹಾನಗರ ಪಾಲಿಕೆ ದೇಶದ ಶ್ರೀಮಂತ ಪಾಲಿಕೆಗಳಲ್ಲಿ ಒಂದಾಗಿದ್ದು ಏಳು ವರ್ಷಗಳ ಬಳಿಕ ಚುನಾವಣೆ ಆಗಿತ್ತು. 2022ರಲ್ಲಿ ಅವಧಿ ಮುಗಿದ ಬಳಿಕ ಪಾಲಿಕೆಗೆ ಆಡಳಿತಾಧಿಕಾರಿ ನೇಮಿಸಲಾಗಿತ್ತು. ಪಾಲಿಕೆಯ 2025-26ರ ಬಜೆಟ್ ಮೊತ್ತ 74 ಸಾವಿರ ಕೋಟಿಯಾಗಿತ್ತು.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm