ಬ್ರೇಕಿಂಗ್ ನ್ಯೂಸ್
10-02-26 11:44 am HK News Desk ದೇಶ - ವಿದೇಶ
ನವದೆಹಲಿ, ಫೆ.10 : ಅಯೋಧ್ಯೆ ರಾಮ ಮಂದಿರದ ಮೇಲೆ ದಾಳಿ ನಡೆಸಲು ಸಂಚು ರೂಪಿಸಿ ಜೈಲು ಪಾಲಾಗಿದ್ದ ಅಬ್ದುಲ್ ರೆಹಮಾನ್ ಎಂಬ ಕೈದಿಯನ್ನು ಹರ್ಯಾಣದ ಫರೀದಾಬಾದ್ ಜೈಲಿನಲ್ಲಿ ಕಾಶ್ಮೀರ ಮೂಲದ ಸಹ ಕೈದಿಯೊಬ್ಬ ಕೊಲೆ ಮಾಡಿರುವ ಘಟನೆ ನಡೆದಿದೆ.
ಉತ್ತರ ಪ್ರದೇಶದ ಫೈಜಾಬಾದ್ ಜಿಲ್ಲೆಯ ಮಿಲ್ಕಿಪುರ್ ನಿವಾಸಿಯಾಗಿದ್ದ ಅಬ್ದುಲ್ ರೆಹಮಾನ್(20)ನನ್ನು 2025ರ ಮಾರ್ಚ್ 2ರಂದು ಹರಿಯಾಣದ ಫರೀದಾಬಾದ್ ಜಿಲ್ಲೆಯ ಪಾಲಿ ಎಂಬ ಗ್ರಾಮದಲ್ಲಿ ಗುಜರಾತ್ ಎಟಿಎಸ್ ಮತ್ತು ಹರ್ಯಾಣ ಎಸ್ ಟಿಎಫ್ ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿತ್ತು. ಆತನಲ್ಲಿದ್ದ ಎರಡು ಹ್ಯಾಂಡ್ ಗ್ರೆನೇಡ್ ಗಳನ್ನು ಬಾಂಬ್ ಸ್ಕ್ವಾಡ್ ವಶಕ್ಕೆ ಪಡೆದು ನಿಷ್ಕ್ರಿಯಗೊಳಿಸಿತ್ತು. ಆರೋಪಿಯನ್ನು ಬಳಿಕ ಫರೀದಬಾದ್ ಜಿಲ್ಲಾ ಜೈಲಿನಲ್ಲಿ ಇರಿಸಲಾಗಿತ್ತು. ನಕಲಿ ಐಡಿಯೊಂದಿಗೆ ಫರಿದಾಬಾದ್ ಹೊರವಲಯದಲ್ಲಿ ನೆಲೆಸಿದ್ದ ರೆಹಮಾನ್ ತೋರಿಕೆಗೆ ಆಟೋ ಚಾಲಕನಾಗಿದ್ದು ಸ್ಥಳೀಯರೊಂದಿಗೆ ಬೆರೆತು ರಾಮ ಮಂದಿರ ವಿರುದ್ಧ ದಾಳಿಗೆ ಷಡ್ಯಂತ್ರ ನಡೆಸುತ್ತಿದ್ದ ಎಂಬ ಆರೋಪದಲ್ಲಿ ಬಂಧಿಸಲಾಗಿತ್ತು. ಪಾಕಿಸ್ತಾನದ ಐಎಸ್ಐ ಪ್ರೇರಣೆಯಿಂದ ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಎನ್ನಲಾಗಿತ್ತು.
ಭಾನುವಾರ ರಾತ್ರಿ ಜೈಲಿನಲ್ಲಿ ಕೈದಿಗಳ ನಡುವೆ ಜಗಳ ನಡೆದಿತ್ತು. ಸೋಮವಾರ ನಸುಕಿನ ಜಾವ ಎರಡು ಗಂಟೆ ಸುಮಾರಿಗೆವ ಸಹ ಕೈದಿಯಾಗಿದ್ದ ಅರುಣ್ ಚೌಧರಿ ಎಂಬಾತ, ಮಲಗಿದ್ದ ಅಬ್ದುಲ್ ರೆಹಮಾನ್ ಮೇಲೆ ಚೂಪಾದ ವಸ್ತುವಿನಿಂದ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಗಂಭೀರ ಗಾಯಗೊಂಡ ರೆಹಮಾನ್ನನ್ನು ಆಸ್ಪತ್ರೆಗೆ ಕರೆದೊಯ್ದಿದ್ದು ಅಲ್ಲಿ ಆತ ಮೃತಪಟ್ಟಿದ್ದ. ಆರೋಪಿ ಅರುಣ್ ಚೌಧರಿ ವಿರುದ್ಧ ಕೊಲೆ, ಕೊಲೆಯತ್ನ ಸೇರಿದಂತೆ ಹಲವು ಪ್ರಕರಣಗಳಿದ್ದು 2024ರಲ್ಲಿ ಫರಿದಾಬಾದ್ ಜೈಲಿಗೆ ಸ್ಥಳಾಂತರಿಸಲಾಗಿತ್ತು.
ಆರೋಪಿ ಅರುಣ್ ಚೌಧರಿ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದ್ದು, ಉನ್ನತ ಮಟ್ಟದ ತನಿಖೆ ಮತ್ತು ಜೈಲು ಭದ್ರತಾ ವ್ಯವಸ್ಥೆಗಳ ಪರಿಶೀಲನೆಗೆ ಆದೇಶಿಸಲಾಗಿದೆ ಎಂದು ಎಸಿಪಿ ಅಶೋಕ್ ವರ್ಮಾ ತಿಳಿಸಿದ್ದಾರೆ. ಮೂವರು ಕೈದಿಗಳನ್ನು ಒಂದೇ ಸೆಲ್ನಲ್ಲಿ ಇರಿಸಲಾಗಿತ್ತು. ಅರುಣ್ ಚೌಧರಿ, ಅಬ್ದುಲ್ ರೆಹಮಾನ್ ಹಾಗೂ ಶೋಯೆಬ್ ಅವರನ್ನು ಹೆಚ್ಚು ಭದ್ರತೆಯಿರುವ ಸೆಲ್ನಲ್ಲಿ ಇರಿಸಲಾಗಿತ್ತು. ಇವರು ಇಪ್ಪತ್ತು ದಿನಗಳಿಂದ ಒಂದೇ ಸೆಲ್ ನಲ್ಲಿ ಒಟ್ಟಿಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
Abdul Rehman (20), arrested in 2025 for allegedly plotting an attack on the Ayodhya Ram Temple, was killed by a fellow inmate inside Faridabad district jail. The accused, identified as Arun Chaudhary, reportedly attacked Rehman with a sharp object during the early hours following a dispute between inmates. Police have registered a murder case and ordered a high-level probe into the incident and jail security arrangements.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm