ಬ್ರೇಕಿಂಗ್ ನ್ಯೂಸ್
12-02-26 01:09 pm HK News Desk ದೇಶ - ವಿದೇಶ
ನವದೆಹಲಿ, ಫೆ 11 : ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತ ಚರ್ಚೆ ಮತ್ತೆ ಚುರುಕುಗೊಂಡಿದೆ. ಉಪಮುಖ್ಯಮಂತ್ರಿ ಡಿ.ಕೆ. ದೆಹಲಿಯಲ್ಲಿ ಬೀಡುಬಿಟ್ಟು, ಎಐಸಿಸಿ ವರಿಷ್ಠೆ ಸೋನಿಯಾ ಗಾಂಧಿ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿರುವುದು ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದೆ.
ಡಿಕೆ ಶಿವಕುಮಾರ್ ತಮ್ಮ ಸಹೋದರ ಡಿ.ಕೆ. ಸುರೇಶ್ ಅವರೊಂದಿಗೆ ಸೋನಿಯಾ ಗಾಂಧಿ ನಿವಾಸಕ್ಕೆ ತೆರಳಿ ಚರ್ಚೆ ನಡೆಸಿದರು. ಈ ವೇಳೆ ರಾಹುಲ್ ಗಾಂಧಿ ಕೂಡ ಉಪಸ್ಥಿತರಿದ್ದರು ಎನ್ನಲಾಗಿದೆ. ಬಹುಕಾಲದಿಂದ ಬಾಕಿ ಉಳಿದಿರುವ ಅಧಿಕಾರ ಹಂಚಿಕೆ ಸೂತ್ರ ಕುರಿತಂತೆ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆದಿರುವ ಮಾಹಿತಿ ಲಭ್ಯವಾಗಿದೆ. ತಮ್ಮ ಮನದ ಇಂಗಿತವನ್ನು ಡಿಕೆಶಿ ಹೈಕಮಾಂಡ್ ಮುಂದೆ ಸ್ಪಷ್ಟವಾಗಿ ಮಂಡಿಸಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಹರಿದಾಡುತ್ತಿವೆ.
ಸೋನಿಯಾ-ರಾಹುಲ್ ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ತಮ್ಮ ಮಾತಿನಲ್ಲಿ ನಿಗೂಢತೆಯನ್ನು ಕಾಯ್ದುಕೊಂಡರು. “ದೆಹಲಿಗೆ ಬಂದ ಮೇಲೆ ಎಲ್ಲ ವಿಚಾರಗಳನ್ನೂ ಮಾತನಾಡಬೇಕು, ಅದನ್ನ ಮಾತನಾಡಿದ್ದೀನಿ. ಆದರೆ ಯಾರ್ಯಾರ ಜೊತೆ ಏನು ಮಾತನಾಡಿದೆ ಅಂತ ಬಹಿರಂಗವಾಗಿ ಹೇಳೋಕೆ ಆಗಲ್ಲ. ಒಳಗಿನ ಚರ್ಚೆಯನ್ನು ಹೊರಗೆ ಹೇಳುವುದು ಸರಿಯಲ್ಲ,” ಎಂದರು.
ಮುಂದುವರಿದು ಮಾತನಾಡಿದ ಡಿಕೆಶಿ, “ನಾನು ಇಲ್ಲಿಗೆ ಬಂದಿರೋದು ರಾಜಕಾರಣ ಮಾಡೋಕೆ, ಸುಮ್ಮನೆ ಗಾಳಿ ಕುಡಿಯೋಕೆ ಬಂದಿಲ್ಲ. ವರಿಷ್ಠರ ಬಳಿ ಏನು ಮಾತನಾಡಬೇಕೋ ಅದನ್ನ ಮಾತನಾಡಿದ್ದೀನಿ. ಎಲ್ಲದಕ್ಕೂ ಕಾಲ ಉತ್ತರ ಕೊಡುತ್ತೆ,” ಎಂದು ಹೇಳುವ ಮೂಲಕ ಕುರ್ಚಿ ಕದನದ ಬಗ್ಗೆ ಪರೋಕ್ಷ ಸುಳಿವು ನೀಡಿದರು.
ಡಿಕೆಶಿ ಪ್ರಸ್ತಾಪಕ್ಕೆ ಸೋನಿಯಾ ಮತ್ತು ರಾಹುಲ್ ಗಾಂಧಿ ಏನು ಪ್ರತಿಕ್ರಿಯೆ ನೀಡಿದ್ದಾರೆ? ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಯಾವುದೇ ಸಂದೇಶ ರವಾನೆಯಾಗಿದೆವಾ? ಅಥವಾ ಸದ್ಯಕ್ಕೆ ಯಥಾಸ್ಥಿತಿ ಮುಂದುವರಿಸಲು ಸೂಚನೆ ನೀಡಲಾಗಿದೆವಾ? ಎಂಬುದು ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದೆ.
ಡಿಕೆಶಿ ಅವರ “ರಾಜಕಾರಣ ಮಾಡೋಕೆ ಬಂದಿದ್ದೀನಿ” ಎಂಬ ಹೇಳಿಕೆ, ರಾಜ್ಯ ಕಾಂಗ್ರೆಸ್ನಲ್ಲಿ ಮತ್ತೆ ನಾಯಕತ್ವ ಬದಲಾವಣೆಯ ಚರ್ಚೆಗೆ ಇಂಧನ ತುಂಬಿದಂತಾಗಿದೆ. ದೆಹಲಿ ದರ್ಬಾರಿನ ಈ ಭೇಟಿ ಕರ್ನಾಟಕ ರಾಜಕೀಯಕ್ಕೆ ಯಾವ ದಿಕ್ಕು ತೋರಿಸಲಿದೆ ಎಂಬುದು ಮುಂದಿನ ದಿನಗಳಲ್ಲಿ ಸ್ಪಷ್ಟವಾಗಲಿದೆ.
Karnataka Deputy CM D.K. Shivakumar’s meeting with Sonia and Rahul Gandhi in Delhi has reignited leadership change buzz in the state Congress. Saying he came “to do politics, not just breathe air,” DKS hinted at key internal discussions, fueling speculation over a possible power shift.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm