ಬ್ರೇಕಿಂಗ್ ನ್ಯೂಸ್
12-02-26 01:40 pm HK News Desk ದೇಶ - ವಿದೇಶ
ನವದೆಹಲಿ, ಫೆ.12 : ಜೂನ್ 2025ರಲ್ಲಿ ಅಹಮದಾಬಾದ್ ಏರ್ಪೋರ್ಟ್ನಿಂದ ಟೇಕಾಫ್ ಆದ ಏರ್ ಇಂಡಿಯಾ ಬೋಯಿಂಗ್ 787 ಡ್ರೀಮ್ ಲೈನರ್ ವಿಮಾನವು ಕೆಲವೇ ಸೆಕೆಂಡುಗಳಲ್ಲಿ ಪತನಗೊಂಡಿತ್ತು. ವಿಮಾನ ಹಾಸ್ಟೆಲ್ ಮೇಲೆ ಪತನಗೊಂಡಿದ್ದರಿಂದ ವಿಮಾನ ಪ್ರಯಾಣಿಕರು ಹಾಗೂ ಹಾಸ್ಟೆಲ್ನಲ್ಲಿ ಇರುವ ವಿದ್ಯಾರ್ಥಿಗಳು ಸೇರಿ ಒಟ್ಟು 260 ಜನರ ಜೀವ ಹಾನಿಯಾಗಿತ್ತು. ವಿಮಾನದಲ್ಲಿದ್ದ ಓರ್ವ ಪ್ರಯಾಣಿಕ ಮಾತ್ರ ಪವಾಡ ಸದೃಶ ರೀತಿ ಬದುಕುಳಿದಿದ್ದರು.
ಘಟನೆ ನಡೆದು ಒಂಬತ್ತು ತಿಂಗಳು ಕಳೆದಿದ್ದರೂ ಘಟನೆಗೆ ನಿಖರ ಕಾರಣ ಏನು ಎಂಬುದು ಮಾತ್ರ ತಿಳಿದುಬಂದಿಲ್ಲ. ಇದೀಗ ಭಾರತದ ವಿಮಾನ ಅಪಘಾತ ತನಿಖಾ ಬ್ಯೂರೋ (AAIB) ಪ್ರಾಥಮಿಕ ವರದಿ ಮತ್ತು ಇಟಾಲಿಯನ್ ದಿನಪತ್ರಿಕೆ Corriere della Sera ವರದಿ ಅನ್ವಯ, ಈ ಪತನ ತಾಂತ್ರಿಕ ದೋಷದಿಂದ ಉಂಟಾಗಿಲ್ಲ, ಬದಲಾಗಿ ಉದ್ದೇಶಪೂರ್ವಕ ಕೃತ್ಯ ಆಗಿರಬಹುದೆಂದು ತನಿಖಾಧಿಕಾರಿಗಳು ಶಂಕಿಸಿದ್ದಾರೆ.
AAIB ವರದಿ ಪೈಲಟ್ಗಳ ಕಾಕ್ಪಿಟ್ ಸಂಭಾಷಣೆಗಳನ್ನು ಒಳಗೊಂಡಿದ್ದು, ಓರ್ವ ಪೈಲಟ್ "ಯಾಕೆ ಇಂಧನ ಸ್ಥಗಿತಗೊಳಿಸಿದ್ದೀರಾ?" ಎಂದು ಕೇಳಿದರೆ, ಇನ್ನೊಬ್ಬ ಉತ್ತರವಾಗಿ "ನಾನು ಹಾಗೆ ಮಾಡಿಲ್ಲ" ಎಂದು ಪ್ರತಿಕ್ರಿಯಿಸಿದ್ದರು. ಈ ಸಂಭಾಷಣೆಗಳು ಪತನದ ಹಿನ್ನೆಲೆ ಕುರಿತು ಉದ್ದೇಶಪೂರ್ವಕ ಕೃತ್ಯದ ಬಗ್ಗೆ ಅನುಮಾನ ಹುಟ್ಟಿಸಿದೆ.
ವಿಮಾನವು ಇಂಜಿನ್ಗೆ ಇಂಧನ ಪೂರೈಕೆ ಸ್ಥಗಿತಗೊಳ್ಳುವುದರಿಂದ ಪತನಗೊಂಡಿದೆ, ಆದರೆ ಯಾವುದೇ ತಾಂತ್ರಿಕ ದೋಷ ಕಾರಣವಾಗಿಲ್ಲ ಎಂದು ಭಾರತೀಯ ತನಿಖಾಧಿಕಾರಿಗಳು ನಿರ್ಣಯಿಸಿದ್ದಾರೆ. ಭಾರತದ ತಂಡದೊಂದಿಗೆ ಅಮೆರಿಕದ ತಜ್ಞರು ಸಹಾಯ ನೀಡುತ್ತಿದ್ದಾರೆ.
ತನಿಖಾಧಿಕಾರಿಗಳು ಅಂತಿಮ ನಿರ್ಣಯಕ್ಕೆ ಬರಲು ಸಮಯ ಬೇಕಾಗಿದ್ದು, ಈ ಬಗ್ಗೆ ತಜ್ಞರ ಜೊತೆಗೆ ಚರ್ಚೆಗಳು ನಡೆಯುತ್ತಿವೆ. ಪತನದ ವೇಳೆಯ ಕೊನೆಯ ಮಾತುಕತೆಗಳು, ತಾಂತ್ರಿಕ ವೈಫಲ್ಯಗಳು, ಉದ್ದೇಶಪೂರ್ವಕ ಕೃತ್ಯದ ಸಾಧ್ಯತೆ ಕುರಿತಾಗಿ ಅಂತಿಮ ವರದಿಯೊಂದಿಗೆ ಸ್ಪಷ್ಟನೆ ಸಿಗಲಿದೆ.
The 2025 Ahmedabad Air India Dreamliner crash that claimed 260 lives may have been caused by fuel supply being cut off, not a technical failure, according to preliminary findings. Cockpit voice recordings have raised suspicions of possible deliberate action, though investigators say the final conclusion is yet to be made.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm