ಬ್ರೇಕಿಂಗ್ ನ್ಯೂಸ್
12-02-26 01:40 pm HK News Desk ದೇಶ - ವಿದೇಶ
ನವದೆಹಲಿ, ಫೆ.12 : ಜೂನ್ 2025ರಲ್ಲಿ ಅಹಮದಾಬಾದ್ ಏರ್ಪೋರ್ಟ್ನಿಂದ ಟೇಕಾಫ್ ಆದ ಏರ್ ಇಂಡಿಯಾ ಬೋಯಿಂಗ್ 787 ಡ್ರೀಮ್ ಲೈನರ್ ವಿಮಾನವು ಕೆಲವೇ ಸೆಕೆಂಡುಗಳಲ್ಲಿ ಪತನಗೊಂಡಿತ್ತು. ವಿಮಾನ ಹಾಸ್ಟೆಲ್ ಮೇಲೆ ಪತನಗೊಂಡಿದ್ದರಿಂದ ವಿಮಾನ ಪ್ರಯಾಣಿಕರು ಹಾಗೂ ಹಾಸ್ಟೆಲ್ನಲ್ಲಿ ಇರುವ ವಿದ್ಯಾರ್ಥಿಗಳು ಸೇರಿ ಒಟ್ಟು 260 ಜನರ ಜೀವ ಹಾನಿಯಾಗಿತ್ತು. ವಿಮಾನದಲ್ಲಿದ್ದ ಓರ್ವ ಪ್ರಯಾಣಿಕ ಮಾತ್ರ ಪವಾಡ ಸದೃಶ ರೀತಿ ಬದುಕುಳಿದಿದ್ದರು.
ಘಟನೆ ನಡೆದು ಒಂಬತ್ತು ತಿಂಗಳು ಕಳೆದಿದ್ದರೂ ಘಟನೆಗೆ ನಿಖರ ಕಾರಣ ಏನು ಎಂಬುದು ಮಾತ್ರ ತಿಳಿದುಬಂದಿಲ್ಲ. ಇದೀಗ ಭಾರತದ ವಿಮಾನ ಅಪಘಾತ ತನಿಖಾ ಬ್ಯೂರೋ (AAIB) ಪ್ರಾಥಮಿಕ ವರದಿ ಮತ್ತು ಇಟಾಲಿಯನ್ ದಿನಪತ್ರಿಕೆ Corriere della Sera ವರದಿ ಅನ್ವಯ, ಈ ಪತನ ತಾಂತ್ರಿಕ ದೋಷದಿಂದ ಉಂಟಾಗಿಲ್ಲ, ಬದಲಾಗಿ ಉದ್ದೇಶಪೂರ್ವಕ ಕೃತ್ಯ ಆಗಿರಬಹುದೆಂದು ತನಿಖಾಧಿಕಾರಿಗಳು ಶಂಕಿಸಿದ್ದಾರೆ.
AAIB ವರದಿ ಪೈಲಟ್ಗಳ ಕಾಕ್ಪಿಟ್ ಸಂಭಾಷಣೆಗಳನ್ನು ಒಳಗೊಂಡಿದ್ದು, ಓರ್ವ ಪೈಲಟ್ "ಯಾಕೆ ಇಂಧನ ಸ್ಥಗಿತಗೊಳಿಸಿದ್ದೀರಾ?" ಎಂದು ಕೇಳಿದರೆ, ಇನ್ನೊಬ್ಬ ಉತ್ತರವಾಗಿ "ನಾನು ಹಾಗೆ ಮಾಡಿಲ್ಲ" ಎಂದು ಪ್ರತಿಕ್ರಿಯಿಸಿದ್ದರು. ಈ ಸಂಭಾಷಣೆಗಳು ಪತನದ ಹಿನ್ನೆಲೆ ಕುರಿತು ಉದ್ದೇಶಪೂರ್ವಕ ಕೃತ್ಯದ ಬಗ್ಗೆ ಅನುಮಾನ ಹುಟ್ಟಿಸಿದೆ.
ವಿಮಾನವು ಇಂಜಿನ್ಗೆ ಇಂಧನ ಪೂರೈಕೆ ಸ್ಥಗಿತಗೊಳ್ಳುವುದರಿಂದ ಪತನಗೊಂಡಿದೆ, ಆದರೆ ಯಾವುದೇ ತಾಂತ್ರಿಕ ದೋಷ ಕಾರಣವಾಗಿಲ್ಲ ಎಂದು ಭಾರತೀಯ ತನಿಖಾಧಿಕಾರಿಗಳು ನಿರ್ಣಯಿಸಿದ್ದಾರೆ. ಭಾರತದ ತಂಡದೊಂದಿಗೆ ಅಮೆರಿಕದ ತಜ್ಞರು ಸಹಾಯ ನೀಡುತ್ತಿದ್ದಾರೆ.
ತನಿಖಾಧಿಕಾರಿಗಳು ಅಂತಿಮ ನಿರ್ಣಯಕ್ಕೆ ಬರಲು ಸಮಯ ಬೇಕಾಗಿದ್ದು, ಈ ಬಗ್ಗೆ ತಜ್ಞರ ಜೊತೆಗೆ ಚರ್ಚೆಗಳು ನಡೆಯುತ್ತಿವೆ. ಪತನದ ವೇಳೆಯ ಕೊನೆಯ ಮಾತುಕತೆಗಳು, ತಾಂತ್ರಿಕ ವೈಫಲ್ಯಗಳು, ಉದ್ದೇಶಪೂರ್ವಕ ಕೃತ್ಯದ ಸಾಧ್ಯತೆ ಕುರಿತಾಗಿ ಅಂತಿಮ ವರದಿಯೊಂದಿಗೆ ಸ್ಪಷ್ಟನೆ ಸಿಗಲಿದೆ.
The 2025 Ahmedabad Air India Dreamliner crash that claimed 260 lives may have been caused by fuel supply being cut off, not a technical failure, according to preliminary findings. Cockpit voice recordings have raised suspicions of possible deliberate action, though investigators say the final conclusion is yet to be made.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am